ರಾಮನಗರ: ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಿಂದಾಗಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಈ ಮಾರ್ಗದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ಕುಂಬಳಗೋಡು ಸಮೀಪ ಕೆರೆ ಕೋಡಿ ಬಿದ್ದು ರಸ್ತೆಗೆ ನೀರು ನುಗ್ಗಿದ್ದು, ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ರಾಮನಗರ ತಾಲ್ಲೂಕಿನ ಬಸವನಪುರ ಬಳಿ ಅಂಡರ್ ಪಾಸ್ ನಲ್ಲಿ ನೀರು ನಿಂತಿದ್ದು, ವಾಹನಗಳ ಮಾರ್ಗ ಬದಲಿಸಲಾಗಿದೆ. ಚನ್ನಪಟ್ಟಣದ ಅಲ್ಲಲ್ಲಿಯೂ ಸಂಚಾರಕ್ಕೆ ಅಡ್ಡಿಯಾಗಿದೆ.
ಪ್ರಯಾಣಿಕರು ಬೆಂಗಳೂರು- ಕನಕಪುರ- ಮೈಸೂರು ಇಲ್ಲವೇ ಬೆಂಗಳೂರು-ಕುಣಿಗಲ್- ಮೈಸೂರು ಮಾರ್ಗವಾಗಿ ಸಂಚರಿಸುವಂತೆ ರಾಮನಗರ ಪೊಲೀಸರು ಸಲಹೆ ನೀಡಿದ್ದಾರೆ.
ಬೆಂಗಳೂರು – ಮೈಸೂರು ರಸ್ತೆಯಲ್ಲಿ ಭಾರೀ ದಟ್ಟಣೆ
ರಾಮನಗರ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಿಂದಾಗಿ ಕೆರೆ ಕಾಲುವೆಗಳು ತುಂಬಿ ಹರಿಯುತ್ತಿದ್ದು, ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ವಾಹನ ಸವಾರರಿಗೆ ಪೊಲೀಸರು ಸೂಚಿಸಿದ್ದಾರೆ.#BangaloreMysoreRoad#Ramanagarapic.twitter.com/mJezVJEcSR
ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಕೆರೆ ಕೋಡಿ ತುಂಬಿ ಹರಿದಿದ್ದು, ರಸ್ತೆ ಜಲಾವೃತಗೊಂಡಿದೆ. ಹೀಗಾಗಿ ಚನ್ನಪಟ್ಟಣ- ಹಲಗೂರು ರಸ್ತೆ ಬಂದ್ ಆಗಿದೆ. ಇದರ ನಡುವೆಯೇ ಖಾಸಗಿ ಬಸ್ವೊಂದು ರಸ್ತೆ ದಾಟಿದ ಪರಿ ಹೀಗಿತ್ತು...#channapatna#KarnatakaRains#Ramanagarapic.twitter.com/Ttt529cGlG