<p><strong>ಕನಕಪುರ:</strong> ಕಸಬಾ ಹೋಬಳಿ ಶಿವನಹಳ್ಳಿ ಶಿವಶಂಕರ ಮಠದಲ್ಲಿ ಶನೇಶ್ವರ ಜಾತ್ರಾ ಮಹೋತ್ಸವವು ಸೋಮವಾರ ಅದ್ದೂರಿಯಾಗಿ ನಡೆಯಿತು. ಜಾತ್ರೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. </p>.<p>ಶನಿವಾರ ಆರಂಭಗೊಂಡ ಶನೇಶ್ವರ ಜಾತ್ರಾ ಮಹೋತ್ಸವದ ಮೂರು ದಿನಗಳ ಕಾರ್ಯಕ್ರಮದಲ್ಲಿ ಮಠದ ಆವರಣದಲ್ಲಿ ನಿರ್ಮಿಸಿರುವ ಮಹಾ ಗಣಪತಿ, ಆತ್ಮಲಿಂಗೇಶ್ವರ, ನಂದೀಶ್ವರ, ಪಾರ್ವತಿ ದೇವಿ, ನವಗ್ರಹ ಪೂಜೆಗಳು ನಡೆದವು. </p>.<p>ಮೃತ್ಯುಂಜಯ ಪೂಜೆ ಕಳಸ ಪ್ರತಿಷ್ಠಾಪನೆಯೊಂದಿಗೆ ಮಹಾಮಂಗಳಾರತಿ ನಡೆಯಿತು. ಭಾನುವಾರ ಬ್ರಾಹ್ಮಿ ಮುಹೂರ್ತದಲ್ಲಿ ದೇವರಿಗೆ ರುದ್ರಾಭಿಷೇಕ, ನವಗ್ರಹ ಹೋಮ, ಗಣಪತಿ ಹೋಮ, ಮೃತ್ಯುಂಜಯ ಹೋಮ, ಶನೇಶ್ವರ ಸ್ವಾಮಿಯ ಮಹಾ ಯಾಗ ನೆರವೇರಿತು.</p>.<p>ಸೋಮವಾರ ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ಕುಂಭ ಲಗ್ನದಲ್ಲಿ ಗಿರಿಜಾ ಕಲ್ಯಾಣೋತ್ಸವ, ಮಹಾಮಂಗಳಾರತಿ, ಮಹಾ ರುದ್ರಾಭಿಷೇಕ ಸಹಿತ ಪೂಜಾ ಕಾರ್ಯಕ್ರಮ ಜರುಗಿದವು.</p>.<p>ದೇಗುಲ ಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ಧಾರ್ಮಿಕ ಕಾರ್ಯಗಳ ಸಾನಿಧ್ಯ ವಹಿಸಿದರು. </p>.<p>ದೇವಾಲಯದ ಅರ್ಚಕ ಪ್ರಕಾಶ್, ಬಸವರಾಜು, ಮಹದೇವಪ್ಪ, ಸುರೇಶ್, ರಾಜು, ವೀರಭದ್ರಯ್ಯ ಎಲ್ಲ ಕಾರ್ಯಕ್ರಮಗಳ ನೇತೃತ್ವ ವಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಕಸಬಾ ಹೋಬಳಿ ಶಿವನಹಳ್ಳಿ ಶಿವಶಂಕರ ಮಠದಲ್ಲಿ ಶನೇಶ್ವರ ಜಾತ್ರಾ ಮಹೋತ್ಸವವು ಸೋಮವಾರ ಅದ್ದೂರಿಯಾಗಿ ನಡೆಯಿತು. ಜಾತ್ರೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. </p>.<p>ಶನಿವಾರ ಆರಂಭಗೊಂಡ ಶನೇಶ್ವರ ಜಾತ್ರಾ ಮಹೋತ್ಸವದ ಮೂರು ದಿನಗಳ ಕಾರ್ಯಕ್ರಮದಲ್ಲಿ ಮಠದ ಆವರಣದಲ್ಲಿ ನಿರ್ಮಿಸಿರುವ ಮಹಾ ಗಣಪತಿ, ಆತ್ಮಲಿಂಗೇಶ್ವರ, ನಂದೀಶ್ವರ, ಪಾರ್ವತಿ ದೇವಿ, ನವಗ್ರಹ ಪೂಜೆಗಳು ನಡೆದವು. </p>.<p>ಮೃತ್ಯುಂಜಯ ಪೂಜೆ ಕಳಸ ಪ್ರತಿಷ್ಠಾಪನೆಯೊಂದಿಗೆ ಮಹಾಮಂಗಳಾರತಿ ನಡೆಯಿತು. ಭಾನುವಾರ ಬ್ರಾಹ್ಮಿ ಮುಹೂರ್ತದಲ್ಲಿ ದೇವರಿಗೆ ರುದ್ರಾಭಿಷೇಕ, ನವಗ್ರಹ ಹೋಮ, ಗಣಪತಿ ಹೋಮ, ಮೃತ್ಯುಂಜಯ ಹೋಮ, ಶನೇಶ್ವರ ಸ್ವಾಮಿಯ ಮಹಾ ಯಾಗ ನೆರವೇರಿತು.</p>.<p>ಸೋಮವಾರ ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ಕುಂಭ ಲಗ್ನದಲ್ಲಿ ಗಿರಿಜಾ ಕಲ್ಯಾಣೋತ್ಸವ, ಮಹಾಮಂಗಳಾರತಿ, ಮಹಾ ರುದ್ರಾಭಿಷೇಕ ಸಹಿತ ಪೂಜಾ ಕಾರ್ಯಕ್ರಮ ಜರುಗಿದವು.</p>.<p>ದೇಗುಲ ಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ಧಾರ್ಮಿಕ ಕಾರ್ಯಗಳ ಸಾನಿಧ್ಯ ವಹಿಸಿದರು. </p>.<p>ದೇವಾಲಯದ ಅರ್ಚಕ ಪ್ರಕಾಶ್, ಬಸವರಾಜು, ಮಹದೇವಪ್ಪ, ಸುರೇಶ್, ರಾಜು, ವೀರಭದ್ರಯ್ಯ ಎಲ್ಲ ಕಾರ್ಯಕ್ರಮಗಳ ನೇತೃತ್ವ ವಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>