<p><strong>ಕನಕಪುರ</strong>: ಕೆರೆ ಜಾಗ ಒತ್ತುವರಿ ಮಾಡಿ ಆಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಕೂಡಲೇ ಅದನ್ನು ಸ್ಥಗಿತಗೊಳಿಸುವಂತೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಪತಹಶೀಲ್ದಾರ್, ತಾಲ್ಲೂಕು ಮೋಜಿಣಿದಾರರು, ರಾಜಸ್ವ ನಿರೀಕ್ಷಕರು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡಸಿ, ಮಹಜರು ಮಾಡಿದರು.</p>.<p>ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ದೊಡ್ಡಕೊಪ್ಪ ಗ್ರಾಮದ ಸರ್ವೆ ನಂ. 67 ರ ಆರ್ ಟಿ ಸಿ ಯಲ್ಲಿ ಸರ್ಕಾರಿ ಕೆರೆ ಎಂದು ನಮೂದಾಗಿದ್ದು ಇದರಲ್ಲಿ 2 ಎಕರೆಯನ್ನು 2007 ರಲ್ಲಿ ಎ.ಸಿ. ಶಿವಲಿಂಗೇಗೌಡ ಎಂಬುವರಿಗೆ ಮಲ್ಟಿ ಕಲರ್ ಗ್ರಾನೆಟ್ ಗಣಿಗಾರಿಕೆಗಾಗಿ ಕಲ್ಲು ಗಣಿ ಗುತ್ತಿಗೆ ಸಂಖ್ಯೆ 793 ಎಂದು ಮಂಜೂರು ಮಾಡಿದೆ.</p>.<p>ಆದರೆ ಸರ್ವೆ ನಂ. 67 ರ ಜಮೀನು ಸರ್ಕಾರಿ ಕೆರೆಯಾಗಿದ್ದು. ಆ ಜಾಗದಲ್ಲಿಯೇ ಕಲ್ಲು ಗಣಿ ಮಾಲೀಕರು ಕೆರೆಯ ಜಾಗದಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಅರೋಪಿಸಿ ದೂರು ನೀಡಿದ್ದರು.</p>.<p>ಗಣಿಗಾರಿಕೆ ಮಾಡಲು ಗ್ರಾಮದ ಸರ್ಕಾರಿ ಕೆರೆಯನ್ನು ಮುಚ್ಚಿರುತ್ತಾರೆ. ಜೊತೆಗೆ ರಾತ್ರಿ ಹತ್ತು ಗಂಟೆಯವರೆಗೂ ಕಲ್ಲು ಗಣಿ ಸ್ಫೋಟ ಮಾಡುತ್ತಿದ್ದಾರೆ. ಇದರಿಂದ ಸುತ್ತಮುತ್ತಲ ಗ್ರಾಮಸ್ಥರು ಮನೆಯಲ್ಲಿ ವಾಸ ಮಾಡಲು ತೊಂದರೆ ಉಂಟಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ರಾಮನಗರ ಜಿಲ್ಲೆ ಭೂ ದಾಖಲೆಗಳ ಉಪ ನಿರ್ದೇಶಕರ ಆದೇಶದ ಮೇರೆಗೆ ಕೆರೆ ಸರ್ವೆ ನಡೆಸಿದಾಗ ಕೆರೆ ಜಾಗ ಒತ್ತುವರಿಯಾಗಿರುವುದು ಬೆಳಕಿಗೆ ಬಂದಿರುತ್ತದೆ. ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಕೆರೆಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.<br><br> ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ವಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸ್ಥಳೀಯ ಗ್ರಾಮಸ್ಥರಿಂದ ಮಾಹಿತಿ ಪಡೆದು ಸ್ಥಳ ಮಹಜರು ಮಾಡಿ ವರದಿ ಸಿದ್ದಪಡಿಸಿದರು.</p>.<p>ದೂರುದಾರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಉಮೇಶ್, ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್, ಮುಖಂಡರಾದ ಕಾಳ ಮಾರೇಗೌಡ, ಮಾರೇಗೌಡ, ದೀಪು, ಶ್ರೀನಿವಾಸ್, ಕುಮಾರ್, ನಾಜೀರ್ ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಸ್ಥಳ ಮಹಜರು ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಕೆರೆ ಜಾಗ ಒತ್ತುವರಿ ಮಾಡಿ ಆಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಕೂಡಲೇ ಅದನ್ನು ಸ್ಥಗಿತಗೊಳಿಸುವಂತೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಪತಹಶೀಲ್ದಾರ್, ತಾಲ್ಲೂಕು ಮೋಜಿಣಿದಾರರು, ರಾಜಸ್ವ ನಿರೀಕ್ಷಕರು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡಸಿ, ಮಹಜರು ಮಾಡಿದರು.</p>.<p>ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ದೊಡ್ಡಕೊಪ್ಪ ಗ್ರಾಮದ ಸರ್ವೆ ನಂ. 67 ರ ಆರ್ ಟಿ ಸಿ ಯಲ್ಲಿ ಸರ್ಕಾರಿ ಕೆರೆ ಎಂದು ನಮೂದಾಗಿದ್ದು ಇದರಲ್ಲಿ 2 ಎಕರೆಯನ್ನು 2007 ರಲ್ಲಿ ಎ.ಸಿ. ಶಿವಲಿಂಗೇಗೌಡ ಎಂಬುವರಿಗೆ ಮಲ್ಟಿ ಕಲರ್ ಗ್ರಾನೆಟ್ ಗಣಿಗಾರಿಕೆಗಾಗಿ ಕಲ್ಲು ಗಣಿ ಗುತ್ತಿಗೆ ಸಂಖ್ಯೆ 793 ಎಂದು ಮಂಜೂರು ಮಾಡಿದೆ.</p>.<p>ಆದರೆ ಸರ್ವೆ ನಂ. 67 ರ ಜಮೀನು ಸರ್ಕಾರಿ ಕೆರೆಯಾಗಿದ್ದು. ಆ ಜಾಗದಲ್ಲಿಯೇ ಕಲ್ಲು ಗಣಿ ಮಾಲೀಕರು ಕೆರೆಯ ಜಾಗದಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಅರೋಪಿಸಿ ದೂರು ನೀಡಿದ್ದರು.</p>.<p>ಗಣಿಗಾರಿಕೆ ಮಾಡಲು ಗ್ರಾಮದ ಸರ್ಕಾರಿ ಕೆರೆಯನ್ನು ಮುಚ್ಚಿರುತ್ತಾರೆ. ಜೊತೆಗೆ ರಾತ್ರಿ ಹತ್ತು ಗಂಟೆಯವರೆಗೂ ಕಲ್ಲು ಗಣಿ ಸ್ಫೋಟ ಮಾಡುತ್ತಿದ್ದಾರೆ. ಇದರಿಂದ ಸುತ್ತಮುತ್ತಲ ಗ್ರಾಮಸ್ಥರು ಮನೆಯಲ್ಲಿ ವಾಸ ಮಾಡಲು ತೊಂದರೆ ಉಂಟಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ರಾಮನಗರ ಜಿಲ್ಲೆ ಭೂ ದಾಖಲೆಗಳ ಉಪ ನಿರ್ದೇಶಕರ ಆದೇಶದ ಮೇರೆಗೆ ಕೆರೆ ಸರ್ವೆ ನಡೆಸಿದಾಗ ಕೆರೆ ಜಾಗ ಒತ್ತುವರಿಯಾಗಿರುವುದು ಬೆಳಕಿಗೆ ಬಂದಿರುತ್ತದೆ. ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಕೆರೆಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.<br><br> ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ವಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸ್ಥಳೀಯ ಗ್ರಾಮಸ್ಥರಿಂದ ಮಾಹಿತಿ ಪಡೆದು ಸ್ಥಳ ಮಹಜರು ಮಾಡಿ ವರದಿ ಸಿದ್ದಪಡಿಸಿದರು.</p>.<p>ದೂರುದಾರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಉಮೇಶ್, ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್, ಮುಖಂಡರಾದ ಕಾಳ ಮಾರೇಗೌಡ, ಮಾರೇಗೌಡ, ದೀಪು, ಶ್ರೀನಿವಾಸ್, ಕುಮಾರ್, ನಾಜೀರ್ ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಸ್ಥಳ ಮಹಜರು ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>