<p><strong>ಕನಕಪುರ</strong>: ಕನಕೋತ್ಸವದ ಮೂರನೇ ದಿನದ ಕಾರ್ಯಕ್ರಮ ಅಕ್ಷರಶಃ ತಮ್ಮಲ್ಲಿರುವ ಪ್ರತಿಭೆ ಪ್ರದರ್ಶನ ಮತ್ತು ಅನಾವರಣದ ವೇದಿಕೆಗೆ ಸಾಕ್ಷಿಯಾಯಿತು.</p>.<p>ತಾಲ್ಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನಕೋತ್ಸವ ಕಾರ್ಯಕ್ರಮದಲ್ಲಿ ಕೇಶ ವಿನ್ಯಾಸ, ದಂಪತಿಗಳಿಗೆ ಭಾರತೀಯ ಸಾಂಪ್ರದಾಯಿಕ ಉಡುಗೆ ತೊಡುಗೆ, ವಾಯ್ಸ್ ಆಫ್ ಕನಕೋತ್ಸವ ಕಾರ್ಯಕ್ರಮ ಗ್ರಾಮೀಣ ಭಾಗದ ಜನರಿಗೆ ಅವಕಾಶ ಕಲ್ಪಿಸಿದವು.</p>.<p>ಭಾರತೀಯ ಸಾಂಪ್ರದಾಯಿಕ ಉಡುಗೆ ತೊಡುಗೆ ಸ್ಪರ್ಧೆಯಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಎಲ್ಲ ಧರ್ಮದ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಎಲ್ಲರ ಗಮನ ಸೆಳೆದರು.</p>.<p>ಕೇಶವಿನ್ಯಾಸ ಸ್ಪರ್ಧೆಯಲ್ಲಿ ಹದಿಹರೆಯದಿಂದ ವಯಸ್ಸಾದವರೆಗೂ ಪಾಲ್ಗೊಂಡು ನಗರದ ಜನತೆಗಿಂತ ನಾವೇನು ಕಮ್ಮಿ ಇಲ್ಲ ಎನ್ನುವಂತೆ ತಮ್ಮ ಕೇಶ ವಿನ್ಯಾಸವನ್ನು ಪ್ರದರ್ಶಿಸಿದರು.</p>.<p>ಕೇಶ ವಿನ್ಯಾಸ ಮತ್ತು ಸಾಂಪ್ರದಾಯಿಕ ಉಡುಗೆ ತೊಡುಗೆ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಬಂದಿದ್ದರಿಂದ ಕಾರ್ಯಕ್ರಮವು ನಿಗದಿತ ಸಮಯಕ್ಕಿಂತ ಹೆಚ್ಚು ಸಮಯ ನಡೆಯಿತು. ಎರಡು ಕಾರ್ಯಕ್ರಮವನ್ನು ಪ್ರತ್ಯೇಕ ವೇದಿಕೆಯಲ್ಲಿ ನಡೆಸಿ, ಅಂತಿಮ ಸುತ್ತಿನ ಸ್ಪರ್ಧಿಗಳನ್ನು ಒಂದೇ ವೇದಿಕೆಯಲ್ಲಿ ನಡೆಸಿ ರಾತ್ರಿ 8 ಗಂಟೆಗೆ ಮುಕ್ತಾಯಗೊಳಿಸಲಾಯಿತು.</p>.<p>ರಸಮಂಜರಿ ಕಾರ್ಯಕ್ರಮವು ರಾತ್ರಿ 8 ಗಂಟೆಗೆ ಪ್ರಾರಂಭಗೊಂಡು ರಾತ್ರಿ 2 ಗಂಟೆ ತನಕ ನಡೆಯಿತು. ಸಾಧು ಕೋಕಿಲ, ರಘು ದೀಕ್ಷಿತ್, ಸಂಚಿತ್ ಹೆಗ್ಡೆ, ದಿವ್ಯ ರಾಮಚಂದ್ರ, ಅಶ್ವಿನ್ ಶರ್ಮ ಸುಮಧುರ ಹಾಡುಗಳ ಮೂಲಕ ನೆರೆದಿದ್ದ ಜನರನ್ನು ರಂಜಿಸಿದರು.</p>.<p>ಶುಕ್ರವಾರ ಬೆಳಿಗ್ಗೆ ಮಹಿಳೆಯರಿಗಾಗಿ ಏರ್ಪಡಿಸಿದ್ದ ಮ್ಯಾರಥಾನ್ ಓಟದಲ್ಲಿ 3,500 ಮಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ವೇದಿಕೆಯಿಂದ ಹೊರಟು ಕುರುಪೇಟೆ ರಸ್ತೆ ಮಾರ್ಗವಾಗಿ ಬಿಜಿಎಸ್ ಬಡಾವಣೆ ಮೂಲಕ ಪೈಪ್ಲೈನ್ ಮಾರ್ಗವಾಗಿ ಕಾರ್ಯಕ್ರಮದ ವೇದಿಕೆಗೆ ಮುಕ್ತಾಯಗೊಳಿಸಿದರು.</p>.