<p><strong>ರಾಮನಗರ: </strong>ಸರ್ಕಾರಿ ಶಾಲಾ ಮಕ್ಕಳಿಗೆ ಏಕೀಕೃತ ವ್ಯವಸ್ಥೆಯಡಿ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು 176 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಆಗಿ ಅಭಿವೃದ್ಧಿಪಡಿಸುತ್ತಿದೆ.</p>.<p>ಇದರಲ್ಲಿ 1ರಿಂದ 12ನೇ ತರಗತಿಯವರೆಗೆ ಒಂದೇ ಆಡಳಿತ ವ್ಯವಸ್ಥೆಯಡಿ ವಿದ್ಯಾರ್ಜನೆ ಸಾಧ್ಯವಾಗಲಿದೆ. ಜಿಲ್ಲೆಯ ಅವ್ವೇರಹಳ್ಳಿ ಸೇರಿದಂತೆ ಹಲವು ಶಾಲೆಗಳು ಈಗಾಗಲೇ ಕಾರ್ಯಾರಂಭ ಮಾಡಿವೆ.</p>.<p>ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಮತ್ತು ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಸರಿಸಮಾನವಾಗಿ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ನಿಟ್ಟಿನಲ್ಲಿ 2017ರಲ್ಲಿ ಸರ್ಕಾರ ಈ ಯೋಜನೆಗೆ ಮುಂದಾಯಿತು. ಈ ಸಂಬಂಧ ಸರ್ವೆ ನಡೆದು ಜಿಲ್ಲೆಯ ನಾಲ್ಕು ಶಾಲೆಗಳು ಕೆಪಿಎಸ್ಗೆ ಆಯ್ಕೆಯಾಗಿವೆ.</p>.<p><strong>ಮೂಲ ಸೌಕರ್ಯಕ್ಕೆ ಒತ್ತು: </strong>ಈ ಶಾಲೆಗಳಲ್ಲಿ ಸುಸಜ್ಜಿತ ಕೊಠಡಿ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಶೌಚಾಲಯ, ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಸುಸಜ್ಜಿತ ಪೀಠೊಪಕರಣಗಳು, ಆಟದ ಮೈದಾನ ಇರಲಿವೆ.</p>.<p>ಸರಾಸರಿ 500 ಮೀ. ವ್ಯಾಪ್ತಿಯಲ್ಲಿ ಇರುವ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಗುರುತಿಸಿ ಕರ್ನಾಟಕ ಪಬ್ಲಿಕ್ ಶಾಲೆ ಆಗಿ ಅಭಿವೃದ್ಧಿಗೊಳಿಸುವುದು ಯೋಜನೆಯಾಗಿದೆ ಎನ್ನುತ್ತಾರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಚ್. ಗಂಗಮಾರೇಗೌಡ.</p>.<p>ಮೂರೂ ಶಿಕ್ಷಣ ಸಂಸ್ಥೆಗಳ ಆಡಳಿತ ಉಸ್ತುವಾರಿಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ ವಹಿಸಿ ಒಂದೇ ವ್ಯವಸ್ಥೆಯಡಿ ತರಲಾಗುತ್ತದೆ. 1ರಿಂದ 5ನೇ ತರಗತಿ ವರೆಗೆ ಕನ್ನಡ ಮಾಧ್ಯಮ, ಆರನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಇರುತ್ತದೆ ಎಂದು ತಿಳಿಸಿದರು.</p>.<p>ಪ್ರತಿ ಬಾರಿ ಟಿಸಿ ಪಡೆಯಬೇಕಿಲ್ಲ. 7ನೇ ಬಳಿಕ ವಿದ್ಯಾರ್ಥಿಗಳು ಟಿ.ಸಿ ಪಡೆದು ಬೇರೆ ಶಾಲೆಗೆ ಹೋಗಬೇಕಾಗುತ್ತದೆ. ಮತ್ತೆ ಪಿಯುಸಿಗೆ ದಾಖಲಾತಿ ಪಡೆಯಬೇಕು. ಆದರೆ ಕೆಪಿಎಸ್ನಲ್ಲಿ 1ನೇ ತರಗತಿಗೆ ಸೇರ್ಪಡೆಯಾದರೆ ದ್ವಿತೀಯ ಪಿಯುಸಿ ತನಕ ಒಂದೆಡೆ ವಿದ್ಯಾಭ್ಯಾಸಕ್ಕೆ ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದರು.</p>.