<p><strong>ರಾಮನಗರ</strong>: ‘ವಿದ್ಯಾರ್ಥಿನಿಯರು ಶಾಲೆಯಲ್ಲಿನ ಸಮವಸ್ತ್ರದ ವೇಲ್ ಅನ್ನು ಕೊರಳಿಗೆ ಸುತ್ತುವ ಬದಲು ತಲೆಗೆ ಸುತ್ತಿದ್ದನ್ನೇ ತಪ್ಪು ಎಂಬಂತೆ ಬಿಂಬಿಸಲಾಗಿದೆ. ಕೋಮು ವಿಷಬೀಜ ಬಿತ್ತುವ ವಿದ್ಯಾರ್ಥಿ ಸಂಘಟನೆಗಳಿಗೆ ಇದೇ ಪುಷ್ಟಿ ನೀಡಿದಂತಾಗಿದೆ’ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಬಸವಣ್ಣನಂತಹವರು ಹುಟ್ಟಿದ ನಾಡಿನಲ್ಲಿ ಸ್ವಾತಂತ್ರ್ಯ ಬಂದ 70 ವರ್ಷದ ನಂತರವೂ ಹಿಜಾಬ್ ಧರಿಸುವ ವಿಚಾರ ಎಲ್ಲಿಯೂ ಚರ್ಚೆ ಆಗಿರಲಿಲ್ಲ. ಇದೀಗ ಇದೇ ವಿಚಾರ ನ್ಯಾಯಾಲಯದ ಮೆಟ್ಟಿಲು ಏರಿದೆ. ಮುಂದಿನ ವಿಚಾರಣೆವರೆಗೂ ಯಾವುದೇ ಧಾರ್ಮಿಕ ಆಚರಣೆಗಳನ್ನು ಶಾಲೆಗೆ ತರಬೇಡಿ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಈ ಧಾರ್ಮಿಕ ಆಚರಣೆ ವ್ಯಾಪ್ತಿಯಲ್ಲಿ ಕುಂಕುಮ, ತಾಳಿ, ಬಳೆ, ಹಿಜಾಬ್ ಎಲ್ಲವೂ ಬರುತ್ತದೆಯೇ ಎಂಬುದನ್ನು ಕಾದು ನೋಡೋಣ. ಹೈಕೋರ್ಟ್ ಪೀಠವು ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸಿದ್ದು, ನ್ಯಾಯಾಧೀಶರೇ ಸ್ಪಷ್ಟಪಡಿಸುವವರೆಗೂ ಕಾಯೋಣ’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಕೇಸರಿ ಶಾಲನ್ನು ಛೂ ಬಿಟ್ಟು ಹಿಜಾಬ್ ವಿಚಾರವನ್ನು ಉದ್ದೇಶಪೂರ್ವಕವಾಗಿ ಬಿಂಬಿಸಲಾಗುತ್ತಿದೆ. ರಾಜ್ಯ ಸರ್ಕಾರ ಎಲ್ಲ ವಿಚಾರದಲ್ಲೂ ವಿಫಲ ಆಗಿದೆ. ತನ್ನ ವೈಫಲ್ಯ ಮುಚ್ಚುಹಾಕಲು ಈ ವಿಚಾರವನ್ನು ಮುಂದೆ ತರಲಾಗಿದೆ’ ಎಂದು ಅವರು ದೂರಿದರು.</p>.<p>‘ಸಮವಸ್ತ್ರ ಎಂಬುದು ವಿದ್ಯಾರ್ಥಿಗಳಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆ ಬಿತ್ತುವ ವಿಚಾರ. ಹಿಜಾಬ್ ಧರಿಸುವುದರಿಂದ ಸಮವಸ್ತ್ರ ವಿಚಾರದಲ್ಲಿ ಯಾವುದೇ ಕುಂದು ಉಂಟಾಗುವುದಿಲ್ಲ’ ಎಂದು ಸ್ಪಷ್ಟನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ವಿದ್ಯಾರ್ಥಿನಿಯರು