<p><strong>ಕನಕಪುರ:</strong> ಕಾಲೇಜಿಗೆ ಹೊಸದಾಗಿ ದಾಖಲಾಗಿ ಬಂದ ವಿದ್ಯಾರ್ಥಿಗಳನ್ನು ಪುನಃಶ್ಚೇತನಗೊಳಿಸುವ ಕಾರ್ಯಕ್ರಮ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆಯಿತು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಬಿ.ಶ್ಯಾಮಲಾ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾಲೇಜು ಹಾಗೂ ಉಪನ್ಯಾಸಕರು ಶ್ರಮಿಸುತ್ತಿರುವುದಾಗಿ ತಿಳಿಸಿದರು.</p>.<p>ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಪ್ರತಿಯೊಬ್ಬರಿಗೂ ಉದ್ಯೋಗ ಸಿಗುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.</p>.<p>ಕಾರ್ಯಕ್ರಮ ಮುಗಿದ ನಂತರ ಬಿ.ಎ, ಬಿ.ಕಾಂ, ಬಿಬಿಎ, ಬಿಸಿಎ, ಬಿಎಸ್ಸಿ ತರಗತಿ ವಿದ್ಯಾರ್ಥಿಗಳನ್ನು ವಿವಿಧ ಗುಂಪುಗಳನ್ನಾಗಿ ಮಾಡಿ ಹಲವು ಚಟುವಟಿಕೆ ನಡೆಸಲಾಯಿತು.</p>.<p>ವಿದ್ಯಾರ್ಥಿಗಳ ಮುಂದಿನ ಗುರಿ, ಹವ್ಯಾಸ, ಶಿಕ್ಷಣ ನೀತಿ ಬಗ್ಗೆ ಅನಿಸಿಕೆ ಮತ್ತು ಆದರ್ಶ ವ್ಯಕ್ತಿ ಹಾಗೂ ಹಲವು ವಿಷಯಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಯಿತು.</p>.<p>ಐಕ್ಯೂಎಸಿ ಸಂಚಾಲಕಿ ಅಕ್ಷತಾ ಪರಂಜ್ಯೋತಿ ಕುಮಾರ್ ಕಾರ್ಯಕ್ರಮ ಕುರಿತು ಮಾತನಾಡಿದರು.</p>.<p>ಕನ್ನಡ ವಿಭಾಗದ ಮುಖ್ಯಸ್ಥ ವಿಶ್ವರಾಧ್ಯ ಸ್ವಾಗತಿಸಿದರು. ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಮುಜೀಬ್ ಖಾನ್ ಕಾಲೇಜಿನ ಸಂಪೂರ್ಣ ಮಾಹಿತಿ ತಿಳಿಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಕಾಲೇಜಿಗೆ ಹೊಸದಾಗಿ ದಾಖಲಾಗಿ ಬಂದ ವಿದ್ಯಾರ್ಥಿಗಳನ್ನು ಪುನಃಶ್ಚೇತನಗೊಳಿಸುವ ಕಾರ್ಯಕ್ರಮ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆಯಿತು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಬಿ.ಶ್ಯಾಮಲಾ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾಲೇಜು ಹಾಗೂ ಉಪನ್ಯಾಸಕರು ಶ್ರಮಿಸುತ್ತಿರುವುದಾಗಿ ತಿಳಿಸಿದರು.</p>.<p>ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಪ್ರತಿಯೊಬ್ಬರಿಗೂ ಉದ್ಯೋಗ ಸಿಗುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.</p>.<p>ಕಾರ್ಯಕ್ರಮ ಮುಗಿದ ನಂತರ ಬಿ.ಎ, ಬಿ.ಕಾಂ, ಬಿಬಿಎ, ಬಿಸಿಎ, ಬಿಎಸ್ಸಿ ತರಗತಿ ವಿದ್ಯಾರ್ಥಿಗಳನ್ನು ವಿವಿಧ ಗುಂಪುಗಳನ್ನಾಗಿ ಮಾಡಿ ಹಲವು ಚಟುವಟಿಕೆ ನಡೆಸಲಾಯಿತು.</p>.<p>ವಿದ್ಯಾರ್ಥಿಗಳ ಮುಂದಿನ ಗುರಿ, ಹವ್ಯಾಸ, ಶಿಕ್ಷಣ ನೀತಿ ಬಗ್ಗೆ ಅನಿಸಿಕೆ ಮತ್ತು ಆದರ್ಶ ವ್ಯಕ್ತಿ ಹಾಗೂ ಹಲವು ವಿಷಯಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಯಿತು.</p>.<p>ಐಕ್ಯೂಎಸಿ ಸಂಚಾಲಕಿ ಅಕ್ಷತಾ ಪರಂಜ್ಯೋತಿ ಕುಮಾರ್ ಕಾರ್ಯಕ್ರಮ ಕುರಿತು ಮಾತನಾಡಿದರು.</p>.<p>ಕನ್ನಡ ವಿಭಾಗದ ಮುಖ್ಯಸ್ಥ ವಿಶ್ವರಾಧ್ಯ ಸ್ವಾಗತಿಸಿದರು. ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಮುಜೀಬ್ ಖಾನ್ ಕಾಲೇಜಿನ ಸಂಪೂರ್ಣ ಮಾಹಿತಿ ತಿಳಿಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>