ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣದ ಸಂಕಲ್ಪ, ಶ್ರೀನಿವಾಸ ಕಲ್ಯಾಣೋತ್ಸವ ಮೊದಲಾದ ಕಾರ್ಯಕ್ರಮಗಳ ಮೂಲಕ ಈ ಬಾರಿಯ ಚುನಾವಣೆ ಮತ್ತೊಂದು ಮಟ್ಟಕ್ಕೆ ಹೋಗುವ ಲಕ್ಷಣಗಳು ಕಾಣಿಸುತ್ತಿವೆ. ಕುಮಾರಸ್ವಾಮಿ ಅವರಿಗೆ ಇಲ್ಲಿಂದಲೇ ಮಗನ ರಾಜಕೀಯ ಭವಿಷ್ಯ ರೂಪಿಸುವ ಆಕಾಂಕ್ಷೆ ಇದ್ದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ತವರು ಜಿಲ್ಲೆಯಲ್ಲಿನ ಈ ಕ್ಷೇತ್ರ ಪ್ರತಿಷ್ಠೆಯ ಪ್ರಶ್ನೆ ಆಗಿದೆ.