<p><strong>ರಾಮನಗರ:</strong> ಕನ್ನಡಪರ ಸಂಘಟನೆಗಳು ಇದೇ 5ರಂದು ಕರೆ ನೀಡಿರುವ ಕರ್ನಾಟಕ ಬಂದ್ನ್ನು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಬೆಂಬಲಿಸಲಿದೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ<br />ಕಬ್ಬಾಳೇಗೌಡ ತಿಳಿಸಿದರು.</p>.<p>‘ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮೂಲಕ ನಾಡದ್ರೋಹ ಕೆಲಸ ಮಾಡಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸುವ ಜೊತೆಗೆ ಕನ್ನಡಪರ ಹೋರಾಟಗಾರರ ಕುರಿತು ಶಾಸಕರಾದ ಬಸನಗೌಡ ಪಾಟೀಲ್<br />ಯತ್ನಾಳ, ರೇಣುಕಾಚಾರ್ಯ, ಅರವಿಂದ ಬೆಲ್ಲದ್ ಸೇರಿದಂತೆ ಅನೇಕರು ಗೇಲಿ ಮಾಡಿರುವುದನ್ನು ಪ್ರತಿಯೊಬ್ಬ ಕನ್ನಡಿಗನೂ ಖಂಡಿಸಬೇಕಾಗಿದೆ. ಹೀಗಾಗಿ ಬಂದ್ ಬೆಂಬಲಿಸಲು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ<br />ಸೂಚನೆ ನೀಡಿದ್ದಾರೆ. ಶನಿವಾರದ ಬಂದ್ನಲ್ಲಿ ಭಾಗವಹಿಸುತ್ತೇವೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಸತ್ಯನಾರಾಯಣ ಮಾತನಾಡಿ, ಬಂದ್ ದಿನ ಕರವೇ ಕಾರ್ಯಕರ್ತರು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಘೋಷಣೆ ಕೂಗುತ್ತೇವೆ ಎಂದರು.</p>.<p>ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್, ಜಿಲ್ಲಾ ರೈತ ಘಟಕದ ಅಧ್ಯಕ್ಷ ಶಂಭುಗೌಡ, ಪದಾಧಿಕಾರಿಗಳಾದ ಹೊ.ಪು.ಸಾಗರ್, ದೇವರಾಜು, ಅಭಿಲಾಷ್, ನಿಖಿಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಕನ್ನಡಪರ ಸಂಘಟನೆಗಳು ಇದೇ 5ರಂದು ಕರೆ ನೀಡಿರುವ ಕರ್ನಾಟಕ ಬಂದ್ನ್ನು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಬೆಂಬಲಿಸಲಿದೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ<br />ಕಬ್ಬಾಳೇಗೌಡ ತಿಳಿಸಿದರು.</p>.<p>‘ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮೂಲಕ ನಾಡದ್ರೋಹ ಕೆಲಸ ಮಾಡಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸುವ ಜೊತೆಗೆ ಕನ್ನಡಪರ ಹೋರಾಟಗಾರರ ಕುರಿತು ಶಾಸಕರಾದ ಬಸನಗೌಡ ಪಾಟೀಲ್<br />ಯತ್ನಾಳ, ರೇಣುಕಾಚಾರ್ಯ, ಅರವಿಂದ ಬೆಲ್ಲದ್ ಸೇರಿದಂತೆ ಅನೇಕರು ಗೇಲಿ ಮಾಡಿರುವುದನ್ನು ಪ್ರತಿಯೊಬ್ಬ ಕನ್ನಡಿಗನೂ ಖಂಡಿಸಬೇಕಾಗಿದೆ. ಹೀಗಾಗಿ ಬಂದ್ ಬೆಂಬಲಿಸಲು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ<br />ಸೂಚನೆ ನೀಡಿದ್ದಾರೆ. ಶನಿವಾರದ ಬಂದ್ನಲ್ಲಿ ಭಾಗವಹಿಸುತ್ತೇವೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಸತ್ಯನಾರಾಯಣ ಮಾತನಾಡಿ, ಬಂದ್ ದಿನ ಕರವೇ ಕಾರ್ಯಕರ್ತರು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಘೋಷಣೆ ಕೂಗುತ್ತೇವೆ ಎಂದರು.</p>.<p>ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್, ಜಿಲ್ಲಾ ರೈತ ಘಟಕದ ಅಧ್ಯಕ್ಷ ಶಂಭುಗೌಡ, ಪದಾಧಿಕಾರಿಗಳಾದ ಹೊ.ಪು.ಸಾಗರ್, ದೇವರಾಜು, ಅಭಿಲಾಷ್, ನಿಖಿಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>