<p>ವಾಯ್ಸ್ ಆಫ್ ಕನಕೋತ್ಸವ ಕಾರ್ಯಕ್ರಮ ಪ್ರಾರಂಭಗೊಂಡಿತು. ತಾಲ್ಲೂಕು ಮಟ್ಟದಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ಧಿಗಳು ತಮ್ಮ ಗಾಯನದ ಮೂಲಕ ಪ್ರತಿಭೆ ಅನಾವರಣಗೊಳಿಸಿದರು.</p>.<p>ಶಾಲಾ ಮಕ್ಕಳಿಗಾಗಿ ಸೆಂಟ್ ಥಾಮಸ್ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ವಿಜ್ಞಾನ ಮೇಳಕ್ಕೆ ತಾಲ್ಲೂಕಿನ ಶಾಲೆಯ ಮಕ್ಕಳು ಆಗಮಿಸಿ ವಿಜ್ಞಾನದ ಮಾಡೆಲ್, ವೈಜ್ಞಾನಿಕ ಪ್ರಯೋಗದ ವೀಕ್ಷಣೆ ಮಾಡಿದರು.</p>.<p>ವೀಕ್ಷಣೆ ಪರಿಶೀಲನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಶುಕ್ರವಾರ ಮಧ್ಯಾಹ್ನದ ಆಗಮಿಸಿದರು. ನಡೆಯುತ್ತಿದ್ದ ಸ್ಥಳ, ಅಡಿಗೆ ತಯಾರಿ ಜಾಗ, ಊಟ ವಿತರಣೆ, ವಿಜ್ಞಾನ ಮೇಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಶಾಸಕರು ಜತೆಗಿದ್ದರು.<br><br>ಚಲನಚಿತ್ರ ನಟ ಶಿವರಾಜ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾದರು. ಪ್ರತಿ ಸ್ಪರ್ಧೆಯಲ್ಲೂ ಮೊದಲ, ದ್ವಿತೀಯ, ತೃತೀಯ ಬಹುಮಾನದ ಜತೆಗೆ 10 ಸಮಾಧಾನಕರ ಬಹುಮಾನವನ್ನು ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಕನಕೋತ್ಸವದ ಮೂರನೇ ದಿನದ ಕಾರ್ಯಕ್ರಮ ಅಕ್ಷರಶಃ ತಮ್ಮಲ್ಲಿರುವ ಪ್ರತಿಭೆ ಪ್ರದರ್ಶನ ಮತ್ತು ಅನಾವರಣದ ವೇದಿಕೆಗೆ ಸಾಕ್ಷಿಯಾಯಿತು.</p>.<p>ತಾಲ್ಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನಕೋತ್ಸವ ಕಾರ್ಯಕ್ರಮದಲ್ಲಿ ಕೇಶ ವಿನ್ಯಾಸ, ದಂಪತಿಗಳಿಗೆ ಭಾರತೀಯ ಸಾಂಪ್ರದಾಯಿಕ ಉಡುಗೆ ತೊಡುಗೆ, ವಾಯ್ಸ್ ಆಫ್ ಕನಕೋತ್ಸವ ಕಾರ್ಯಕ್ರಮ ಗ್ರಾಮೀಣ ಭಾಗದ ಜನರಿಗೆ ಅವಕಾಶ ಕಲ್ಪಿಸಿದವು.</p>.<p>ಭಾರತೀಯ ಸಾಂಪ್ರದಾಯಿಕ ಉಡುಗೆ ತೊಡುಗೆ ಸ್ಪರ್ಧೆಯಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಎಲ್ಲ ಧರ್ಮದ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಎಲ್ಲರ ಗಮನ ಸೆಳೆದರು.</p>.<p>ಕೇಶವಿನ್ಯಾಸ ಸ್ಪರ್ಧೆಯಲ್ಲಿ ಹದಿಹರೆಯದಿಂದ ವಯಸ್ಸಾದವರೆಗೂ ಪಾಲ್ಗೊಂಡು ನಗರದ ಜನತೆಗಿಂತ ನಾವೇನು ಕಮ್ಮಿ ಇಲ್ಲ ಎನ್ನುವಂತೆ ತಮ್ಮ ಕೇಶ ವಿನ್ಯಾಸವನ್ನು ಪ್ರದರ್ಶಿಸಿದರು.</p>.