<p>ಕನಕಪುರ: ಬುದ್ಧಿಮಾಂದ್ಯ ಯುವತಿಗೆ ವಾಟ್ಸ್ ಆ್ಯಪ್ ಮೂಲಕ ಅಶ್ಲೀಲ ಸಂದೇಶ ಮತ್ತು ವಿಡಿಯೊ ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ಮಂಡ್ಯ ಜಿಲ್ಲೆಯ ಮುದ್ದನಗಟ್ಟಿ ಗ್ರಾಮದ ರಮೇಶ್ (33) ಬಂಧಿತ ಆರೋಪಿ. ಈತ ಮಧ್ಯರಾತ್ರಿ ಯುವತಿಯ ಮೊಬೈಲ್ಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡುತ್ತಿದ್ದ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಬುದ್ಧಿಮಾಂದ್ಯ ಯುವತಿಗೆ ಮೊದಲು ಪರಿಚಯವಾಗಿದ್ದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದ ಮಂಜುನಾಥ್ ಎಂಬಾತ ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ₹3.65 ಲಕ್ಷ ಹಣ ಪಡೆದು ವಂಚಿಸಿದ್ದ.</p>.<p>ಯುವತಿ ಹಣ ವಾಪಸ್ ಕೊಡುವಂತೆ ಮಂಜುನಾಥ್ ಬೆನ್ನು ಬಿದ್ದಿದ್ದಳು. ಆಗ ಆತ ರಮೇಶ ಎಂಬಾತನಿಗೆ ಯುವತಿಯ ಮೊಬೈಲ್ ನಂಬರ್ ಕೊಟ್ಟು ಕಿರುಕುಳ ನೀಡಿ ಬೆದರಿಕೆ ಹಾಕುವಂತೆ ಸೂಚಿಸಿದ್ದ ಎನ್ನಲಾಗಿದೆ.</p>.<p>ಇಬ್ಬರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮತ್ತೊಬ್ಬ ಆರೋಪಿ ಮಂಜುನಾಥನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-18-911209326</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ಬುದ್ಧಿಮಾಂದ್ಯ ಯುವತಿಗೆ ವಾಟ್ಸ್ ಆ್ಯಪ್ ಮೂಲಕ ಅಶ್ಲೀಲ ಸಂದೇಶ ಮತ್ತು ವಿಡಿಯೊ ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ಮಂಡ್ಯ ಜಿಲ್ಲೆಯ ಮುದ್ದನಗಟ್ಟಿ ಗ್ರಾಮದ ರಮೇಶ್ (33) ಬಂಧಿತ ಆರೋಪಿ. ಈತ ಮಧ್ಯರಾತ್ರಿ ಯುವತಿಯ ಮೊಬೈಲ್ಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡುತ್ತಿದ್ದ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಬುದ್ಧಿಮಾಂದ್ಯ ಯುವತಿಗೆ ಮೊದಲು ಪರಿಚಯವಾಗಿದ್ದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದ ಮಂಜುನಾಥ್ ಎಂಬಾತ ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ₹3.65 ಲಕ್ಷ ಹಣ ಪಡೆದು ವಂಚಿಸಿದ್ದ.</p>.<p>ಯುವತಿ ಹಣ ವಾಪಸ್ ಕೊಡುವಂತೆ ಮಂಜುನಾಥ್ ಬೆನ್ನು ಬಿದ್ದಿದ್ದಳು. ಆಗ ಆತ ರಮೇಶ ಎಂಬಾತನಿಗೆ ಯುವತಿಯ ಮೊಬೈಲ್ ನಂಬರ್ ಕೊಟ್ಟು ಕಿರುಕುಳ ನೀಡಿ ಬೆದರಿಕೆ ಹಾಕುವಂತೆ ಸೂಚಿಸಿದ್ದ ಎನ್ನಲಾಗಿದೆ.</p>.<p>ಇಬ್ಬರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮತ್ತೊಬ್ಬ ಆರೋಪಿ ಮಂಜುನಾಥನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-18-911209326</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>