<p><strong>ಚನ್ನಪಟ್ಟಣ</strong>: ರಾಜ್ಯೋತ್ಸವದಂದು ಸಿರಿ ಸಾಮಾಜಿಕ ಮತ್ತು ಶಿಕ್ಷಣ ಟ್ರಸ್ಟ್ ಕನ್ನಡ ಭಾಷೆ, ನೆಲ, ಜಲ, ಪರಿಸರ ಸಂರಕ್ಷಣೆ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿತ್ತು.<br><br>ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉಪನ್ಯಾಸಕ ಬಿ.ಪಿ. ಸುರೇಶ್ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಕನ್ನಡ ರಾಜ್ಯೋತ್ಸವವು ನಾಡಿನ ಏಕತೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕ. ಕನ್ನಡಿಗರು ಭಾಷಾ ಅಭಿಮಾನ ಬೆಳಸಿಕೊಳ್ಳುವ ಅಗತ್ಯವಿದೆ ಎಂದರು.</p>.<p>ಕರ್ನಾಟಕದಲ್ಲಿ ಕನ್ನಡವೇ ಮೊದಲು. ನಾಡಿನಾದ್ಯಂತ ಪ್ರತಿಯೊಬ್ಬರು ವ್ಯವಹಾರಿಕ ಭಾಷೆಯಾಗಿ ಕನ್ನಡವನ್ನೇ ಬಳಸಬೇಕು, ಕನ್ನಡವನ್ನು ಬೆಳೆಸಬೇಕು ಎಂದು ಬಿ.ಆರ್. ಶಿವಕುಮಾರ್ ಬ್ಯಾಡರಹಳ್ಳಿ ಹೇಳಿದರು. </p>.<p> <br /> ಭಾವಿಪ ಅಧ್ಯಕ್ಷ ಗುರುಮಾದಯ್ಯ, ನಿವೃತ್ತ ಫಾರ್ಮಸಿ ಅಧಿಕಾರಿ ಎಂ. ವೇದಮೂರ್ತಿ, ಸಮರ್ಪಣಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಎಸ್.ಆರ್.ಮನುಜ, ಪತ್ರಕರ್ತ ಎಲೆಕೇರಿ ಮಂಜುನಾಥ್, ಅಪ್ಪಾಜಿಗೌಡ, ಭರತ್ ಕುಮಾರ್ ಭಾಗವಹಿಸಿದ್ದರು.<br /><br /> ಟ್ರಸ್ಟ್ ಕಾರ್ಯದರ್ಶಿ ಎಸ್. ಪೂರ್ಣಿಮಾ ಪ್ರಾಸ್ತಾವಿಕ ಮಾತನಾಡಿದರು. ಗಾಯಕರಾದ ಗುಬ್ಬಿ ಆನಂದ್, ಭರತ್ ಕುಮಾರ್ ಕನ್ನಡ ನಾಡುನುಡಿ ಬಿಂಬಿಸುವ ಗಾಯನ ನಡೆಸಿಕೊಟ್ಟರು. ಬಿವಿಎಸ್ ಸಂಚಾಲಕ ಎಸ್. ಕುಮಾರ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ರಾಜ್ಯೋತ್ಸವದಂದು ಸಿರಿ ಸಾಮಾಜಿಕ ಮತ್ತು ಶಿಕ್ಷಣ ಟ್ರಸ್ಟ್ ಕನ್ನಡ ಭಾಷೆ, ನೆಲ, ಜಲ, ಪರಿಸರ ಸಂರಕ್ಷಣೆ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿತ್ತು.<br><br>ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉಪನ್ಯಾಸಕ ಬಿ.ಪಿ. ಸುರೇಶ್ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಕನ್ನಡ ರಾಜ್ಯೋತ್ಸವವು ನಾಡಿನ ಏಕತೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕ. ಕನ್ನಡಿಗರು ಭಾಷಾ ಅಭಿಮಾನ ಬೆಳಸಿಕೊಳ್ಳುವ ಅಗತ್ಯವಿದೆ ಎಂದರು.</p>.<p>ಕರ್ನಾಟಕದಲ್ಲಿ ಕನ್ನಡವೇ ಮೊದಲು. ನಾಡಿನಾದ್ಯಂತ ಪ್ರತಿಯೊಬ್ಬರು ವ್ಯವಹಾರಿಕ ಭಾಷೆಯಾಗಿ ಕನ್ನಡವನ್ನೇ ಬಳಸಬೇಕು, ಕನ್ನಡವನ್ನು ಬೆಳೆಸಬೇಕು ಎಂದು ಬಿ.ಆರ್. ಶಿವಕುಮಾರ್ ಬ್ಯಾಡರಹಳ್ಳಿ ಹೇಳಿದರು. </p>.<p> <br /> ಭಾವಿಪ ಅಧ್ಯಕ್ಷ ಗುರುಮಾದಯ್ಯ, ನಿವೃತ್ತ ಫಾರ್ಮಸಿ ಅಧಿಕಾರಿ ಎಂ. ವೇದಮೂರ್ತಿ, ಸಮರ್ಪಣಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಎಸ್.ಆರ್.ಮನುಜ, ಪತ್ರಕರ್ತ ಎಲೆಕೇರಿ ಮಂಜುನಾಥ್, ಅಪ್ಪಾಜಿಗೌಡ, ಭರತ್ ಕುಮಾರ್ ಭಾಗವಹಿಸಿದ್ದರು.<br /><br /> ಟ್ರಸ್ಟ್ ಕಾರ್ಯದರ್ಶಿ ಎಸ್. ಪೂರ್ಣಿಮಾ ಪ್ರಾಸ್ತಾವಿಕ ಮಾತನಾಡಿದರು. ಗಾಯಕರಾದ ಗುಬ್ಬಿ ಆನಂದ್, ಭರತ್ ಕುಮಾರ್ ಕನ್ನಡ ನಾಡುನುಡಿ ಬಿಂಬಿಸುವ ಗಾಯನ ನಡೆಸಿಕೊಟ್ಟರು. ಬಿವಿಎಸ್ ಸಂಚಾಲಕ ಎಸ್. ಕುಮಾರ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>