<p><strong>ಕನಕಪುರ</strong>: ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುವವರನ್ನು ಸಹ ಶಿಕ್ಷಕರೆಂದು ಪರಿಗಣಿಸಿ ಮುಖ್ಯ ಶಿಕ್ಷಕರಾಗಿ ಮುಂಬಡ್ತಿ ಕೊಡಬೇಕೆಂದು ಒತ್ತಾಯಿಸಿ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಬಿಇಒ ಅವರ ಮೂಲಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p><p>ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯ ನಿರ್ವಹಿಸುವವರು ಸಹ ಶಿಕ್ಷಕರಿಗೆ ಸರಿ ಸಮಾನವಾಗಿ ಕಾರ್ಯ ನಿರ್ವಹಿಸುತ್ತಾರೆ. ಆದರೆ ಸಹ ಶಿಕ್ಷಕರಿಗೆ ಸಿಗುವ ಸವಲತ್ತುಗಳು ಮಾತ್ರ ಸಿಗುತ್ತಿಲ್ಲ, ತಾರತಮ್ಯ-ಅಸಮಾನತೆಯಿದೆ ಎಂದು ಶಿಕ್ಷಕರು ದೂರಿದರು.</p><p>ದೈಹಿಕ ಶಿಕ್ಷಣ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. 2024ರ ಜುಲೈ ಅಂತ್ಯದೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಇಲಾಖೆ ನಡೆಸುವ ಕ್ರೀಡಾಕೂಟ ಬಹಿಷ್ಕರಿಸುತ್ತೇವೆ ಎಂದು ಮನವಿಯಲ್ಲಿ ಶಿಕ್ಷಕರು ತಿಳಿಸಿದ್ದಾರೆ.</p><p>ತಾಲ್ಲೂಕು ಅಧ್ಯಕ್ಷ ರಮೇಶ್, ಗೌರವ ಅಧ್ಯಕ್ಷ ಫ್ರಾನ್ಸಿಸ್ ಚಾರಪ್ಪ, ಉಪಾಧ್ಯಕ್ಷೆ ಜಯಶೀಲ, ಕಾರ್ಯದರ್ಶಿ ಟಿ.ಪಿ.ಸುರೇಂದ್ರ, ಸಹ ಕಾರ್ಯದರ್ಶಿ ಚಿಕ್ಕವೆಂಕಟರಮಣಪ್ಪ, ಖಜಾಂಚಿ ಕೆ.ಟಿ.ಸುರೇಶ್ ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುವವರನ್ನು ಸಹ ಶಿಕ್ಷಕರೆಂದು ಪರಿಗಣಿಸಿ ಮುಖ್ಯ ಶಿಕ್ಷಕರಾಗಿ ಮುಂಬಡ್ತಿ ಕೊಡಬೇಕೆಂದು ಒತ್ತಾಯಿಸಿ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಬಿಇಒ ಅವರ ಮೂಲಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p><p>ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯ ನಿರ್ವಹಿಸುವವರು ಸಹ ಶಿಕ್ಷಕರಿಗೆ ಸರಿ ಸಮಾನವಾಗಿ ಕಾರ್ಯ ನಿರ್ವಹಿಸುತ್ತಾರೆ. ಆದರೆ ಸಹ ಶಿಕ್ಷಕರಿಗೆ ಸಿಗುವ ಸವಲತ್ತುಗಳು ಮಾತ್ರ ಸಿಗುತ್ತಿಲ್ಲ, ತಾರತಮ್ಯ-ಅಸಮಾನತೆಯಿದೆ ಎಂದು ಶಿಕ್ಷಕರು ದೂರಿದರು.</p><p>ದೈಹಿಕ ಶಿಕ್ಷಣ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. 2024ರ ಜುಲೈ ಅಂತ್ಯದೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಇಲಾಖೆ ನಡೆಸುವ ಕ್ರೀಡಾಕೂಟ ಬಹಿಷ್ಕರಿಸುತ್ತೇವೆ ಎಂದು ಮನವಿಯಲ್ಲಿ ಶಿಕ್ಷಕರು ತಿಳಿಸಿದ್ದಾರೆ.</p><p>ತಾಲ್ಲೂಕು ಅಧ್ಯಕ್ಷ ರಮೇಶ್, ಗೌರವ ಅಧ್ಯಕ್ಷ ಫ್ರಾನ್ಸಿಸ್ ಚಾರಪ್ಪ, ಉಪಾಧ್ಯಕ್ಷೆ ಜಯಶೀಲ, ಕಾರ್ಯದರ್ಶಿ ಟಿ.ಪಿ.ಸುರೇಂದ್ರ, ಸಹ ಕಾರ್ಯದರ್ಶಿ ಚಿಕ್ಕವೆಂಕಟರಮಣಪ್ಪ, ಖಜಾಂಚಿ ಕೆ.ಟಿ.ಸುರೇಶ್ ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>