<p>ಕನಕಪುರ: ತಾಲ್ಲೂಕಿನ ಬರಡನಹಳ್ಳಿಯಲ್ಲಿ ನಿರ್ಮಾಣವಾಗಿರುವ ನವೋದಯ ಶಾಲೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ₹6 ಕೋಟಿ ವೆಚ್ಚದ ಕಾಂಕ್ರೀಟ್ ಕಾಮಗಾರಿಗೆ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ರವಿ ಗುರುವಾರ ಚಾಲನೆ ನೀಡಿದರು.</p>.<p>ಬರಡನಹಳ್ಳಿಯಲ್ಲಿ ನವೋದಯ ಶಾಲೆಗೆ 30 ಎಕರೆ ಜಮೀನು ಮಂಜೂರಾಗಿದ್ದು, ₹40 ಕೋಟಿ ವೆಚ್ಚದಲ್ಲಿ ನಾಲ್ಕೈದು ವರ್ಷಗಳಿಂದ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಶಾಲಾ ಕಟ್ಟಡ ಪೂರ್ಣಗೊಂಡಿದ್ದು ಉದ್ಘಾಟನೆ ಹಂತಕ್ಕೆ ಬಂದಿದೆ. ಈ ಬಾರಿ ಇಲ್ಲಿಯೇ ಶಾಲೆ ಪ್ರಾರಂಭ ಆಗಬೇಕಿರುವುದರಿಂದ ಚಾಕನಹಳ್ಳಿ ಮುಖ್ಯರಸ್ತೆ ಮತ್ತು ದೇಗುಲ ಮಠದ ಹೊಸ ಸೇತುವೆ ಕಡೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಗಳು ಅಭಿವೃದ್ಧಿ ಆಗಿರಲಿಲ್ಲ. ಕಾವೇರಿ ನೀರಾವರಿ ನಿಗಮದಿಂದ 3.5 ಕಿ.ಮೀ ರಸ್ತೆ ಅಭಿವೃದ್ಧಿಗೆ ₹6 ಕೋಟಿ ಅನುದಾನ ಬಿಡುಗಡೆಯಾಗಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಚಾಲನೆ ನೀಡಲಾಯಿತು.</p>.<p>ನಂತರ ಮಾತನಾಡಿದ ಡಿ.ಕೆ. ಸುರೇಶ್, ಎಂಟು ವರ್ಷಗಳ ಹಿಂದೆ ನವೋದಯ ಶಾಲೆ ತಾಲ್ಲೂಕಿನಲ್ಲಿ ಖಾಸಗಿ ಕಟ್ಟಡದಲ್ಲಿ ಪ್ರಾರಂಭವಾಯಿತು. ಡಿಕೆಎಸ್ ಟ್ರಸ್ಟ್ನಿಂದ ತಿಂಗಳಿಗೆ ₹1 ಲಕ್ಷ ಬಾಡಿಗೆ ನೀಡಲಾಗುತ್ತಿದೆ. ಈಗ 30 ಎಕರೆ ಜಾಗ ಮಂಜೂರಾಗಿದ್ದು, ಡಿ.ಕೆ. ಶಿವಕುಮಾರ್ ಸಹಕಾರದಿಂದ ಎಸ್. ರವಿ ನೇತೃತ್ವದಲ್ಲಿ ಕಟ್ಟಡ ನಿರ್ಮಾಣಕ್ಕೆ ₹40 ಕೋಟಿ, ರಸ್ತೆ ಅಭಿವೃದ್ಧಿಗೆ ₹6 ಕೋಟಿ ಬಿಡುಗಡೆಯಾಗಿದೆ ಎಂದು ಹೇಳಿದರು.</p>.<p>ಒಳ್ಳೆಯ ಪರಿಸರದಲ್ಲಿ ನವೋದಯ ಶಾಲೆ ಇದೆ. ಆದರೆ ಸಂಪರ್ಕ ರಸ್ತೆ ಶೀಘ್ರ ಅಭಿವೃದ್ಧಿಯಾಗಲಿದೆ. ಈ ವರ್ಷದಿಂದಲೇ ಇಲ್ಲಿ ಶಾಲೆ ನಡೆಯಲಿದೆ ಎಂದರು.</p>.<p>ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ನಾರಾಯಣಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್, ಉಪಾಧ್ಯಕ್ಷ ಮೂರ್ತಿ, ವೆಂಕಟೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜು, ಬರಡನಹಳ್ಳಿ ಗ್ರಾಮಸ್ಥರು, ಚಾಕನಹಳ್ಳಿ, ಬೂದಿಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-14-2120812726</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ತಾಲ್ಲೂಕಿನ ಬರಡನಹಳ್ಳಿಯಲ್ಲಿ ನಿರ್ಮಾಣವಾಗಿರುವ ನವೋದಯ ಶಾಲೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ₹6 ಕೋಟಿ ವೆಚ್ಚದ ಕಾಂಕ್ರೀಟ್ ಕಾಮಗಾರಿಗೆ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ರವಿ ಗುರುವಾರ ಚಾಲನೆ ನೀಡಿದರು.