<p><strong>ರಾಮನಗರ: </strong>ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ಮುಂದುವರಿದಿದ್ದು, ಕಂದಾಯ ಸಚಿವ ಆರ್. ಅಶೋಕ್ ಶನಿವಾರ ಬಿಡದಿಯ ತೋಟದ ಮನೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದರು.</p>.<p>ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಸಂಬಂಧ ಅಶೋಕ್, ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದರು. ದೊಡ್ಡಬಳ್ಳಾಪುರದಲ್ಲಿ ಮೈತ್ರಿಗೆ ಹಸಿರು ನಿಶಾನೆ ತೋರಿರುವ ಎಚ್ಡಿಕೆ, ಕಲಬುರ್ಗಿ ವಿಚಾರದಲ್ಲಿ ದೇವೇಗೌಡರನ್ನು ಸಂಪರ್ಕಿಸಿದ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು ಎನ್ನಲಾಗಿದೆ.</p>.<p>ಭೇಟಿ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅಶೋಕ್ ‘ಹೊಂದಾಣಿಕೆ ಬಗ್ಗೆ ಬಿಜೆಪಿಯಿಂದ ಪ್ರಸ್ತಾವ ಮಾಡಿದ್ದೇನೆ. ಸೋಮವಾರದಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಆ ಸಂದರ್ಭ ಮಾತುಕತೆ ನಡೆಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ’ ಎಂದು ತಿಳಿಸಿದರು.</p>.<p>‘ಚುನಾವಣೆ ಮಾತುಕತೆಗೆ ಬರುವಂತೆ ಶಾಸಕ ಸಾ.ರಾ. ಮಹೇಶ್ ದೂರವಾಣಿ ಮೂಲಕ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದೇನೆ. ದೊಡ್ಡಬಳ್ಳಾಪುರಕ್ಕೆ ಸಂಬಂಧಿಸಿದಂತೆ ಪಾಸಿಟಿವ್ ಅಭಿಪ್ರಾಯ ಸಿಕ್ಕಿದೆ. ಸೋಮವಾರ ಮಧ್ಯಾಹ್ನ 4ಕ್ಕೆ ಜೆಡಿಎಸ್ ಸಭೆ ನಡೆಯಲಿದ್ದು, ಆ ಬಳಿಕ ಅವರು ಅಭಿಪ್ರಾಯ ತಿಳಿಸಲಿದ್ದಾರೆ’ ಎಂದರು. ಕಲಬುರ್ಗಿ ಪಾಲಿಕೆಯಲ್ಲಿ ಮೇಯರ್ ಸ್ಥಾನಕ್ಕೆ ಜೆಡಿಎಸ್ ಬೇಡಿಕೆ ಇಟ್ಟಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.</p>.<p>‘ಕಲಬುರ್ಗಿಯಲ್ಲಿ ಈಗಾಗಲೇ ಜೆಡಿಎಸ್ ಕಾಂಗ್ರೆಸ್ಗೆ ಬೆಂಬಲ ಘೋಷಿಸಿದೆ ಎನ್ನುವುದು ಸುಳ್ಳು ಸುದ್ದಿ. ಈ ವಿಚಾರದಲ್ಲಿ ಕಾಂಗ್ರೆಸ್ನಲ್ಲೇ ಗೊಂದಲ ಇದೆ. ಜೆಡಿಎಸ್ ಜೊತೆ ಇನ್ನೂ ಸಿದ್ದರಾಮಯ್ಯ ಅವರೇ ಒಪ್ಪಿಲ್ಲ’ ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/district/belagavi/karnataka-politics-bjp-mla-shrimant-patil-bs-yediyurappa-siddaramaiah-dk-shivakumara-congress-865646.html" target="_blank"> ಕಾಂಗ್ರೆಸ್ನಿಂದ ಬರುವುದಕ್ಕೆ ಬಿಜೆಪಿಯವರು ಹಣದ ಆಫರ್ ಕೊಟ್ಟಿದ್ದು ನಿಜ: ಪಾಟೀಲ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ಮುಂದುವರಿದಿದ್ದು, ಕಂದಾಯ ಸಚಿವ ಆರ್. ಅಶೋಕ್ ಶನಿವಾರ ಬಿಡದಿಯ ತೋಟದ ಮನೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದರು.</p>.<p>ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಸಂಬಂಧ ಅಶೋಕ್, ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದರು. ದೊಡ್ಡಬಳ್ಳಾಪುರದಲ್ಲಿ ಮೈತ್ರಿಗೆ ಹಸಿರು ನಿಶಾನೆ ತೋರಿರುವ ಎಚ್ಡಿಕೆ, ಕಲಬುರ್ಗಿ ವಿಚಾರದಲ್ಲಿ ದೇವೇಗೌಡರನ್ನು ಸಂಪರ್ಕಿಸಿದ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು ಎನ್ನಲಾಗಿದೆ.</p>.<p>ಭೇಟಿ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅಶೋಕ್ ‘ಹೊಂದಾಣಿಕೆ ಬಗ್ಗೆ ಬಿಜೆಪಿಯಿಂದ ಪ್ರಸ್ತಾವ ಮಾಡಿದ್ದೇನೆ. ಸೋಮವಾರದಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಆ ಸಂದರ್ಭ ಮಾತುಕತೆ ನಡೆಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ’ ಎಂದು ತಿಳಿಸಿದರು.</p>.<p>‘ಚುನಾವಣೆ ಮಾತುಕತೆಗೆ ಬರುವಂತೆ ಶಾಸಕ ಸಾ.ರಾ. ಮಹೇಶ್ ದೂರವಾಣಿ ಮೂಲಕ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದೇನೆ. ದೊಡ್ಡಬಳ್ಳಾಪುರಕ್ಕೆ ಸಂಬಂಧಿಸಿದಂತೆ ಪಾಸಿಟಿವ್ ಅಭಿಪ್ರಾಯ ಸಿಕ್ಕಿದೆ. ಸೋಮವಾರ ಮಧ್ಯಾಹ್ನ 4ಕ್ಕೆ ಜೆಡಿಎಸ್ ಸಭೆ ನಡೆಯಲಿದ್ದು, ಆ ಬಳಿಕ ಅವರು ಅಭಿಪ್ರಾಯ ತಿಳಿಸಲಿದ್ದಾರೆ’ ಎಂದರು. ಕಲಬುರ್ಗಿ ಪಾಲಿಕೆಯಲ್ಲಿ ಮೇಯರ್ ಸ್ಥಾನಕ್ಕೆ ಜೆಡಿಎಸ್ ಬೇಡಿಕೆ ಇಟ್ಟಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.</p>.<p>‘ಕಲಬುರ್ಗಿಯಲ್ಲಿ ಈಗಾಗಲೇ ಜೆಡಿಎಸ್ ಕಾಂಗ್ರೆಸ್ಗೆ ಬೆಂಬಲ ಘೋಷಿಸಿದೆ ಎನ್ನುವುದು ಸುಳ್ಳು ಸುದ್ದಿ. ಈ ವಿಚಾರದಲ್ಲಿ ಕಾಂಗ್ರೆಸ್ನಲ್ಲೇ ಗೊಂದಲ ಇದೆ. ಜೆಡಿಎಸ್ ಜೊತೆ ಇನ್ನೂ ಸಿದ್ದರಾಮಯ್ಯ ಅವರೇ ಒಪ್ಪಿಲ್ಲ’ ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/district/belagavi/karnataka-politics-bjp-mla-shrimant-patil-bs-yediyurappa-siddaramaiah-dk-shivakumara-congress-865646.html" target="_blank"> ಕಾಂಗ್ರೆಸ್ನಿಂದ ಬರುವುದಕ್ಕೆ ಬಿಜೆಪಿಯವರು ಹಣದ ಆಫರ್ ಕೊಟ್ಟಿದ್ದು ನಿಜ: ಪಾಟೀಲ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>