<p>ಕನಕಪುರ: ಪ್ರವಾಸಿ ತಾಣ ಸಂಗಮದಲ್ಲಿ ಒಂಟಿ ಕಾಡಾನೆಯೊಂದು ದಿಢೀರ್ ನುಗ್ಗಿ ದಾಳಿ ನಡೆಸಿದ ಪರಿಣಾಮ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಗುರುವಾರ ನಡೆದಿದೆ.</p>.<p>ತಾಲ್ಲೂಕಿನ ಸಂಗಮದ ಕಾವೇರಿ ನದಿ ತೀರದಲ್ಲಿ ಪ್ರವಾಸಿಗರು ನೀರಿನಲ್ಲಿ ಆಟವಾಡುತ್ತಿದ್ದಾಗ ಒಂಟಿ ಕಾಡಾನೆ ನುಗ್ಗಿ ಬಂದಿದೆ. ಆನೆಯನ್ನು ಕಂಡ ಪ್ರವಾಸಿಗರು ದಿಕ್ಕಾಪಾಲಾಗಿ ಓಡಿದರು.</p>.<p>ಬೇಸಿಗೆ ರಜೆ ಆರಂಭವಾಗಿರುವುದರಿಂದ ಸಂಗಮಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ನದಿಯಲ್ಲಿ ಪ್ರವಾಸಿಗರು ಆಟವಾಡುತ್ತಿದ್ದ ವೇಳೆ ನೀರು ಕುಡಿಯಲು ಬಂದ ಕಾಡಾನೆ ಅಲ್ಲಿಗೆ ನುಗ್ಗಿದೆ. ಇದರಿಂದ ಪುರುಷರು, ಮಹಿಳೆಯರು, ಮಕ್ಕಳು ಭಯಭೀತರಾದರು.</p>.<p>ಪ್ರವಾಸಿಗರು ಕೂಗಾಡುತ್ತಿದ್ದಂತೆ ಅಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು ಓಡಿಸಿದರು. ಆನೆ ಯಾರ ಮೇಲೂ ದಾಳಿ ಮಾಡಿಲ್ಲ. ಈ ದೃಶ್ಯವನ್ನು ಕೆಲವರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ವಿಡಿಯೊ ವೈರಲ್ ಆಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-14-348296791</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ಪ್ರವಾಸಿ ತಾಣ ಸಂಗಮದಲ್ಲಿ ಒಂಟಿ ಕಾಡಾನೆಯೊಂದು ದಿಢೀರ್ ನುಗ್ಗಿ ದಾಳಿ ನಡೆಸಿದ ಪರಿಣಾಮ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಗುರುವಾರ ನಡೆದಿದೆ.</p>.<p>ತಾಲ್ಲೂಕಿನ ಸಂಗಮದ ಕಾವೇರಿ ನದಿ ತೀರದಲ್ಲಿ ಪ್ರವಾಸಿಗರು ನೀರಿನಲ್ಲಿ ಆಟವಾಡುತ್ತಿದ್ದಾಗ ಒಂಟಿ ಕಾಡಾನೆ ನುಗ್ಗಿ ಬಂದಿದೆ. ಆನೆಯನ್ನು ಕಂಡ ಪ್ರವಾಸಿಗರು ದಿಕ್ಕಾಪಾಲಾಗಿ ಓಡಿದರು.</p>.<p>ಬೇಸಿಗೆ ರಜೆ ಆರಂಭವಾಗಿರುವುದರಿಂದ ಸಂಗಮಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ನದಿಯಲ್ಲಿ ಪ್ರವಾಸಿಗರು ಆಟವಾಡುತ್ತಿದ್ದ ವೇಳೆ ನೀರು ಕುಡಿಯಲು ಬಂದ ಕಾಡಾನೆ ಅಲ್ಲಿಗೆ ನುಗ್ಗಿದೆ. ಇದರಿಂದ ಪುರುಷರು, ಮಹಿಳೆಯರು, ಮಕ್ಕಳು ಭಯಭೀತರಾದರು.</p>.<p>ಪ್ರವಾಸಿಗರು ಕೂಗಾಡುತ್ತಿದ್ದಂತೆ ಅಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು ಓಡಿಸಿದರು. ಆನೆ ಯಾರ ಮೇಲೂ ದಾಳಿ ಮಾಡಿಲ್ಲ. ಈ ದೃಶ್ಯವನ್ನು ಕೆಲವರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ವಿಡಿಯೊ ವೈರಲ್ ಆಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-14-348296791</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>