<p><strong>ಮಾಗಡಿ</strong>: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ವಿರೋಧಿಸಿ ಜೆಡಿಎಸ್ ಮಂಗಳವಾರ ಪಟ್ಟಣದ ಕೆಂಪೇಗೌಡರ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.</p>.<p>ಯಾವುದೇ ಕಾರಣಕ್ಕೂ ಪ್ರತಿಮೆ ಸ್ಥಳಾಂತರ ಮಾಡಲು ಬಿಡುವುದಿಲ್ಲ. ಒಂದು ವೇಳೆ ಸ್ಥಳಾಂತರಕ್ಕೆ ಮುಂದಾದರೆ ಜೆಡಿಎಸ್ ಉಗ್ರ ಹೋರಾಟ ನಡೆಸಲಿದೆ ಎಂದು ಕಾರ್ಯಕರ್ತರು, ಮುಖಂಡರು ಎಚ್ಚರಿಕೆ ನೀಡಿದರು.</p>.<p>ದ್ವೇಷ ರಾಜಕಾರಣ ಮಾಡುತ್ತಿರುವ ಶಾಸಕ ಎಚ್.ಸಿ. ಬಾಲಕೃಷ್ಣ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಮುಖಂಡರು ತರಾಟೆಗೆ ತೆಗೆದುಕೊಂಡರು.</p>.<p>‘ಬಡವರಿಗೆ ಅನುಕೂಲವಾಗುವ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ನಾವು ಅಭಿವೃದ್ಧಿಗೆ ವಿರೋಧ ಮಾಡುವುದಿಲ್ಲ. ಆದರೆ, ಕೆಂಪೇಗೌಡ ಪ್ರತಿಮೆ ಸ್ಥಳಾಂತರ ಮಾಡದೆ ಅಭಿವೃದ್ಧಿ ಮಾಡಲಿ’ ಎಂದು ಪುರಸಭಾ ಸದಸ್ಯ ಎಂ.ಎನ್. ಮಂಜುನಾಥ್ ಒತ್ತಾಯಿಸಿದರು.</p>.<p>ಕೆಂಪೇಗೌಡರ ಪ್ರತಿಮೆ ತೆರವು ಮಾಡಿ ಯಾವ ಜಾಗದಲ್ಲಿ ಸ್ಥಾಪಿಸುತ್ತಾರೆ ಎಂದು ಶಾಸಕರು ತಿಳಿಸಿಲ್ಲ. ಏಕಾಏಕಿ ಪ್ರತಿಮೆ ಸ್ಥಳಾಂತರ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈಗಲೂ ಕಾಲ ಮಿಂಚಿಲ್ಲ. ಸಾರ್ವಜನಿಕರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿ ಅಭಿವೃದ್ಧಿ ಕಾರ್ಯ ಮಾಡಲಿ. ಯಾವುದೇ ಕಾರಣಕ್ಕೂ ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ಬೇಡ ಎಂದರು. </p>.<p>ಶಾಸಕ ಬಾಲಕೃಷ್ಣ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಕೆಂಪೇಗೌಡರ ಪ್ರತಿಮೆ ಯಾರಿಗೂ ತೊಂದರೆ ಕೊಡುತ್ತಿಲ್ಲ. ಈ ಹಿಂದೆ ಕೂಡ ಎನ್ಇಎಸ್ ವೃತದಲ್ಲಿದ್ದ ಗಾಂಧಿ ಪುತ್ಥಳಿಯನ್ನು ವಿರೋಧದ ನಡುವೆಯೂ ತೆರವು ಮಾಡಲಾಗಿತ್ತು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ವಿಜಯಕುಮಾರ್ ನೆನಪಿಸಿಕೊಂಡರು.</p>.<p>ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಬೇರೆ ಕಡೆ ಸಾಕಷ್ಟು ಜಾಗ ಇರುವುದರಿಂದ ಈ ಜಾಗವನ್ನು ಕೆಂಪೇಗೌಡರ ಪ್ರತಿಮೆಗೆ ಮೀಸಲಾಗಿ ಇಡಬೇಕು. ಇಲ್ಲವಾದರೆ ಜೆಡಿಎಸ್ ಉಗ್ರ ಹೋರಾಟ ನಡೆಸಲಿದೆ ಎಂದು ಗ್ರಾ.ಪಂ.ಸದಸ್ಯ ಮರೂರು ಸಾಗರ್ ಎಚ್ಚರಿಕೆ ನೀಡಿದರು.</p>.<p>ಶಿವಕುಮಾರ್, ಕೆಂಪೇಗೌಡ, ಬಾಲಕೃಷ್ಣ, ಮಹೇಶ್, ಕೆ.ವಿ.