<p><strong>ಚನ್ನಪಟ್ಟಣ: </strong>ಕೆರೆಗಳಲ್ಲಿ ನೀರಿದ್ದರೆ ಮಾತ್ರ ಗ್ರಾಮಗಳಲ್ಲಿ ಸಮೃದ್ಧಿ ಕಾಣಲು ಸಾಧ್ಯ ಎಂದು ಮುಖಂಡ ಸಿ.ಪಿ.ರಾಜೇಶ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಮಳೂರುಪಟ್ಟಣ ಕೆರೆಗೆ ಸೋಮವಾರ ಬಾಗಿನ ಸಲ್ಲಿಸಿ ಮಾತನಾಡಿದರು. ಒಂದು ಗ್ರಾಮದ ಕೆರೆಯಲ್ಲಿ ನೀರು ಇದ್ದರೆ ಗ್ರಾಮಸ್ಥರು ತಮ್ಮ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡು ಸ್ವಾವಲಂಬಿಗಳಾಗುತ್ತಾರೆ. ಗ್ರಾಮಸ್ಥರು ಕೆರೆ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.</p>.<p>ಕೃಷಿ ಆಧಾರಿತ ಮತ್ತು ತೋಟಗಾರಿಕೆ ಬೆಳೆ ಬೆಳೆಯಲು ಕೃಷಿ ಇಲಾಖೆಯಿಂದ ಸಹಾಯ ಧನ ಸಿಗುತ್ತದೆ. ಈ ಬಗ್ಗೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು. ನರೇಗಾ ಸೇರಿದಂತೆ ಸರ್ಕಾರದಿಂದ ಸಿಗುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಕಣ್ವ ಏತ ನೀರಾವರಿ ಯೋಜನೆಯಿಂದ ಕೆರೆಗಳು ಭರ್ತಿಯಾಗಿವೆ. ರೈತರು ಹನಿ ನೀರಾವರಿ, ಸಣ್ಣ ನೀರಾವರಿ ಅಳವಡಿಸಿಕೊಂಡು ಸದ್ಬಳಕೆಗೆ ಮುಂದಾಗಬೇಕೆಂದು ತಿಳಿಸಿದರು.</p>.<p><strong>ನೀರಾವರಿ ಯೋಜನೆ ರೂಪಿಸಿದ ಯೋಗೇಶ್ವರ್:</strong> ತಾಲ್ಲೂಕಿನ ರೈತರ ಕಷ್ಟ ಅರಿತು ಆಗಿನ ಶಾಸಕ ಸಿ.ಪಿ.ಯೋಗೇಶ್ವರ್ ಕಣ್ವ ಏತ ನೀರಾವರಿ ರೂಪಿಸಿದರು ಎಂದು ಅವರ ಸೋದರ ಸಿ.ಪಿ.ರಾಜೇಶ್ ಹೇಳಿದರು.</p>.<p>ಕೆರೆಗಳನ್ನು ತುಂಬಿಸಿದ ಹಿನ್ನೆಲೆಯಲ್ಲಿ ಅಂತರ್ಜಲದ ಮಟ್ಟ ಹೆಚ್ಚಾಗಿದೆ. ಬತ್ತಿಹೋದ ಕೊಳವೆ ಬಾವಿಗಳು ಪುನಶ್ಚೇತನಗೊಂಡಿವೆ. ಇದರಿಂದ ರೈತರು ಕೃಷಿ ಮತ್ತು ತೋಟಗಾರಿಕೆ, ಹೈನುಗಾರಿಕೆಯಲ್ಲಿ ತೊಡಗಲು ಸಹಾಯಕವಾಗಿದೆ ಎಂದು ತಿಳಿಸಿದರು</p>.<p>ಮಳೂರುಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ.ಕುಮಾರ್, ಮುಖಂಡರಾದ ಮಳೂರುಪಟ್ಟಣ ಕುಮಾರ್, ಶೋಭಾ, ಪಿಡಿಒ ಶ್ರೀದೇವಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಎಂ.ಡಿ.ಚಾಮರಾಜು, ಮುಖಂಡರಾದ ಶಿವಲಿಂಗಯ್ಯ, ಸಿದ್ದಪ್ಪ, ಪುಟ್ಟೀರೇಗೌಡ, ಚನ್ನಮ್ಮ, ನಂಜೇಶ್, ಕರಿಯಪ್ಪ, ಚೌಡಯ್ಯ, ಮುದ್ದು, ಎಂ.ಎಲ್.ಪುಟ್ಟಪ್ಪ, ಎಂ.ಕೆ.ಕಾಂತರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ಕೆರೆಗಳಲ್ಲಿ ನೀರಿದ್ದರೆ ಮಾತ್ರ ಗ್ರಾಮಗಳಲ್ಲಿ ಸಮೃದ್ಧಿ ಕಾಣಲು ಸಾಧ್ಯ ಎಂದು ಮುಖಂಡ ಸಿ.ಪಿ.ರಾಜೇಶ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಮಳೂರುಪಟ್ಟಣ ಕೆರೆಗೆ ಸೋಮವಾರ ಬಾಗಿನ ಸಲ್ಲಿಸಿ ಮಾತನಾಡಿದರು. ಒಂದು ಗ್ರಾಮದ ಕೆರೆಯಲ್ಲಿ ನೀರು ಇದ್ದರೆ ಗ್ರಾಮಸ್ಥರು ತಮ್ಮ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡು ಸ್ವಾವಲಂಬಿಗಳಾಗುತ್ತಾರೆ. ಗ್ರಾಮಸ್ಥರು ಕೆರೆ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.</p>.<p>ಕೃಷಿ ಆಧಾರಿತ ಮತ್ತು ತೋಟಗಾರಿಕೆ ಬೆಳೆ ಬೆಳೆಯಲು ಕೃಷಿ ಇಲಾಖೆಯಿಂದ ಸಹಾಯ ಧನ ಸಿಗುತ್ತದೆ. ಈ ಬಗ್ಗೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು. ನರೇಗಾ ಸೇರಿದಂತೆ ಸರ್ಕಾರದಿಂದ ಸಿಗುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಕಣ್ವ ಏತ ನೀರಾವರಿ ಯೋಜನೆಯಿಂದ ಕೆರೆಗಳು ಭರ್ತಿಯಾಗಿವೆ. ರೈತರು ಹನಿ ನೀರಾವರಿ, ಸಣ್ಣ ನೀರಾವರಿ ಅಳವಡಿಸಿಕೊಂಡು ಸದ್ಬಳಕೆಗೆ ಮುಂದಾಗಬೇಕೆಂದು ತಿಳಿಸಿದರು.</p>.<p><strong>ನೀರಾವರಿ ಯೋಜನೆ ರೂಪಿಸಿದ ಯೋಗೇಶ್ವರ್:</strong> ತಾಲ್ಲೂಕಿನ ರೈತರ ಕಷ್ಟ ಅರಿತು ಆಗಿನ ಶಾಸಕ ಸಿ.ಪಿ.ಯೋಗೇಶ್ವರ್ ಕಣ್ವ ಏತ ನೀರಾವರಿ ರೂಪಿಸಿದರು ಎಂದು ಅವರ ಸೋದರ ಸಿ.ಪಿ.ರಾಜೇಶ್ ಹೇಳಿದರು.</p>.<p>ಕೆರೆಗಳನ್ನು ತುಂಬಿಸಿದ ಹಿನ್ನೆಲೆಯಲ್ಲಿ ಅಂತರ್ಜಲದ ಮಟ್ಟ ಹೆಚ್ಚಾಗಿದೆ. ಬತ್ತಿಹೋದ ಕೊಳವೆ ಬಾವಿಗಳು ಪುನಶ್ಚೇತನಗೊಂಡಿವೆ. ಇದರಿಂದ ರೈತರು ಕೃಷಿ ಮತ್ತು ತೋಟಗಾರಿಕೆ, ಹೈನುಗಾರಿಕೆಯಲ್ಲಿ ತೊಡಗಲು ಸಹಾಯಕವಾಗಿದೆ ಎಂದು ತಿಳಿಸಿದರು</p>.<p>ಮಳೂರುಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ.ಕುಮಾರ್, ಮುಖಂಡರಾದ ಮಳೂರುಪಟ್ಟಣ ಕುಮಾರ್, ಶೋಭಾ, ಪಿಡಿಒ ಶ್ರೀದೇವಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಎಂ.ಡಿ.ಚಾಮರಾಜು, ಮುಖಂಡರಾದ ಶಿವಲಿಂಗಯ್ಯ, ಸಿದ್ದಪ್ಪ, ಪುಟ್ಟೀರೇಗೌಡ, ಚನ್ನಮ್ಮ, ನಂಜೇಶ್, ಕರಿಯಪ್ಪ, ಚೌಡಯ್ಯ, ಮುದ್ದು, ಎಂ.ಎಲ್.ಪುಟ್ಟಪ್ಪ, ಎಂ.ಕೆ.ಕಾಂತರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>