ರೈತ ಸಂಘದ ರಾಜ್ಯ ಸಂಚಾಲಕ ಮುನಿರಾಜು ಮಾತನಾಡಿ, ಕಾಡು ಪ್ರಾಣಿಗಳು ಮತ್ತು ಕಾಡಾನೆಗಳು ನಿರಂತರವಾಗಿ ದಾಳಿ ನಡೆಸಿ ರೈತರ ಬೆಳೆದ ಫಸಲನ್ನು ನಾಶ ಮಾಡುತ್ತಿವೆ. ದೀರ್ಘಕಾಲ ರೈತರಿಗೆ ಫಸಲು ಕೊಡುವ ಆರ್ಥಿಕವಾಗಿ ಶಕ್ತಿ ತುಂಬುವ ತೆಂಗು ಮತ್ತು ಮಾವಿನ ಮರಗಳು ಕಾಡಾನೆ ದಾಳಿಗೆ ಬಲಿಯಾಗುತ್ತಿವೆ. ಕಾಡು ಪ್ರಾಣಿಗಳ ದಾಳಿಗೆ ಕೇವಲ ರೈತರ ಫಸಲು ನಾಶವಾಗದೆ, ರೈತರೂ ಬಲಿಯಾಗುತ್ತಿದ್ದಾರೆ. ರೈತ ಸಂಘವು ಕಾಡಾನೆ ದಾಳಿ ತಡೆಗಟ್ಟುವಂತೆ ಹಲವು ಬಾರಿ ಒತ್ತಾಯಿಸಿ ಇಲಾಖೆಗೆ ಮನವಿ ಮಾಡಿದ್ದರೂ ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ, ಕಾಡಾನೆಗಳನ್ನು ತಡೆಗಟ್ಟುತ್ತಿಲ್ಲ ಎಂದು ದೂರಿದರು.