<p><strong>ಮಾಗಡಿ:</strong> ಕೆಂಪೇಗೌಡರ ಕೋಟೆ ಉಳಿಸುವ ನಿಟ್ಟಿನಲ್ಲಿ ನಾನು ಹೋರಾಟ ನಿಲ್ಲಿಸುವುದಿಲ್ಲ. ಕೋಟೆ ಕಂದಕ ಮುಚ್ಚುತ್ತಿರುವುದು ಸರಿಯಲ್ಲ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ಕೋಟೆ ಕಂದಕದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಚ್ಯ ವಸ್ತು ಇಲಾಖೆಗೆ ಸೇರಿರುವ ಕೋಟೆಯನ್ನು ನಾಶಪಡಿಸುತ್ತಿರುವ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಶೀಘ್ರ ಹೋರಾಟ ಮಾಡಲಾಗುವುದು. ಈ ಬಗ್ಗೆ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗುತ್ತಿದೆ. ಕೆಂಪೇಗೌಡರ ಕೋಟೆ ಉಳಿಸುವ ನಿಟ್ಟಿನಲ್ಲಿ 21 ಇಲಾಖೆಗಳಿಗೆ ಮನವಿ ನೀಡಲಾಗಿದೆ ಎಂದರು.</p>.<p>ಈಗ ಕೋಟೆ ಕಂದಕದ ಬಳಿ ಕಟ್ಟಡ ಮಣ್ಣನ್ನು ಸುರಿದು ಕಂದಕ ಮುಚ್ಚುವ ಹುನ್ನಾರ ನಡೆಸುತ್ತಿದ್ದಾರೆ. ಹಾಗಾಗಿ ಕೋಟೆ ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿ ಎಂದು ಮನವಿ ಮಾಡಿದರು.</p>.<p>ಈ ವೇಳೆ ಏಳಿಗೆಹಳ್ಳಿ ತಮ್ಮಣ್ಣಗೌಡ, ಪುಟ್ಟಸ್ವಾಮಿ, ದೊಡ್ಡಿ ಗೋಪಿ, ಮರೂರು ಶಂಕರಪ್ಪ, ಕೀರ್ತಿ, ಆನಂದ, ಸೈಯದ್, ರಾಮಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಕೆಂಪೇಗೌಡರ ಕೋಟೆ ಉಳಿಸುವ ನಿಟ್ಟಿನಲ್ಲಿ ನಾನು ಹೋರಾಟ ನಿಲ್ಲಿಸುವುದಿಲ್ಲ. ಕೋಟೆ ಕಂದಕ ಮುಚ್ಚುತ್ತಿರುವುದು ಸರಿಯಲ್ಲ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ಕೋಟೆ ಕಂದಕದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಚ್ಯ ವಸ್ತು ಇಲಾಖೆಗೆ ಸೇರಿರುವ ಕೋಟೆಯನ್ನು ನಾಶಪಡಿಸುತ್ತಿರುವ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಶೀಘ್ರ ಹೋರಾಟ ಮಾಡಲಾಗುವುದು. ಈ ಬಗ್ಗೆ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗುತ್ತಿದೆ. ಕೆಂಪೇಗೌಡರ ಕೋಟೆ ಉಳಿಸುವ ನಿಟ್ಟಿನಲ್ಲಿ 21 ಇಲಾಖೆಗಳಿಗೆ ಮನವಿ ನೀಡಲಾಗಿದೆ ಎಂದರು.</p>.<p>ಈಗ ಕೋಟೆ ಕಂದಕದ ಬಳಿ ಕಟ್ಟಡ ಮಣ್ಣನ್ನು ಸುರಿದು ಕಂದಕ ಮುಚ್ಚುವ ಹುನ್ನಾರ ನಡೆಸುತ್ತಿದ್ದಾರೆ. ಹಾಗಾಗಿ ಕೋಟೆ ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿ ಎಂದು ಮನವಿ ಮಾಡಿದರು.</p>.<p>ಈ ವೇಳೆ ಏಳಿಗೆಹಳ್ಳಿ ತಮ್ಮಣ್ಣಗೌಡ, ಪುಟ್ಟಸ್ವಾಮಿ, ದೊಡ್ಡಿ ಗೋಪಿ, ಮರೂರು ಶಂಕರಪ್ಪ, ಕೀರ್ತಿ, ಆನಂದ, ಸೈಯದ್, ರಾಮಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>