ಶಾಲೆಯಲ್ಲಿನ ಸಮವಸ್ತ್ರದ ವೇಲ್ ಅನ್ನು ಕೊರಳಿಗೆ ಸುತ್ತುವ ಬದಲು ತಲೆಗೆ ಸುತ್ತಿದ್ದನ್ನೇ ತಪ್ಪು ಎಂಬಂತೆ ಬಿಂಬಿಸಲಾಗಿದೆ. ಕೋಮು ವಿಷಬೀಜ ಬಿತ್ತುವ ವಿದ್ಯಾರ್ಥಿ ಸಂಘಟನೆಗಳಿಗೆ ಇದೇ ಪುಷ್ಟಿ ನೀಡಿದಂತಾಗಿದೆ’ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಬಸವಣ್ಣನಂತಹವರು ಹುಟ್ಟಿದ ನಾಡಿನಲ್ಲಿ ಸ್ವಾತಂತ್ರ್ಯ ಬಂದ 70 ವರ್ಷದ ನಂತರವೂ ಹಿಜಾಬ್ ಧರಿಸುವ ವಿಚಾರ ಎಲ್ಲಿಯೂ ಚರ್ಚೆ ಆಗಿರಲಿಲ್ಲ. ಇದೀಗ ಇದೇ ವಿಚಾರ ನ್ಯಾಯಾಲಯದ ಮೆಟ್ಟಿಲು ಏರಿದೆ. ಮುಂದಿನ ವಿಚಾರಣೆವರೆಗೂ ಯಾವುದೇ ಧಾರ್ಮಿಕ ಆಚರಣೆಗಳನ್ನು ಶಾಲೆಗೆ ತರಬೇಡಿ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಈ ಧಾರ್ಮಿಕ ಆಚರಣೆ ವ್ಯಾಪ್ತಿಯಲ್ಲಿ ಕುಂಕುಮ, ತಾಳಿ, ಬಳೆ, ಹಿಜಾಬ್ ಎಲ್ಲವೂ ಬರುತ್ತದೆಯೇ ಎಂಬುದನ್ನು ಕಾದು ನೋಡೋಣ. ಹೈಕೋರ್ಟ್ ಪೀಠವು ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸಿದ್ದು, ನ್ಯಾಯಾಧೀಶರೇ ಸ್ಪಷ್ಟಪಡಿಸುವವರೆಗೂ ಕಾಯೋಣ’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಕೇಸರಿ ಶಾಲನ್ನು ಛೂ ಬಿಟ್ಟು ಹಿಜಾಬ್ ವಿಚಾರವನ್ನು ಉದ್ದೇಶಪೂರ್ವಕವಾಗಿ ಬಿಂಬಿಸಲಾಗುತ್ತಿದೆ. ರಾಜ್ಯ ಸರ್ಕಾರ ಎಲ್ಲ ವಿಚಾರದಲ್ಲೂ ವಿಫಲ ಆಗಿದೆ. ತನ್ನ ವೈಫಲ್ಯ ಮುಚ್ಚುಹಾಕಲು ಈ ವಿಚಾರವನ್ನು ಮುಂದೆ ತರಲಾಗಿದೆ’ ಎಂದು ಅವರು ದೂರಿದರು.</p>.<p>‘ಸಮವಸ್ತ್ರ ಎಂಬುದು ವಿದ್ಯಾರ್ಥಿಗಳಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆ ಬಿತ್ತುವ ವಿಚಾರ. ಹಿಜಾಬ್ ಧರಿಸುವುದರಿಂದ ಸಮವಸ್ತ್ರ ವಿಚಾರದಲ್ಲಿ ಯಾವುದೇ ಕುಂದು ಉಂಟಾಗುವುದಿಲ್ಲ’ ಎಂದು ಸ್ಪಷ್ಟನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>