</p>.<p>ಬರಡನಹಳ್ಳಿಯಲ್ಲಿ ನವೋದಯ ಶಾಲೆಗೆ 30 ಎಕರೆ ಜಮೀನು ಮಂಜೂರಾಗಿದ್ದು, ₹40 ಕೋಟಿ ವೆಚ್ಚದಲ್ಲಿ ನಾಲ್ಕೈದು ವರ್ಷಗಳಿಂದ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಶಾಲಾ ಕಟ್ಟಡ ಪೂರ್ಣಗೊಂಡಿದ್ದು ಉದ್ಘಾಟನೆ ಹಂತಕ್ಕೆ ಬಂದಿದೆ. ಈ ಬಾರಿ ಇಲ್ಲಿಯೇ ಶಾಲೆ ಪ್ರಾರಂಭ ಆಗಬೇಕಿರುವುದರಿಂದ ಚಾಕನಹಳ್ಳಿ ಮುಖ್ಯರಸ್ತೆ ಮತ್ತು ದೇಗುಲ ಮಠದ ಹೊಸ ಸೇತುವೆ ಕಡೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಗಳು ಅಭಿವೃದ್ಧಿ ಆಗಿರಲಿಲ್ಲ. ಕಾವೇರಿ ನೀರಾವರಿ ನಿಗಮದಿಂದ 3.5 ಕಿ.ಮೀ ರಸ್ತೆ ಅಭಿವೃದ್ಧಿಗೆ ₹6 ಕೋಟಿ ಅನುದಾನ ಬಿಡುಗಡೆಯಾಗಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಚಾಲನೆ ನೀಡಲಾಯಿತು.</p>.<p>ನಂತರ ಮಾತನಾಡಿದ ಡಿ.ಕೆ. ಸುರೇಶ್, ಎಂಟು ವರ್ಷಗಳ ಹಿಂದೆ ನವೋದಯ ಶಾಲೆ ತಾಲ್ಲೂಕಿನಲ್ಲಿ ಖಾಸಗಿ ಕಟ್ಟಡದಲ್ಲಿ ಪ್ರಾರಂಭವಾಯಿತು. ಡಿಕೆಎಸ್ ಟ್ರಸ್ಟ್ನಿಂದ ತಿಂಗಳಿಗೆ ₹1 ಲಕ್ಷ ಬಾಡಿಗೆ ನೀಡಲಾಗುತ್ತಿದೆ. ಈಗ 30 ಎಕರೆ ಜಾಗ ಮಂಜೂರಾಗಿದ್ದು, ಡಿ.ಕೆ. ಶಿವಕುಮಾರ್ ಸಹಕಾರದಿಂದ ಎಸ್. ರವಿ ನೇತೃತ್ವದಲ್ಲಿ ಕಟ್ಟಡ ನಿರ್ಮಾಣಕ್ಕೆ ₹40 ಕೋಟಿ, ರಸ್ತೆ ಅಭಿವೃದ್ಧಿಗೆ ₹6 ಕೋಟಿ ಬಿಡುಗಡೆಯಾಗಿದೆ ಎಂದು ಹೇಳಿದರು.</p>.<p>ಒಳ್ಳೆಯ ಪರಿಸರದಲ್ಲಿ ನವೋದಯ ಶಾಲೆ ಇದೆ. ಆದರೆ ಸಂಪರ್ಕ ರಸ್ತೆ ಶೀಘ್ರ ಅಭಿವೃದ್ಧಿಯಾಗಲಿದೆ. ಈ ವರ್ಷದಿಂದಲೇ ಇಲ್ಲಿ ಶಾಲೆ ನಡೆಯಲಿದೆ ಎಂದರು.</p>.<p>ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ನಾರಾಯಣಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್, ಉಪಾಧ್ಯಕ್ಷ ಮೂರ್ತಿ, ವೆಂಕಟೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜು, ಬರಡನಹಳ್ಳಿ ಗ್ರಾಮಸ್ಥರು, ಚಾಕನಹಳ್ಳಿ, ಬೂದಿಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-14-2120812726</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>