ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮತ್ತೆ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ: ಸಚಿವ ಅಶೋಕ

Last Updated 4 ಮಾರ್ಚ್ 2023, 9:10 IST
ಅಕ್ಷರ ಗಾತ್ರ

ರಾಮನಗರ: ರಾಜ್ಯದಲ್ಲಿ ಮತ್ತೆ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ. ಕಾಂಗ್ರೆಸ್ ಎ ಮತ್ತು ಬಿ ಟೀಮ್ ಎರಡನ್ನೂ ಮನೆಗೆ ಕಳುಹಿಸಲಾಗುವುದು ಎಂದು ಕಂದಾಯ ಸಚಿವ ಅಶೋಕ ಹೇಳಿದರು.

ಚನ್ನಪಟ್ಟಣದಲ್ಲಿ ಶನಿವಾರ ಬಿಜೆಪಿಯ‌ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಈ ಭಾಗದಲ್ಲಿ ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ಗೆ ಮತ ಹಾಕಿದ ಹಾಗೇ. ಹೀಗಾಗಿ ಎಲ್ಲರೂ ಬಿಜೆಪಿಗೆ ಬೆಂಬಲ ನೀಡುತ್ತಾರೆ ಎಂದರು.

ರಾಜ್ಯದಲ್ಲಿ ಈ ಬಾರಿ ಕಿಚಡಿ ಸರ್ಕಾರ ಬೇಡ. ಕೇಂದ್ರದ ರೀತಿ ಇಲ್ಲಿಯೂ ಸ್ಥಿರ ಸರ್ಕಾರ ಬರಬೇಕು ಎನ್ನುವುದು ಎಲ್ಲರ ಅಭಿಪ್ರಾಯ ಆಗಿದೆ ಎಂದರು.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಗನ ಮೇಲೆ‌ ನಡೆದ ಲೋಕಾಯುಕ್ತ ದಾಳಿ ಆಗಿದೆ ಎನ್ನುವುದನ್ನು ಮುಂದಿಟ್ಟುಕೊಂಡು ಕಾಂಗ್ರೆಸ್, ಬಿಜೆಪಿಯವರು ಮಾತನಾಡುವುದು ಬೇಡ. ನಮ್ಮಲ್ಲಿ ಪಾರದರ್ಶಕತೆ ಇರುವ ಕಾರಣಕ್ಕೇ ಈ ದಾಳಿ ನಡೆದಿದ್ದು, ಸಂಪೂರ್ಣವಾಗಿ‌ ತನಿಖೆ ಮಾಡಲಾಗುವುದು ಎಂದರು.

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ಸಂಬಂಧ ಮುಖಾಮುಖಿಯಾಗಿ ಮಾತನಾಡಿದ್ದು ಎಲ್ಲರ ಅಭಿಪ್ರಾಯವನ್ನು ಕೇಂದ್ರದ ನಾಯಕರ ಮುಂದೆ ಇಟ್ಟಿದ್ದೇವೆ. ನಾಯಕರು ಹಸಿರು‌ ನಿಶಾನೆ ತೋರಿದ ಬಳಿಕ ಮುಂದಿ‌ನ ಕೆಲಸ ಮಾಡುತ್ತೇವೆ ಎಂದರು.

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಅಶ್ವತ್ಥನಾರಾಯಣ, ವಿಧಾನ ಪರಿಷತ್ ಸದಸ್ಯ ಸಿ.ಪಿ.‌ ಯೋಗೇಶ್ವರ್ ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಚನ್ನಪಟ್ಟಣದ ಅಪ್ರಮೇಯ ಸ್ವಾಮಿ ದೇವಾಲಯದಿಂದ ಪಟ್ಟಣದವರೆಗೆ ರೋಡ್ ಶೋ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT