ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ನೀರು, ಮೇವಿಗೆ ಪಂಚಾಯಿತಿಗೆ ತಲಾ ₹10 ಲಕ್ಷ: ಸಚಿವ ರಾಮಲಿಂಗಾರೆಡ್ಡಿ

Published : 2 ಮಾರ್ಚ್ 2024, 6:38 IST
Last Updated : 2 ಮಾರ್ಚ್ 2024, 6:38 IST
ಫಾಲೋ ಮಾಡಿ
Comments
ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು
ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು
ಅಂಕಿ ಅಂಶ... ₹10 ಕೋಟಿ ಬರ ಪರಿಹಾರ ಕಾರ್ಯಕ್ಕಾಗಿ ಡಿ.ಸಿ ಖಾತೆಗೆ ಜಮಾ ಆಗಿರುವ ಮೊತ್ತ ₹1 ಕೋಟಿ ಪ್ರತಿ ತಾಲ್ಲೂಕಿಗೆ ಬರ ಪರಿಹಾರ ಕಾರ್ಯಕ್ಕೆ ಬಿಡುಗಡೆಯಾದ ಮೊತ್ತ ₹25 ಲಕ್ಷ ಕೊಳವೆಬಾವಿ ದುರಸ್ತಿಗೆ ಬಿಡುಗಡೆಯಾಗಿರುವ ಹಣ
‘ತಡೆಗೋಡೆಗೆ ಕಾಮಗಾರಿ ಆರಂಭ’
‘ಜಿಲ್ಲೆಯು ಕಾವೇರಿ ವನ್ಯಜೀವಿಧಾಮ ಮತ್ತು ಬನ್ನೇರುಘಟ್ಟ ಅರಣ್ಯ ಪ್ರದೇಶವನ್ನು ಒಳಗೊಂಡಿದೆ. ಇಲ್ಲಿ ಅಂದಾಜು 400 ಕಾಡಾನೆಗಳಿದ್ದು ಇವುಗಳಲ್ಲಿ 30–40 ಆನೆಗಳು ಹೆಚ್ಚಾಗಿ ಕಾವೇರಿ ಅರಣ್ಯ ಪ್ರದೇಶದಲ್ಲಿ ಓಡಾಡುತ್ತಿವೆ. ಇದುವರೆಗೆ 10 ಜನ ಆನೆ ದಾಳಿಗೆ ಬಲಿಯಾಗಿದ್ದಾರೆ. ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಗಿದೆ. ಅಲ್ಲದೆ ಕಾಡಿನಿಂದ ಆನೆಗಳು ಹೊರ ಬಾರದಂತೆ ತಡೆಯಲು 33 ಕಿ.ಮೀ. ಬ್ಯಾರಿಕೇಡ್ ನಿರ್ಮಿಸಲು ಅನುಮತಿ ದೊರಕಿದ್ದು ಕಾಮಗಾರಿಯು ಪ್ರಗತಿಯಲ್ಲಿದೆ’ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
‘ಜನರ ಸಮಸ್ಯೆಗೆ ಶೀಘ್ರ ಪರಿಹಾರ’
ಮಾಗಡಿ (ರಾಮನಗರ): ‘ಹಲವು ದಿನಗಳಿಂದ ಬಾಕಿ ಇರುವ ಜನರ ಸಮಸ್ಯೆಯನ್ನು ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಪರಿಹರಿಸಲು ಮತ್ತು ಜನ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಪರಿಹರಿಸಲಾಗದ ಸಮಸ್ಯೆಗಳನ್ನು ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ತಾಲ್ಲೂಕಿನ ಸೋಲೂರು ಗ್ರಾಮದ ಆರ್ಯ ಈಡಿಗರ ಸಂಸ್ಥಾನ ಮಠದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಜನರ ಸಮಸ್ಯೆಗೆಳಿಗೆ ಪರಿಹಾರ ನೀಡಲು ಕಳೆದ 4 ತಿಂಗಳಿಂದ ಜನತಾ ದರ್ಶನ ಆಯೋಜಿಸಲಾಗುತ್ತಿದೆ. ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕ ಕೌಂಟರ್‌ ತೆರೆಯಲಾಗಿದೆ. ಜಿಲ್ಲಾಧಿಕಾರಿ ಜಿ.ಪಂ. ಸಿಇಒ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವರು. ಇಂದು ಸ್ವೀಕರಿಸಿರುವ ಜನರ ಅಹವಾಲುಗಳನ್ನು ಕಾಲಮಿತಿಯಲ್ಲಿ ಪರಿಹರಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಉಪ ವಿಭಾಗಾಧಿಕಾರಿ ಬಿನೋಯ್ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT