<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಕೆಂಗಲ್ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ನಡೆಯಿತು.</p>.<p>ರಥೋತ್ಸವ ಅಂಗವಾಗಿ ಬೆಳಗ್ಗೆಯಿಂದ ರಥಾಂಗ ಹೋಮ, ಯಾತ್ರಾದಾನ, ಮಂಟಪೋತ್ಸವ, ಬಲಿಪ್ರಧಾನ, ಗೋವು ಹಾಗೂ ಅಶ್ವಪೂಜೆ, ಪೂಜಾ ಕುಣಿತ, ತಮಟೆ, ಡೊಳ್ಳುಕುಣಿತ, ತೋಮಾಲಸೇವೆ, ಯಾತ್ರಾದಾನ ಸೇವೆ ನಡೆಯಿತು.</p>.<p>ಬೆಳಗ್ಗೆ 11.45ರಿಂದ ಮಧ್ಯಾಹ್ನ 12.45ರೊಳಗೆ ಸಲ್ಲುವ ಶುಭ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ತಹಶೀಲ್ದಾರ್ ಬಿ.ಎನ್.ನಾಗೇಶ್ ಚಾಲನೆ ನೀಡಿದರು. ದೇವಸ್ಥಾನ ಸಮಿತಿ ಸಂಚಾಲಕ ವಿ.ಬಿ.ಚಂದ್ರು, ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು, ತಾಲ್ಲೂಕಿನ ಹಲವು ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.</p>.<p>ಭಕ್ತರು ರಥವನ್ನು ದೇವಸ್ಥಾನ ಆವರಣ ಹಾಗೂ ಅಕ್ಕಪಕ್ಕದ ರಸ್ತೆಗಳಲ್ಲಿ ಎಳೆದು ಪುನೀತರಾದರು. ರಾಜ್ಯದ ಹಲವು ಭಾಗಗಳಿಂದ ಬಂದಿದ್ದ ಭಕ್ತರು ರಥೋತ್ಸದಲ್ಲಿ ಭಾಗವಹಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹಣ್ಣು–ಜವನ ಎಸೆದು ಭಕ್ತಿಭಾವ ಮೆರೆದರು.</p>.<p>ಸಂಜೆ ಮುತ್ತಿನ ಪಲ್ಲಕ್ಕಿ ಉತ್ಸವ, ಹೂವಿನ ಪಲ್ಲಕ್ಕಿ ಉತ್ಸವ, ತಿರುಕಲ್ಯಾಣಿಯಲ್ಲಿ ವಸಂತೋತ್ಸವ, ಅಶ್ವವಾಹನೋತ್ಸವ, ಪುಷ್ಪಮುಡಿ ಉತ್ಸವ, ಧ್ವಜಾರೋಹಣ, ಪೂರ್ಣಾಹುತಿ, ಅಶ್ವವಾಹನೋತ್ಸವ, ಪುಷ್ಪಯಾಗ ಕಾರ್ಯಕ್ರಮ ನಡೆಯಿತು.</p>.<p>ರಥೋತ್ಸವ ಜತೆಗೆ ಇತಿಹಾಸ ಪ್ರಸಿದ್ಧ ಕೆಂಗಲ್ ದನಗಳ ಜಾತ್ರೆ ತೆರೆ ಕಂಡಿತು. ಮಂಗಳವಾರ (ಜ.20) ಅಷ್ಟೋತ್ತರ ಶತಕುಂಬಾಭಿಷೇಕ, ಶಾಂತ್ಯೋತ್ಸವ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಕೆಂಗಲ್ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ನಡೆಯಿತು.</p>.<p>ರಥೋತ್ಸವ ಅಂಗವಾಗಿ ಬೆಳಗ್ಗೆಯಿಂದ ರಥಾಂಗ ಹೋಮ, ಯಾತ್ರಾದಾನ, ಮಂಟಪೋತ್ಸವ, ಬಲಿಪ್ರಧಾನ, ಗೋವು ಹಾಗೂ ಅಶ್ವಪೂಜೆ, ಪೂಜಾ ಕುಣಿತ, ತಮಟೆ, ಡೊಳ್ಳುಕುಣಿತ, ತೋಮಾಲಸೇವೆ, ಯಾತ್ರಾದಾನ ಸೇವೆ ನಡೆಯಿತು.</p>.<p>ಬೆಳಗ್ಗೆ 11.45ರಿಂದ ಮಧ್ಯಾಹ್ನ 12.45ರೊಳಗೆ ಸಲ್ಲುವ ಶುಭ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ತಹಶೀಲ್ದಾರ್ ಬಿ.ಎನ್.ನಾಗೇಶ್ ಚಾಲನೆ ನೀಡಿದರು. ದೇವಸ್ಥಾನ ಸಮಿತಿ ಸಂಚಾಲಕ ವಿ.ಬಿ.ಚಂದ್ರು, ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು, ತಾಲ್ಲೂಕಿನ ಹಲವು ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.</p>.<p>ಭಕ್ತರು ರಥವನ್ನು ದೇವಸ್ಥಾನ ಆವರಣ ಹಾಗೂ ಅಕ್ಕಪಕ್ಕದ ರಸ್ತೆಗಳಲ್ಲಿ ಎಳೆದು ಪುನೀತರಾದರು. ರಾಜ್ಯದ ಹಲವು ಭಾಗಗಳಿಂದ ಬಂದಿದ್ದ ಭಕ್ತರು ರಥೋತ್ಸದಲ್ಲಿ ಭಾಗವಹಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹಣ್ಣು–ಜವನ ಎಸೆದು ಭಕ್ತಿಭಾವ ಮೆರೆದರು.</p>.<p>ಸಂಜೆ ಮುತ್ತಿನ ಪಲ್ಲಕ್ಕಿ ಉತ್ಸವ, ಹೂವಿನ ಪಲ್ಲಕ್ಕಿ ಉತ್ಸವ, ತಿರುಕಲ್ಯಾಣಿಯಲ್ಲಿ ವಸಂತೋತ್ಸವ, ಅಶ್ವವಾಹನೋತ್ಸವ, ಪುಷ್ಪಮುಡಿ ಉತ್ಸವ, ಧ್ವಜಾರೋಹಣ, ಪೂರ್ಣಾಹುತಿ, ಅಶ್ವವಾಹನೋತ್ಸವ, ಪುಷ್ಪಯಾಗ ಕಾರ್ಯಕ್ರಮ ನಡೆಯಿತು.</p>.<p>ರಥೋತ್ಸವ ಜತೆಗೆ ಇತಿಹಾಸ ಪ್ರಸಿದ್ಧ ಕೆಂಗಲ್ ದನಗಳ ಜಾತ್ರೆ ತೆರೆ ಕಂಡಿತು. ಮಂಗಳವಾರ (ಜ.20) ಅಷ್ಟೋತ್ತರ ಶತಕುಂಬಾಭಿಷೇಕ, ಶಾಂತ್ಯೋತ್ಸವ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>