<p>ಕನಕಪುರ ನಗರದ ಟಿಟಿಸಿ ಕ್ಲಬ್ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆಯಲ್ಲಿ ಹೂಳು ತುಂಬಿದ್ದು ಬೃಹದಾಕಾರವಾಗಿ ಗಿಡಗಳು ಬೆಳೆದುಕೊಂಡಿದ್ದು ಕಾಲುವೆಯಲ್ಲಿ ನೀರು ಹರಿಯದೆ ತುಂಬಿಕೊಂಡಿದೆ. ನಿಂತ ನೀರಿನಿಂದ ವಾಸನೆ ಬರುತ್ತಿದ್ದು ಕಾಲುವೆ ಪಕ್ಕದ ಮನೆಗಳಿಗೆ ತೊಂದರೆ ಆಗುತ್ತಿದೆ.</p>.<p>ರಾಜಕಾಲುವೆಯಲ್ಲಿ ತ್ಯಾಜ್ಯ ತುಂಬಿಕೊಂಡ ಮೇಲೆ ನಗರಸಭೆಯವರು ತೆಗೆಸದ ಕಾರಣ ಕಾಲುವೆ ತುಂಬ ತ್ಯಾಜ್ಯ ತುಂಬಿಕೊಂಡಿದ್ದು ಮನೆಗಳ ತ್ಯಾಜ್ಯದ ನೀರು ಕಾಲುವೆಯಲ್ಲಿ ಹರಿಯುತ್ತಿಲ್ಲ.</p>.<p>ರಾಜಕಾಲುವೆಯಲ್ಲಿ ತುಂಬಿರುವ ತ್ಯಾಜ್ಯವನ್ನು ತೆಗೆಯಲು ನಗರಸಭೆಯಲ್ಲಿ ಚಿಕ್ಕದಾದ ಜೆಸಿಬಿ ಯಂತ್ರಗಳಿವೆ, ಹೂಳು, ತ್ಯಾಜ್ಯ ತೆಗೆಯಲು ನಗರಸಭೆಯವರಿಗೆ ಈಗಾಗಲೆ ಮನವಿ ಮಾಡಿದ್ದೇವೆ. ಆದರೆ, ಈ ವರೆಗೂ ತ್ಯಾಜ್ಯವನ್ನು ತೆರವುಗೊಳಿಸಿಲ್ಲ.</p>.<p>ಮುಂದೆ ಮಳೆ ಬಂದರೆ ದೊಡ್ಡ ಪ್ರಮಾಣದಲ್ಲಿ ಕಾಲುವೆಗೆ ನೀರು ಬರಲಿದ್ದು ಆಗ ನೀರು ಕಾಲುವೆಯಲ್ಲಿ ಹರಿಯದೆ ಮನೆಗಳಿಗೆ ನುಗ್ಗಲಿದೆ. ನಗರಸಭೆಯವರು ಪರಿಶೀಲಿಸಿ ಶೀಘ್ರವಾಗಿ ಕಾಲುವೆಯಲ್ಲಿನ ತ್ಯಾಜ್ಯ ತೆಗೆಸಬೇಕು, ನೀರು ಸರಾಗವಾಗಿ ನೀರು ಹರಿಯುವಂತೆ ಮಾಡಬೇಕು.</p>.<p>ಕಾಲುವೆ ಅಕ್ಕಪಕ್ಕದ ನಿವಾಸಿಗಳು, ಕನಕಪುರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ ನಗರದ ಟಿಟಿಸಿ ಕ್ಲಬ್ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆಯಲ್ಲಿ ಹೂಳು ತುಂಬಿದ್ದು ಬೃಹದಾಕಾರವಾಗಿ ಗಿಡಗಳು ಬೆಳೆದುಕೊಂಡಿದ್ದು ಕಾಲುವೆಯಲ್ಲಿ ನೀರು ಹರಿಯದೆ ತುಂಬಿಕೊಂಡಿದೆ. ನಿಂತ ನೀರಿನಿಂದ ವಾಸನೆ ಬರುತ್ತಿದ್ದು ಕಾಲುವೆ ಪಕ್ಕದ ಮನೆಗಳಿಗೆ ತೊಂದರೆ ಆಗುತ್ತಿದೆ.</p>.<p>ರಾಜಕಾಲುವೆಯಲ್ಲಿ ತ್ಯಾಜ್ಯ ತುಂಬಿಕೊಂಡ ಮೇಲೆ ನಗರಸಭೆಯವರು ತೆಗೆಸದ ಕಾರಣ ಕಾಲುವೆ ತುಂಬ ತ್ಯಾಜ್ಯ ತುಂಬಿಕೊಂಡಿದ್ದು ಮನೆಗಳ ತ್ಯಾಜ್ಯದ ನೀರು ಕಾಲುವೆಯಲ್ಲಿ ಹರಿಯುತ್ತಿಲ್ಲ.</p>.<p>ರಾಜಕಾಲುವೆಯಲ್ಲಿ ತುಂಬಿರುವ ತ್ಯಾಜ್ಯವನ್ನು ತೆಗೆಯಲು ನಗರಸಭೆಯಲ್ಲಿ ಚಿಕ್ಕದಾದ ಜೆಸಿಬಿ ಯಂತ್ರಗಳಿವೆ, ಹೂಳು, ತ್ಯಾಜ್ಯ ತೆಗೆಯಲು ನಗರಸಭೆಯವರಿಗೆ ಈಗಾಗಲೆ ಮನವಿ ಮಾಡಿದ್ದೇವೆ. ಆದರೆ, ಈ ವರೆಗೂ ತ್ಯಾಜ್ಯವನ್ನು ತೆರವುಗೊಳಿಸಿಲ್ಲ.</p>.<p>ಮುಂದೆ ಮಳೆ ಬಂದರೆ ದೊಡ್ಡ ಪ್ರಮಾಣದಲ್ಲಿ ಕಾಲುವೆಗೆ ನೀರು ಬರಲಿದ್ದು ಆಗ ನೀರು ಕಾಲುವೆಯಲ್ಲಿ ಹರಿಯದೆ ಮನೆಗಳಿಗೆ ನುಗ್ಗಲಿದೆ. ನಗರಸಭೆಯವರು ಪರಿಶೀಲಿಸಿ ಶೀಘ್ರವಾಗಿ ಕಾಲುವೆಯಲ್ಲಿನ ತ್ಯಾಜ್ಯ ತೆಗೆಸಬೇಕು, ನೀರು ಸರಾಗವಾಗಿ ನೀರು ಹರಿಯುವಂತೆ ಮಾಡಬೇಕು.</p>.<p>ಕಾಲುವೆ ಅಕ್ಕಪಕ್ಕದ ನಿವಾಸಿಗಳು, ಕನಕಪುರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>