<p>ಕನಕಪುರ: ರಾಗಿ ಖರೀದಿ ಕೇಂದ್ರದಲ್ಲಿ ನಡೆದಿರುವ ಅಕ್ರಮ ಕುರಿತು ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಎಪಿಎಂಸಿ ಮಾರುಕಟ್ಟೆ ಖರೀದಿ ಕೇಂದ್ರದ ಮೇಲೆ ದಾಳಿ ನಡೆಸಿದರು.</p>.<p>ಲೋಕಾಯುಕ್ತ ಎಸ್ಪಿ ಸ್ನೇಹ, ಪೊಲೀಸ್ ಇನ್ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದ ತಂಡ ದಾಖಲೆ ಪರಿಶೀಲನೆ ನಡೆಸಿತು. ಈ ವೇಳೆ ರೈತರು ತೂಕದಲ್ಲಿ ಕಳೆಯುವುದು, ರಸೀದಿಗೆ ಲಂಚ ಪಡೆಯುವುದು, ನ್ಯಾಯಬೆಲೆ ಅಂಗಡಿ ರಾಗಿ ಮಾರಾಟಕ್ಕೆ ಪ್ರಯತ್ನಿಸಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದು ಸೇರಿದಂತೆ ಹಲವು ಆರೋಪಗಳನ್ನು ಮಾಡಿದರು.</p>.<p>ಅಧಿಕಾರಿಗಳು ಆಹಾರ ಇಲಾಖೆ ಶಿರಸ್ತೇದಾರ್ ಜಯಸಿಂಹ ಹಾಗೂ ಕೆಎಸ್ಎಫ್ಸಿ ಡಿ.ಎಂ ರೂಪ ಅವರನ್ನು ತರಾಟೆಗೆ ತೆಗೆದುಕೊಂಡರು. ಮೂರು ದಿನಗಳಿಂದ ವೇ ಬ್ರಿಡ್ಜ್ ಕೆಟ್ಟು ಕಾಯುತ್ತಿದ್ದ 40ಕ್ಕೂ ಹೆಚ್ಚು ರೈತರ ರಾಗಿ ಖರೀದಿಗೆ ತ್ವರಿತ ಕ್ರಮ ಕೈಗೊಂಡರು. ಕೆಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.</p>.<p>ಲೋಕಾಯುಕ್ತ ಪೊಲೀಸರಾದ ರಘು, ಸೌಮ್ಯ, ಕೃಷ್ಣಮೂರ್ತಿ, ಶಿವಕುಮಾರ್, ರೋಹಿತ್ ಪಾಲ್ಗೊಂಡಿದ್ದರು.</p>.<p>ಪ್ರಭಾರ ಗ್ರೇಡ್-2 ತಹಶೀಲ್ದಾರ್ ವಸಂತ ಕುಮಾರಿ, ಸಹಾಯಕ ಕೃಷಿ ನಿರ್ದೇಶಕ ರಾಧಾಕೃಷ್ಣ, ಬೆಸ್ಕಾಂ ಎಇ ಶಿವರಾಜು, ದೂರುದಾರ ಕುಮಾರಸ್ವಾಮಿ ಹಾಗೂ ರೈತರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-14-483238892</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ರಾಗಿ ಖರೀದಿ ಕೇಂದ್ರದಲ್ಲಿ ನಡೆದಿರುವ ಅಕ್ರಮ ಕುರಿತು ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಎಪಿಎಂಸಿ ಮಾರುಕಟ್ಟೆ ಖರೀದಿ ಕೇಂದ್ರದ ಮೇಲೆ ದಾಳಿ ನಡೆಸಿದರು.</p>.<p>ಲೋಕಾಯುಕ್ತ ಎಸ್ಪಿ ಸ್ನೇಹ, ಪೊಲೀಸ್ ಇನ್ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದ ತಂಡ ದಾಖಲೆ ಪರಿಶೀಲನೆ ನಡೆಸಿತು. ಈ ವೇಳೆ ರೈತರು ತೂಕದಲ್ಲಿ ಕಳೆಯುವುದು, ರಸೀದಿಗೆ ಲಂಚ ಪಡೆಯುವುದು, ನ್ಯಾಯಬೆಲೆ ಅಂಗಡಿ ರಾಗಿ ಮಾರಾಟಕ್ಕೆ ಪ್ರಯತ್ನಿಸಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದು ಸೇರಿದಂತೆ ಹಲವು ಆರೋಪಗಳನ್ನು ಮಾಡಿದರು.</p>.<p>ಅಧಿಕಾರಿಗಳು ಆಹಾರ ಇಲಾಖೆ ಶಿರಸ್ತೇದಾರ್ ಜಯಸಿಂಹ ಹಾಗೂ ಕೆಎಸ್ಎಫ್ಸಿ ಡಿ.ಎಂ ರೂಪ ಅವರನ್ನು ತರಾಟೆಗೆ ತೆಗೆದುಕೊಂಡರು. ಮೂರು ದಿನಗಳಿಂದ ವೇ ಬ್ರಿಡ್ಜ್ ಕೆಟ್ಟು ಕಾಯುತ್ತಿದ್ದ 40ಕ್ಕೂ ಹೆಚ್ಚು ರೈತರ ರಾಗಿ ಖರೀದಿಗೆ ತ್ವರಿತ ಕ್ರಮ ಕೈಗೊಂಡರು. ಕೆಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.</p>.<p>ಲೋಕಾಯುಕ್ತ ಪೊಲೀಸರಾದ ರಘು, ಸೌಮ್ಯ, ಕೃಷ್ಣಮೂರ್ತಿ, ಶಿವಕುಮಾರ್, ರೋಹಿತ್ ಪಾಲ್ಗೊಂಡಿದ್ದರು.</p>.<p>ಪ್ರಭಾರ ಗ್ರೇಡ್-2 ತಹಶೀಲ್ದಾರ್ ವಸಂತ ಕುಮಾರಿ, ಸಹಾಯಕ ಕೃಷಿ ನಿರ್ದೇಶಕ ರಾಧಾಕೃಷ್ಣ, ಬೆಸ್ಕಾಂ ಎಇ ಶಿವರಾಜು, ದೂರುದಾರ ಕುಮಾರಸ್ವಾಮಿ ಹಾಗೂ ರೈತರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-14-483238892</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>