<p>ಕೇಶ ವಿನ್ಯಾಸ ಮತ್ತು ಸಾಂಪ್ರದಾಯಿಕ ಉಡುಗೆ ತೊಡುಗೆ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಬಂದಿದ್ದರಿಂದ ಕಾರ್ಯಕ್ರಮವು ನಿಗದಿತ ಸಮಯಕ್ಕಿಂತ ಹೆಚ್ಚು ಸಮಯ ನಡೆಯಿತು. ಎರಡು ಕಾರ್ಯಕ್ರಮವನ್ನು ಪ್ರತ್ಯೇಕ ವೇದಿಕೆಯಲ್ಲಿ ನಡೆಸಿ, ಅಂತಿಮ ಸುತ್ತಿನ ಸ್ಪರ್ಧಿಗಳನ್ನು ಒಂದೇ ವೇದಿಕೆಯಲ್ಲಿ ನಡೆಸಿ ರಾತ್ರಿ 8 ಗಂಟೆಗೆ ಮುಕ್ತಾಯಗೊಳಿಸಲಾಯಿತು.</p>.<p>ರಸಮಂಜರಿ ಕಾರ್ಯಕ್ರಮವು ರಾತ್ರಿ 8 ಗಂಟೆಗೆ ಪ್ರಾರಂಭಗೊಂಡು ರಾತ್ರಿ 2 ಗಂಟೆ ತನಕ ನಡೆಯಿತು. ಸಾಧು ಕೋಕಿಲ, ರಘು ದೀಕ್ಷಿತ್, ಸಂಚಿತ್ ಹೆಗ್ಡೆ, ದಿವ್ಯ ರಾಮಚಂದ್ರ, ಅಶ್ವಿನ್ ಶರ್ಮ ಸುಮಧುರ ಹಾಡುಗಳ ಮೂಲಕ ನೆರೆದಿದ್ದ ಜನರನ್ನು ರಂಜಿಸಿದರು.</p>.<p>ಶುಕ್ರವಾರ ಬೆಳಿಗ್ಗೆ ಮಹಿಳೆಯರಿಗಾಗಿ ಏರ್ಪಡಿಸಿದ್ದ ಮ್ಯಾರಥಾನ್ ಓಟದಲ್ಲಿ 3,500 ಮಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ವೇದಿಕೆಯಿಂದ ಹೊರಟು ಕುರುಪೇಟೆ ರಸ್ತೆ ಮಾರ್ಗವಾಗಿ ಬಿಜಿಎಸ್ ಬಡಾವಣೆ ಮೂಲಕ ಪೈಪ್ಲೈನ್ ಮಾರ್ಗವಾಗಿ ಕಾರ್ಯಕ್ರಮದ ವೇದಿಕೆಗೆ ಮುಕ್ತಾಯಗೊಳಿಸಿದರು.</p>.<p>ವಾಯ್ಸ್ ಆಫ್ ಕನಕೋತ್ಸವ ಕಾರ್ಯಕ್ರಮ ಪ್ರಾರಂಭಗೊಂಡಿತು. ತಾಲ್ಲೂಕು ಮಟ್ಟದಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ಧಿಗಳು ತಮ್ಮ ಗಾಯನದ ಮೂಲಕ ಪ್ರತಿಭೆ ಅನಾವರಣಗೊಳಿಸಿದರು.</p>.<p>ಶಾಲಾ ಮಕ್ಕಳಿಗಾಗಿ ಸೆಂಟ್ ಥಾಮಸ್ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ವಿಜ್ಞಾನ ಮೇಳಕ್ಕೆ ತಾಲ್ಲೂಕಿನ ಶಾಲೆಯ ಮಕ್ಕಳು ಆಗಮಿಸಿ ವಿಜ್ಞಾನದ ಮಾಡೆಲ್, ವೈಜ್ಞಾನಿಕ ಪ್ರಯೋಗದ ವೀಕ್ಷಣೆ ಮಾಡಿದರು.</p>.<p>ವೀಕ್ಷಣೆ ಪರಿಶೀಲನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಶುಕ್ರವಾರ ಮಧ್ಯಾಹ್ನದ ಆಗಮಿಸಿದರು. ನಡೆಯುತ್ತಿದ್ದ ಸ್ಥಳ, ಅಡಿಗೆ ತಯಾರಿ ಜಾಗ, ಊಟ ವಿತರಣೆ, ವಿಜ್ಞಾನ ಮೇಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಶಾಸಕರು ಜತೆಗಿದ್ದರು.<br><br>ಚಲನಚಿತ್ರ ನಟ ಶಿವರಾಜ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾದರು. ಪ್ರತಿ ಸ್ಪರ್ಧೆಯಲ್ಲೂ ಮೊದಲ, ದ್ವಿತೀಯ, ತೃತೀಯ ಬಹುಮಾನದ ಜತೆಗೆ 10 ಸಮಾಧಾನಕರ ಬಹುಮಾನವನ್ನು ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>