<p>ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಿಸಲಾಗುತ್ತದೆ. ಅಗತ್ಯವಿರುವಷ್ಟು ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕಂಪ್ಯೂಟರ್, ಗಣಿತ, ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಪ್ರಾಯೋಗಿಕ ಕಲಿಕೆಗೆ ಹೆಚ್ಚು ಆದ್ಯತೆ ಕೊಡಲಾಗುವುದು. ಹಾಗೆಯೇ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗೂ ಹೆಚ್ಚಿನ ಪ್ರೋತ್ಸಾಹ ಕೊಟ್ಟು, ಸಮಗ್ರ ಕಲಿಕೆಗೆ ಒತ್ತು ನೀಡಬೇಕು ಎಂಬುದು ಶಿಕ್ಷಣ ಇಲಾಖೆಯ ಧ್ಯೇಯವಾಗಿದೆ ಎಂದು ಅವರು ಹೇಳಿದರು.</p>.<p>ಪ್ರತಿ ತಾಲ್ಲೂಕಿನ ಪ್ರಮುಖ ಹಳ್ಳಿಯೊಂದರಲ್ಲಿ ಈಗಾಗಲೇ ಇರುವ ಪದವಿ ಪೂರ್ವ ಕಾಲೇಜುಗಳನ್ನೇ ಪಬ್ಲಿಕ್ ಶಾಲೆಗಳನ್ನಾಗಿ ಮಾರ್ಪಡಿಸಲಾಗಿದೆ. ಈ ಪಬ್ಲಿಕ್ ಶಾಲೆ ಸುತ್ತಲಿನ ಶಾಲೆಗಳಿಗೂ ಹತ್ತಿರದಲ್ಲಿ ಇದೆಯೇ ಎಂಬುದನ್ನೂ ಗಮನದಲ್ಲಿಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಆ ಊರಿನಲ್ಲಿರುವ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನೆಲ್ಲಾ ಒಗ್ಗೂಡಿಸಿ ಪಬ್ಲಿಕ್ ಶಾಲೆಯ ವ್ಯಾಪ್ತಿಗೆ ತರಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ಪಬ್ಲಿಕ್ ಶಾಲೆಯ ಪ್ರಾಚಾರ್ಯರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.</p>.<p> <strong> ಎಲ್ಲೆಲ್ಲಿ ಕರ್ನಾಟಕ ಶಾಲೆ</strong></p>.<table border="1" cellpadding="1" cellspacing="1" style="width:500px;"> <tbody> <tr> <td>ತಾಲ್ಲೂಕು</td> <td>ಗ್ರಾಮ</td> </tr> <tr> <td>ರಾಮನಗರ</td> <td>ಅವ್ವೇರಹಳ್ಳಿ</td> </tr> <tr> <td>ಮಾಗಡಿ</td> <td>ಕುದೂರು</td> </tr> <tr> <td>ಚನ್ನಪಟ್ಟಣ</td> <td>ಅರಳಾಳುಸಂದ್ರ</td> </tr> <tr> <td>ಕನಕಪುರ</td> <td>ದೊಡ್ಡಾಲಹಳ್ಳಿ</td> </tr> </tbody></table>.<p><br />ಪ್ರತಿ ಗ್ರಾ.ಪಂ.ಗೆ ಒಂದರಂತೆ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿದೆ. ಸದ್ಯ ಪ್ರತಿ ತಾಲ್ಲೂಕಿಗೆ ಒಂದರಂತೆ ಶಾಲೆಗಳನ್ನು ಆರಂಭಿಸಲಾಗಿದೆ.<br /><strong>–ಎಂ.ಎಚ್. ಗಂಗಮಾರೇಗೌಡ,ಉಪನಿರ್ದೇಶಕ, ಸಾರ್ವಜನಿಕ ಶಿಕ್ಷಣ ಇಲಾಖೆ</strong></p>.<p>ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶ ಇದಾಗಿದೆ. ಆಯ್ಕೆಯಾದ ಶಾಲೆಗಳಲ್ಲಿ ಮೂಲಸೌಕರ್ಯ, ಶಿಕ್ಷಕರ ನೇಮಕ ನಡೆಯಲಿದೆ<br />–<strong>ಬಿ.ಎನ್. ಮರಿಗೌಡ,ಕ್ಷೇತ್ರ ಶಿಕ್ಷಣಾಧಿಕಾರಿ</strong></p>.<p>ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಪಬ್ಲಿಕ್ ಶಾಲೆಗಳನ್ನು ತೆರೆದು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಮುಂದಾಗಿರುವುದು ಶ್ಲಾಘನೀಯ.<br />–<strong>ಮಹದೇವಪ್ಪ,ನಿವೃತ್ತ ಮುಖ್ಯಶಿಕ್ಷಕರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಸರ್ಕಾರಿ ಶಾಲಾ ಮಕ್ಕಳಿಗೆ ಏಕೀಕೃತ ವ್ಯವಸ್ಥೆಯಡಿ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು 176 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಆಗಿ ಅಭಿವೃದ್ಧಿಪಡಿಸುತ್ತಿದೆ.</p>.<p>ಇದರಲ್ಲಿ 1ರಿಂದ 12ನೇ ತರಗತಿಯವರೆಗೆ ಒಂದೇ ಆಡಳಿತ ವ್ಯವಸ್ಥೆಯಡಿ ವಿದ್ಯಾರ್ಜನೆ ಸಾಧ್ಯವಾಗಲಿದೆ. ಜಿಲ್ಲೆಯ ಅವ್ವೇರಹಳ್ಳಿ ಸೇರಿದಂತೆ ಹಲವು ಶಾಲೆಗಳು ಈಗಾಗಲೇ ಕಾರ್ಯಾರಂಭ ಮಾಡಿವೆ.</p>.<p>ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಮತ್ತು ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಸರಿಸಮಾನವಾಗಿ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ನಿಟ್ಟಿನಲ್ಲಿ 2017ರಲ್ಲಿ ಸರ್ಕಾರ ಈ ಯೋಜನೆಗೆ ಮುಂದಾಯಿತು. ಈ ಸಂಬಂಧ ಸರ್ವೆ ನಡೆದು ಜಿಲ್ಲೆಯ ನಾಲ್ಕು ಶಾಲೆಗಳು ಕೆಪಿಎಸ್ಗೆ ಆಯ್ಕೆಯಾಗಿವೆ.</p>.<p><strong>ಮೂಲ ಸೌಕರ್ಯಕ್ಕೆ ಒತ್ತು: </strong>ಈ ಶಾಲೆಗಳಲ್ಲಿ ಸುಸಜ್ಜಿತ ಕೊಠಡಿ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಶೌಚಾಲಯ, ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಸುಸಜ್ಜಿತ ಪೀಠೊಪಕರಣಗಳು, ಆಟದ ಮೈದಾನ ಇರಲಿವೆ.</p>.<p>ಸರಾಸರಿ 500 ಮೀ. ವ್ಯಾಪ್ತಿಯಲ್ಲಿ ಇರುವ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಗುರುತಿಸಿ ಕರ್ನಾಟಕ ಪಬ್ಲಿಕ್ ಶಾಲೆ ಆಗಿ ಅಭಿವೃದ್ಧಿಗೊಳಿಸುವುದು ಯೋಜನೆಯಾಗಿದೆ ಎನ್ನುತ್ತಾರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಚ್. ಗಂಗಮಾರೇಗೌಡ.</p>.<p>ಮೂರೂ ಶಿಕ್ಷಣ ಸಂಸ್ಥೆಗಳ ಆಡಳಿತ ಉಸ್ತುವಾರಿಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ ವಹಿಸಿ ಒಂದೇ ವ್ಯವಸ್ಥೆಯಡಿ ತರಲಾಗುತ್ತದೆ. 1ರಿಂದ 5ನೇ ತರಗತಿ ವರೆಗೆ ಕನ್ನಡ ಮಾಧ್ಯಮ, ಆರನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಇರುತ್ತದೆ ಎಂದು ತಿಳಿಸಿದರು.</p>.<p>ಪ್ರತಿ ಬಾರಿ ಟಿಸಿ ಪಡೆಯಬೇಕಿಲ್ಲ. 7ನೇ ಬಳಿಕ ವಿದ್ಯಾರ್ಥಿಗಳು ಟಿ.ಸಿ ಪಡೆದು ಬೇರೆ ಶಾಲೆಗೆ ಹೋಗಬೇಕಾಗುತ್ತದೆ. ಮತ್ತೆ ಪಿಯುಸಿಗೆ ದಾಖಲಾತಿ ಪಡೆಯಬೇಕು. ಆದರೆ ಕೆಪಿಎಸ್ನಲ್ಲಿ 1ನೇ ತರಗತಿಗೆ ಸೇರ್ಪಡೆಯಾದರೆ ದ್ವಿತೀಯ ಪಿಯುಸಿ ತನಕ ಒಂದೆಡೆ ವಿದ್ಯಾಭ್ಯಾಸಕ್ಕೆ ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದರು.</p>.