<p><strong>ಕನಕಪುರ</strong>: ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.</p>.<p>ಮೃತ ವ್ಯಕ್ತಿಯನ್ನು ಅಶೋಕ್ (40) ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಅಶೋಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಬಾಗಿಲು ತೆಗೆಯದೆ ರೂಮಿನಿಂದ ವಾಸನೆ ಬರುತ್ತಿದ್ದಾಗ ಅನುಮಾನಗೊಂಡು ಬಾಗಿಲು ಹೊಡೆದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.</p>.<p>ಅಶೋಕ್ ಐದು ವರ್ಷಗಳಿಂದ ಸಾತನೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಇವರು ಯಾವ ಊರಿನವರು ಎಂಬುದು ತಿಳಿದುಬಂದಿಲ್ಲ. ಹಾಗಾಗಿ ಸಾತನೂರು ಪೊಲೀಸರು ಈ ಆತ್ಮಹತ್ಯೆಯನ್ನು ಅಸಹಜ ಸಾವು (ಯುಡಿಆರ್) ಎಂದು ದಾಖಲಿಸಿ ಮೃತ ದೇಹವನ್ನು ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಇಡಲಾಗಿದೆ.</p>.<p>ಮೃತ ವ್ಯಕ್ತಿಗೆ ವಾರಸುದಾರರು ಇದ್ದರೆ ಸಾತನೂರು ಪೊಲೀಸರನ್ನು 9480802863 ಸಂಪರ್ಕಿಸಿ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.</p>.<p>ಮೃತ ವ್ಯಕ್ತಿಯನ್ನು ಅಶೋಕ್ (40) ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಅಶೋಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಬಾಗಿಲು ತೆಗೆಯದೆ ರೂಮಿನಿಂದ ವಾಸನೆ ಬರುತ್ತಿದ್ದಾಗ ಅನುಮಾನಗೊಂಡು ಬಾಗಿಲು ಹೊಡೆದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.</p>.<p>ಅಶೋಕ್ ಐದು ವರ್ಷಗಳಿಂದ ಸಾತನೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಇವರು ಯಾವ ಊರಿನವರು ಎಂಬುದು ತಿಳಿದುಬಂದಿಲ್ಲ. ಹಾಗಾಗಿ ಸಾತನೂರು ಪೊಲೀಸರು ಈ ಆತ್ಮಹತ್ಯೆಯನ್ನು ಅಸಹಜ ಸಾವು (ಯುಡಿಆರ್) ಎಂದು ದಾಖಲಿಸಿ ಮೃತ ದೇಹವನ್ನು ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಇಡಲಾಗಿದೆ.</p>.<p>ಮೃತ ವ್ಯಕ್ತಿಗೆ ವಾರಸುದಾರರು ಇದ್ದರೆ ಸಾತನೂರು ಪೊಲೀಸರನ್ನು 9480802863 ಸಂಪರ್ಕಿಸಿ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>