<p>ಮಾಗಡಿ: ಕೆಂಪೇಗೌಡರ ಕಾಲದ ಕೆಂಪಸಾಗರ ಕೆರೆ ತೆಪ್ಪೋತ್ಸವಕ್ಕೆ ಶಾಸಕ ಎಚ್.ಸಿ. ಬಾಲಕೃಷ್ಣ ಚಾಲನೆ ನೀಡಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗದ ಗ್ರಾಮಸ್ಥರು ಹಿಂದಿನಿಂದಲೂ ಕೆರೆ ಕೋಡಿಯಾದ ನಂತರ ತೆಪ್ಪೋತ್ಸವ ಮಾಡುವುದು ವಾಡಿಕೆ. ಅದರಂತೆ ಈ ಬಾರಿಯೂ ಕೆರೆಯ ಕೋಡಿ ಭಾಗದಲ್ಲಿ ತೆಪ್ಪಕ್ಕೆ ಪೂಜೆ ಸಲ್ಲಿಸಿ ತೆಪ್ಪದಲ್ಲಿ ಒಂದು ಕಳಸ ಮತ್ತು ಮೇಕೆಯನ್ನು ಕಟ್ಟಿ ಕೋಡಿಯ ವಿರುದ್ಧದ ದಡಕ್ಕೆ ಬಿಡಲಾಗುತ್ತದೆ. ತೆಪ್ಪ ನೇರವಾಗಿ ಕೋಡಿಯ ಬಳಿಗೆ ತಾನಾಗಿಯೇ ಬಂದು ಸೇರುತ್ತದೆ ಎಂಬ ವಾಡಿಕೆ ಇದೆ.</p>.<p>ಗ್ರಾಮಸ್ಥರ ಬೇಡಿಕೆಯಂತೆ ಕೆರೆ ಏರಿಯನ್ನು ಅಗಲ ಮಾಡಿ ಹುಲಿಯೂರು ದುರ್ಗಾ ಮುಖ್ಯರಸ್ತೆಯಿಂದ ಹಾಲಸಿಂಗನಹಳ್ಳಿವರೆಗೆ ಡಾಂಬರು ರಸ್ತೆ ಮಾಡುವಂತೆ ಒತ್ತಾಯ ಮಾಡಿದ್ದರು. ಅದರಂತೆ ರಸ್ತೆ ಮತ್ತು ಕೆರೆ ಏರಿ ಅಭಿವೃದ್ಧಿ ಪಡಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ತಾ.ಪಂ.ಮಾಜಿ ಸದಸ್ಯ ಸುಮಾ ರಮೇಶ್ ಮಾತನಾಡಿ, ಕೆರೆಗೆ ರಾಜ್ಯದ ನಾನಾ ಜಿಲ್ಲೆಗಳಿಂದು ಬಂದು ಗಂಗೆ ಪೂಜೆ ಸಲ್ಲಿಸುತ್ತಾರೆ. ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗಿಯಾಗಿದ್ದು ಎಲ್ಲ ಭಕ್ತರಿಗೂ ಗ್ರಾಮಸ್ಥರು ಮತ್ತು ದಾನಿಗಳ ನೆರವಿನಿಂದ ಅನ್ನ ಸಂತರ್ಪಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.</p>.<p>ದಿಶಾ ಸಮಿತಿ ಮಾಜಿ ಸದಸ್ಯ ಜೆ.ಪಿ. ಚಂದ್ರೇಗೌಡ, ಪೂಜಾರಿ ಪಾಳ್ಯ ಕೃಷ್ಣಮೂರ್ತಿ, ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಕಲ್ಕೆರೆ ಶಿವಣ್ಣ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ಕೆಂಪೇಗೌಡರ ಕಾಲದ ಕೆಂಪಸಾಗರ ಕೆರೆ ತೆಪ್ಪೋತ್ಸವಕ್ಕೆ ಶಾಸಕ ಎಚ್.ಸಿ. ಬಾಲಕೃಷ್ಣ ಚಾಲನೆ ನೀಡಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗದ ಗ್ರಾಮಸ್ಥರು ಹಿಂದಿನಿಂದಲೂ ಕೆರೆ ಕೋಡಿಯಾದ ನಂತರ ತೆಪ್ಪೋತ್ಸವ ಮಾಡುವುದು ವಾಡಿಕೆ. ಅದರಂತೆ ಈ ಬಾರಿಯೂ ಕೆರೆಯ ಕೋಡಿ ಭಾಗದಲ್ಲಿ ತೆಪ್ಪಕ್ಕೆ ಪೂಜೆ ಸಲ್ಲಿಸಿ ತೆಪ್ಪದಲ್ಲಿ ಒಂದು ಕಳಸ ಮತ್ತು ಮೇಕೆಯನ್ನು ಕಟ್ಟಿ ಕೋಡಿಯ ವಿರುದ್ಧದ ದಡಕ್ಕೆ ಬಿಡಲಾಗುತ್ತದೆ. ತೆಪ್ಪ ನೇರವಾಗಿ ಕೋಡಿಯ ಬಳಿಗೆ ತಾನಾಗಿಯೇ ಬಂದು ಸೇರುತ್ತದೆ ಎಂಬ ವಾಡಿಕೆ ಇದೆ.</p>.<p>ಗ್ರಾಮಸ್ಥರ ಬೇಡಿಕೆಯಂತೆ ಕೆರೆ ಏರಿಯನ್ನು ಅಗಲ ಮಾಡಿ ಹುಲಿಯೂರು ದುರ್ಗಾ ಮುಖ್ಯರಸ್ತೆಯಿಂದ ಹಾಲಸಿಂಗನಹಳ್ಳಿವರೆಗೆ ಡಾಂಬರು ರಸ್ತೆ ಮಾಡುವಂತೆ ಒತ್ತಾಯ ಮಾಡಿದ್ದರು. ಅದರಂತೆ ರಸ್ತೆ ಮತ್ತು ಕೆರೆ ಏರಿ ಅಭಿವೃದ್ಧಿ ಪಡಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ತಾ.ಪಂ.ಮಾಜಿ ಸದಸ್ಯ ಸುಮಾ ರಮೇಶ್ ಮಾತನಾಡಿ, ಕೆರೆಗೆ ರಾಜ್ಯದ ನಾನಾ ಜಿಲ್ಲೆಗಳಿಂದು ಬಂದು ಗಂಗೆ ಪೂಜೆ ಸಲ್ಲಿಸುತ್ತಾರೆ. ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗಿಯಾಗಿದ್ದು ಎಲ್ಲ ಭಕ್ತರಿಗೂ ಗ್ರಾಮಸ್ಥರು ಮತ್ತು ದಾನಿಗಳ ನೆರವಿನಿಂದ ಅನ್ನ ಸಂತರ್ಪಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.</p>.<p>ದಿಶಾ ಸಮಿತಿ ಮಾಜಿ ಸದಸ್ಯ ಜೆ.ಪಿ. ಚಂದ್ರೇಗೌಡ, ಪೂಜಾರಿ ಪಾಳ್ಯ ಕೃಷ್ಣಮೂರ್ತಿ, ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಕಲ್ಕೆರೆ ಶಿವಣ್ಣ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>