ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಿಪುರದಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ನಮ್ಮ ರಾಜ್ಯದ ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅಂತೆಯೇ, ಸಿದ್ದರಾಮಯ್ಯ ಅವರು ಆಪರೇಷನ್ ಮಾಡಿಸಿಕೊಂಡಿದ್ದು ಈ ಕಾರಣಕ್ಕೆ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಅವರನ್ನು ಭೇಟಿ ಮಾಡಿದ ತಕ್ಷಣಕ್ಕೆ ಕಾಂಗ್ರೆಸ್ಗೆ ಹೋಗುತ್ತೇನೆ ಎನ್ನಲು ಆಗುವುದಿಲ್ಲ. ನಾನು ಇವತ್ತಿಗೂ ಬಿಜೆಪಿಯಲ್ಲೇ ಇದ್ದೇನೆ’ ಎಂದು ಪ್ರತಿಕ್ರಿಯಿಸಿದರು.