<p><strong>ಕನಕಪುರ</strong>: ತಾಲ್ಲೂಕಿನ ಈಶ್ವರ ಮತ್ತು ಮಹದೇಶ್ವರ ದೇವಾಲಯಗಳಲ್ಲಿ ಭಾನುವಾರ ಮಹಾಶಿವರಾತ್ರಿ ಆಚರಣೆ ಮತ್ತು ರಾತ್ರಿ ಜಾಗರಣೆ, ಧಾರ್ಮಿಕ ವಿಧಿ, ವಿಧಾಣಗಳು ಶ್ರದ್ಧೆ ಮತ್ತು ಭಕ್ತಿಯಿಂದ ಜರುಗಿದವು.</p>.<p>ಇತಿಹಾಸ ಪ್ರಸಿದ್ಧ ಹಿರಿ ಮಡಿವಾಳದ ಶಿವನಾಂಕರೇಶ್ವರ, ಶಿವಗಿರಿ ಬೆಟ್ಟದ ಶಿವಾಲದಪ್ಪ, ಬಟ್ಟಲು ಗುಂಡಪ್ಪ ಬೆಟ್ಟದ ಬಟ್ಟಲಗುಂಡೇಶ್ವರ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆ ಮತ್ತು ಜಾಗರಣೆ ತುಂಬಾ ವಿಶೇಷವಾಗಿ ನಡೆಯಿತು.</p>.<p>ಶಿವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ದೇವಾಲಯವನ್ನು ಶುದ್ಧಗೊಳಿಸಿ ಫಲಪುಷ್ಪ, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.</p>.<p>ಭಾನುವಾರ ಬೆಳಗ್ಗೆ ಶಿವಲಿಂಗ, ಶಿವನ ಮೂರ್ತಿಗಳಿಗೆ ಚಿನ್ನಾಭರಣ ತೊಡಿಸಿ ಅಲಂಕಾರ ಮಾಡಲಾಗಿತ್ತು. ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು, ರಾತ್ರಿ ಜಾಗರಣೆ ಮಾಡಲು ನಾಟಕ, ಜಾನಪದ ಗಾಯನ ಕಾರ್ಯಕ್ರಮ ನಡೆಸಲಾಯಿತು.</p>.<p>ಮಡಿವಾಳದ ಶಿವನಾಂಕಾರೇಶ್ವರ ದೇವಾಲಯ ಮತ್ತು ಶಿವಾಲ್ದಪ್ಪನ ಬೆಟ್ಟದ ಶಿವಗಿರಿ ಕ್ಷೇತ್ರಕ್ಕೆ ಜಾತ್ರೆಗೆ ಬಸ್ ವ್ಯವಸ್ಥೆ ಮಾಡಲಾಗಿತ್ತು.</p>.<p>ಬೆಳಗ್ಗೆಯಿಂದಲೇ ಸಾವಿರಾರು ಜನರು ಕ್ಷೇತ್ರಗಳಿಗೆ ಭೇಟಿ ನೀಡಿ ದರ್ಶನ ಪಡೆದು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ಶಿವಗಿರಿ ಮತ್ತು ಮಡಿವಾಳದಲ್ಲಿ ಮಧ್ಯಾಹ್ನದ ವೇಳೆಗೆ ರಥೋತ್ಸವ ಜರುಗಿತು.</p>.<p>ನಿರಂತರವಾಗಿ ಅನ್ನ ದಾಸೋಹ ನಡೆಯಿತು. ಹರಕೆ ಹೊತ್ತ ಭಕ್ತರು ಮಜ್ಜಿಗೆ, ಪಾನಕ, ಕೋಸಂಬರಿ, ಕುಡಿಯುವ ನೀರಿನ ಅರವಟ್ಟಿಗೆ ಸ್ಥಾಪಿಸಿ ಜನರಿಗೆ ವಿತರಿಸಿದರು.</p>.<p>ಈಶ್ವರ ಮತ್ತು ಮಹದೇಶ್ವರ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆ ತುಂಬಾ ಯಶಸ್ವಿಯಾಗಿ ನಡೆಯಿತು. ಶಿವನ ದೇವಾಲಯಗಳ ದರ್ಶನ ಪಡೆದು ಭಕ್ತರು ಶ್ರದ್ಧಾ, ಭಕ್ತಿಯಿಂದ ಶಿವನಾಮಸ್ಮರಣೆ ಮಾಡಿದರು.</p>.<p>ಮಳಗಾಳಿನ ಮಹದೇಶ್ವರ, ಅರಳಾಳು ಮಾದೇಶ್ವರ ಮಹದೇಶ್ವರ ಬಡಾವಣೆಯ ಮಹದೇಶ್ವರ, ಸಾತನೂರಿನ ಮಹದೇಶ್ವರ ದೇವಾಲಯ ಸೇರಿದಂತೆ ಹಲವು ಗ್ರಾಮಗಳ ದೇವಾಲಯಗಳಲ್ಲಿ ಮಹಾಶಿವರಾತ್ರಿಯನ್ನು ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ತಾಲ್ಲೂಕಿನ ಈಶ್ವರ ಮತ್ತು ಮಹದೇಶ್ವರ ದೇವಾಲಯಗಳಲ್ಲಿ ಭಾನುವಾರ ಮಹಾಶಿವರಾತ್ರಿ ಆಚರಣೆ ಮತ್ತು ರಾತ್ರಿ ಜಾಗರಣೆ, ಧಾರ್ಮಿಕ ವಿಧಿ, ವಿಧಾಣಗಳು ಶ್ರದ್ಧೆ ಮತ್ತು ಭಕ್ತಿಯಿಂದ ಜರುಗಿದವು.</p>.<p>ಇತಿಹಾಸ ಪ್ರಸಿದ್ಧ ಹಿರಿ ಮಡಿವಾಳದ ಶಿವನಾಂಕರೇಶ್ವರ, ಶಿವಗಿರಿ ಬೆಟ್ಟದ ಶಿವಾಲದಪ್ಪ, ಬಟ್ಟಲು ಗುಂಡಪ್ಪ ಬೆಟ್ಟದ ಬಟ್ಟಲಗುಂಡೇಶ್ವರ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆ ಮತ್ತು ಜಾಗರಣೆ ತುಂಬಾ ವಿಶೇಷವಾಗಿ ನಡೆಯಿತು.</p>.<p>ಶಿವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ದೇವಾಲಯವನ್ನು ಶುದ್ಧಗೊಳಿಸಿ ಫಲಪುಷ್ಪ, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.</p>.<p>ಭಾನುವಾರ ಬೆಳಗ್ಗೆ ಶಿವಲಿಂಗ, ಶಿವನ ಮೂರ್ತಿಗಳಿಗೆ ಚಿನ್ನಾಭರಣ ತೊಡಿಸಿ ಅಲಂಕಾರ ಮಾಡಲಾಗಿತ್ತು. ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು, ರಾತ್ರಿ ಜಾಗರಣೆ ಮಾಡಲು ನಾಟಕ, ಜಾನಪದ ಗಾಯನ ಕಾರ್ಯಕ್ರಮ ನಡೆಸಲಾಯಿತು.</p>.<p>ಮಡಿವಾಳದ ಶಿವನಾಂಕಾರೇಶ್ವರ ದೇವಾಲಯ ಮತ್ತು ಶಿವಾಲ್ದಪ್ಪನ ಬೆಟ್ಟದ ಶಿವಗಿರಿ ಕ್ಷೇತ್ರಕ್ಕೆ ಜಾತ್ರೆಗೆ ಬಸ್ ವ್ಯವಸ್ಥೆ ಮಾಡಲಾಗಿತ್ತು.</p>.<p>ಬೆಳಗ್ಗೆಯಿಂದಲೇ ಸಾವಿರಾರು ಜನರು ಕ್ಷೇತ್ರಗಳಿಗೆ ಭೇಟಿ ನೀಡಿ ದರ್ಶನ ಪಡೆದು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ಶಿವಗಿರಿ ಮತ್ತು ಮಡಿವಾಳದಲ್ಲಿ ಮಧ್ಯಾಹ್ನದ ವೇಳೆಗೆ ರಥೋತ್ಸವ ಜರುಗಿತು.</p>.<p>ನಿರಂತರವಾಗಿ ಅನ್ನ ದಾಸೋಹ ನಡೆಯಿತು. ಹರಕೆ ಹೊತ್ತ ಭಕ್ತರು ಮಜ್ಜಿಗೆ, ಪಾನಕ, ಕೋಸಂಬರಿ, ಕುಡಿಯುವ ನೀರಿನ ಅರವಟ್ಟಿಗೆ ಸ್ಥಾಪಿಸಿ ಜನರಿಗೆ ವಿತರಿಸಿದರು.</p>.<p>ಈಶ್ವರ ಮತ್ತು ಮಹದೇಶ್ವರ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆ ತುಂಬಾ ಯಶಸ್ವಿಯಾಗಿ ನಡೆಯಿತು. ಶಿವನ ದೇವಾಲಯಗಳ ದರ್ಶನ ಪಡೆದು ಭಕ್ತರು ಶ್ರದ್ಧಾ, ಭಕ್ತಿಯಿಂದ ಶಿವನಾಮಸ್ಮರಣೆ ಮಾಡಿದರು.</p>.<p>ಮಳಗಾಳಿನ ಮಹದೇಶ್ವರ, ಅರಳಾಳು ಮಾದೇಶ್ವರ ಮಹದೇಶ್ವರ ಬಡಾವಣೆಯ ಮಹದೇಶ್ವರ, ಸಾತನೂರಿನ ಮಹದೇಶ್ವರ ದೇವಾಲಯ ಸೇರಿದಂತೆ ಹಲವು ಗ್ರಾಮಗಳ ದೇವಾಲಯಗಳಲ್ಲಿ ಮಹಾಶಿವರಾತ್ರಿಯನ್ನು ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>