ಬಾಲು, ಹೊಸಹಳ್ಳಿ ರಂಗಣಿ, ಬುಡನ್ ಸಾಬ್, ಸ್ವಾಮಿ, ಆನಂದ್, ರಾಮಣ್ಣ, ಜಯರಾಂ, ಪಂಚೆ ರಾಮಣ್ಣ, ಬೆಳಗುಂಬ ಕೋಟಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ವಿರೋಧಿಸಿ ಜೆಡಿಎಸ್ ಮಂಗಳವಾರ ಪಟ್ಟಣದ ಕೆಂಪೇಗೌಡರ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.</p>.<p>ಯಾವುದೇ ಕಾರಣಕ್ಕೂ ಪ್ರತಿಮೆ ಸ್ಥಳಾಂತರ ಮಾಡಲು ಬಿಡುವುದಿಲ್ಲ. ಒಂದು ವೇಳೆ ಸ್ಥಳಾಂತರಕ್ಕೆ ಮುಂದಾದರೆ ಜೆಡಿಎಸ್ ಉಗ್ರ ಹೋರಾಟ ನಡೆಸಲಿದೆ ಎಂದು ಕಾರ್ಯಕರ್ತರು, ಮುಖಂಡರು ಎಚ್ಚರಿಕೆ ನೀಡಿದರು.</p>.<p>ದ್ವೇಷ ರಾಜಕಾರಣ ಮಾಡುತ್ತಿರುವ ಶಾಸಕ ಎಚ್.ಸಿ. ಬಾಲಕೃಷ್ಣ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಮುಖಂಡರು ತರಾಟೆಗೆ ತೆಗೆದುಕೊಂಡರು.</p>.<p>‘ಬಡವರಿಗೆ ಅನುಕೂಲವಾಗುವ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ನಾವು ಅಭಿವೃದ್ಧಿಗೆ ವಿರೋಧ ಮಾಡುವುದಿಲ್ಲ. ಆದರೆ, ಕೆಂಪೇಗೌಡ ಪ್ರತಿಮೆ ಸ್ಥಳಾಂತರ ಮಾಡದೆ ಅಭಿವೃದ್ಧಿ ಮಾಡಲಿ’ ಎಂದು ಪುರಸಭಾ ಸದಸ್ಯ ಎಂ.ಎನ್. ಮಂಜುನಾಥ್ ಒತ್ತಾಯಿಸಿದರು.</p>.<p>ಕೆಂಪೇಗೌಡರ ಪ್ರತಿಮೆ ತೆರವು ಮಾಡಿ ಯಾವ ಜಾಗದಲ್ಲಿ ಸ್ಥಾಪಿಸುತ್ತಾರೆ ಎಂದು ಶಾಸಕರು ತಿಳಿಸಿಲ್ಲ. ಏಕಾಏಕಿ ಪ್ರತಿಮೆ ಸ್ಥಳಾಂತರ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈಗಲೂ ಕಾಲ ಮಿಂಚಿಲ್ಲ. ಸಾರ್ವಜನಿಕರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿ ಅಭಿವೃದ್ಧಿ ಕಾರ್ಯ ಮಾಡಲಿ. ಯಾವುದೇ ಕಾರಣಕ್ಕೂ ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ಬೇಡ ಎಂದರು. </p>.<p>ಶಾಸಕ ಬಾಲಕೃಷ್ಣ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಕೆಂಪೇಗೌಡರ ಪ್ರತಿಮೆ ಯಾರಿಗೂ ತೊಂದರೆ ಕೊಡುತ್ತಿಲ್ಲ. ಈ ಹಿಂದೆ ಕೂಡ ಎನ್ಇಎಸ್ ವೃತದಲ್ಲಿದ್ದ ಗಾಂಧಿ ಪುತ್ಥಳಿಯನ್ನು ವಿರೋಧದ ನಡುವೆಯೂ ತೆರವು ಮಾಡಲಾಗಿತ್ತು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ವಿಜಯಕುಮಾರ್ ನೆನಪಿಸಿಕೊಂಡರು.</p>.<p>ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಬೇರೆ ಕಡೆ ಸಾಕಷ್ಟು ಜಾಗ ಇರುವುದರಿಂದ ಈ ಜಾಗವನ್ನು ಕೆಂಪೇಗೌಡರ ಪ್ರತಿಮೆಗೆ ಮೀಸಲಾಗಿ ಇಡಬೇಕು. ಇಲ್ಲವಾದರೆ ಜೆಡಿಎಸ್ ಉಗ್ರ ಹೋರಾಟ ನಡೆಸಲಿದೆ ಎಂದು ಗ್ರಾ.ಪಂ.ಸದಸ್ಯ ಮರೂರು ಸಾಗರ್ ಎಚ್ಚರಿಕೆ ನೀಡಿದರು.</p>.<p>ಶಿವಕುಮಾರ್, ಕೆಂಪೇಗೌಡ, ಬಾಲಕೃಷ್ಣ, ಮಹೇಶ್, ಕೆ.ವಿ.ಬಾಲು, ಹೊಸಹಳ್ಳಿ ರಂಗಣಿ, ಬುಡನ್ ಸಾಬ್, ಸ್ವಾಮಿ, ಆನಂದ್, ರಾಮಣ್ಣ, ಜಯರಾಂ, ಪಂಚೆ ರಾಮಣ್ಣ, ಬೆಳಗುಂಬ ಕೋಟಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>