ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಜಿಲ್ಲಾಸ್ಪತ್ರೆ ಸುಸಜ್ಜಿತ ಕಟ್ಟಡ ಹೊಂದಿದ್ದರೂ ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಉಸ್ತುವಾರಿ ಸಚಿವರು ಆಸ್ಪತ್ರೆಗೆ ಅಗತ್ಯವಿರುವ ಶುಶ್ರೂಷಕರು ಡಿ ಗ್ರೂಪ್ ಹಾಗೂ ಭದ್ರತಾ ಸಿಬ್ಬಂದಿ ಒದಗಿಸಬೇಕು.
– ಎಚ್.ಎ. ಇಕ್ಬಾಲ್ ಹುಸೇನ್ ಶಾಸಕ
ಜಿಲ್ಲೆಯಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಆನೆ ಕ್ಯಾಂಪ್ ತೆರೆಯುವುದೇ ಪರಿಹಾರ. ನಾಡಿಗೆ ಬರುವ ಆನೆಗಳನ್ನು ಹಿಡಿದು ವಾಪಸ್ ಕಾಡಿಗೆ ಬಿಡುವ ಬದಲು ಕ್ಯಾಂಪ್ನಲ್ಲಿ ಪಳಗಿಸಿದರೆ ಕಾಡಾನೆ ಹಾವಳಿ ನಿಲ್ಲಲಿದೆ
– ಎಸ್. ರವಿ ವಿಧಾನ ಪರಿಷತ್ ಸದಸ್ಯ
ಪೌತಿ ಖಾತೆ ಮಾಡಿಕೊಡುವುದಕ್ಕೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಅಭಿಯಾನ ಮಾಡಲಾಗುವುದು
– ಯಶವಂತ್ ವಿ. ಗುರುಕರ್ ಜಿಲ್ಲಾಧಿಕಾರಿ
ಒಣ ತ್ಯಾಜ್ಯ ನಿರ್ವಹಣೆಗೆ ಜಿಲ್ಲೆಯ ವಿವಿಧೆಡೆ ಎಂಆರ್ಎಫ್ ಘಟಕಗಳನ್ನು ತೆರೆಯಲಾಗುವುದು. ಇದರಿಂದ ನಗರ ಮತ್ತು ಪಟ್ಟಣದ ಮಟ್ಟದಲ್ಲಿ ಕಸ ವಿಲೇವಾರಿ ಸಮಸ್ಯೆ ಪರಿಹಾರ ಸಿಗಲಿದೆ