<p>ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಿಸಲಾಗುತ್ತದೆ. ಅಗತ್ಯವಿರುವಷ್ಟು ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕಂಪ್ಯೂಟರ್, ಗಣಿತ, ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಪ್ರಾಯೋಗಿಕ ಕಲಿಕೆಗೆ ಹೆಚ್ಚು ಆದ್ಯತೆ ಕೊಡಲಾಗುವುದು. ಹಾಗೆಯೇ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗೂ ಹೆಚ್ಚಿನ ಪ್ರೋತ್ಸಾಹ ಕೊಟ್ಟು, ಸಮಗ್ರ ಕಲಿಕೆಗೆ ಒತ್ತು ನೀಡಬೇಕು ಎಂಬುದು ಶಿಕ್ಷಣ ಇಲಾಖೆಯ ಧ್ಯೇಯವಾಗಿದೆ ಎಂದು ಅವರು ಹೇಳಿದರು.</p>.<p>ಪ್ರತಿ ತಾಲ್ಲೂಕಿನ ಪ್ರಮುಖ ಹಳ್ಳಿಯೊಂದರಲ್ಲಿ ಈಗಾಗಲೇ ಇರುವ ಪದವಿ ಪೂರ್ವ ಕಾಲೇಜುಗಳನ್ನೇ ಪಬ್ಲಿಕ್ ಶಾಲೆಗಳನ್ನಾಗಿ ಮಾರ್ಪಡಿಸಲಾಗಿದೆ. ಈ ಪಬ್ಲಿಕ್ ಶಾಲೆ ಸುತ್ತಲಿನ ಶಾಲೆಗಳಿಗೂ ಹತ್ತಿರದಲ್ಲಿ ಇದೆಯೇ ಎಂಬುದನ್ನೂ ಗಮನದಲ್ಲಿಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಆ ಊರಿನಲ್ಲಿರುವ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನೆಲ್ಲಾ ಒಗ್ಗೂಡಿಸಿ ಪಬ್ಲಿಕ್ ಶಾಲೆಯ ವ್ಯಾಪ್ತಿಗೆ ತರಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ಪಬ್ಲಿಕ್ ಶಾಲೆಯ ಪ್ರಾಚಾರ್ಯರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.</p>.<p> <strong> ಎಲ್ಲೆಲ್ಲಿ ಕರ್ನಾಟಕ ಶಾಲೆ</strong></p>.<table border="1" cellpadding="1" cellspacing="1" style="width:500px;"> <tbody> <tr> <td>ತಾಲ್ಲೂಕು</td> <td>ಗ್ರಾಮ</td> </tr> <tr> <td>ರಾಮನಗರ</td> <td>ಅವ್ವೇರಹಳ್ಳಿ</td> </tr> <tr> <td>ಮಾಗಡಿ</td> <td>ಕುದೂರು</td> </tr> <tr> <td>ಚನ್ನಪಟ್ಟಣ</td> <td>ಅರಳಾಳುಸಂದ್ರ</td> </tr> <tr> <td>ಕನಕಪುರ</td> <td>ದೊಡ್ಡಾಲಹಳ್ಳಿ</td> </tr> </tbody></table>.<p><br />ಪ್ರತಿ ಗ್ರಾ.ಪಂ.ಗೆ ಒಂದರಂತೆ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿದೆ. ಸದ್ಯ ಪ್ರತಿ ತಾಲ್ಲೂಕಿಗೆ ಒಂದರಂತೆ ಶಾಲೆಗಳನ್ನು ಆರಂಭಿಸಲಾಗಿದೆ.<br /><strong>–ಎಂ.ಎಚ್. ಗಂಗಮಾರೇಗೌಡ,ಉಪನಿರ್ದೇಶಕ, ಸಾರ್ವಜನಿಕ ಶಿಕ್ಷಣ ಇಲಾಖೆ</strong></p>.<p>ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶ ಇದಾಗಿದೆ. ಆಯ್ಕೆಯಾದ ಶಾಲೆಗಳಲ್ಲಿ ಮೂಲಸೌಕರ್ಯ, ಶಿಕ್ಷಕರ ನೇಮಕ ನಡೆಯಲಿದೆ<br />–<strong>ಬಿ.ಎನ್. ಮರಿಗೌಡ,ಕ್ಷೇತ್ರ ಶಿಕ್ಷಣಾಧಿಕಾರಿ</strong></p>.<p>ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಪಬ್ಲಿಕ್ ಶಾಲೆಗಳನ್ನು ತೆರೆದು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಮುಂದಾಗಿರುವುದು ಶ್ಲಾಘನೀಯ.<br />–<strong>ಮಹದೇವಪ್ಪ,ನಿವೃತ್ತ ಮುಖ್ಯಶಿಕ್ಷಕರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>