ಕೆಂಪಾಪುರದಲ್ಲಿರುವ ಕೆಂಪೇಗೌಡರ ಸಮಾಧಿಗೆ ಶುಕ್ರವಾರ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು. ಕೆಂಪೇಗೌಡರ ಸಮಾಧಿ ಅಭಿವೃದ್ಧಿಗೆ 8 ಎಕರೆ ಜಮೀನು ಬೇಕಿದ್ದು, ಇದನ್ನು ಭೂಸ್ವಾಧೀನ ಮಾಡುವ ಕೆಲಸ ಪ್ರಾರಂಭಿಸಲಾಗುವುದು. ರೈತರಿಗೂ ಸಹ ಅನುಕೂಲವಾಗುವಂತೆ ಸುಸಜ್ಜಿತವಾಗಿ ಕೆಂಪಾಪುರದ ಸರ್ವಂಗೀಣ ಅಭಿವೃದ್ಧಿ ಮಾಡಲಾಗುವುದು. ಕೆಂಪಾಪುರದಲ್ಲಿರುವ ಕೆರೆಯ ಅಭಿವೃದ್ಧಿಗೂ 12 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ನೀಲನಕ್ಷೆ ಕೂಡ ಸಿದ್ಧಪಡಿಲಾಗಿದ್ದು, ಗ್ರಾಮಸ್ಥರು ಸಹಕಾರ ನೀಡಿದರೆ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದರು.