ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಲಿ ಕಾರ್ಮಿಕರಿಗೆ ಕಿಟ್ ವಿತರಣೆ

Last Updated 9 ಆಗಸ್ಟ್ 2021, 3:53 IST
ಅಕ್ಷರ ಗಾತ್ರ

ಬಿಡದಿ: ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ಕೋವಿಡ್-19ನಿಂದ ಹಗಲುರಾತ್ರಿ ಲೆಕ್ಕಿಸದೇ ಸಾರ್ವಜನಿಕರ ಸೇವೆಯಲ್ಲಿ ತೊಡಗಿರುವ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಶನಿವಾರ ಶಾಸಕ ಎ. ಮಂಜುನಾಥ್ ಆಹಾರದ ವಿತರಣೆ ಮಾಡಿದರು.

ನಂತರ ಮಾತನಾಡಿದ ಅವರು, ‘ಕೈಗಾರಿಕಾ ಕಾರ್ಮಿಕರಿಗೆ ಕೋವಿಡ್‌ನಿಂದ ಕೆಲಸ ಕಾರ್ಯಗಳಿಗೆ ತೊಂದರೆಯಾಗಿದೆ. ಅವರಿಗೆ ತಾತ್ಕಾಲಿಕ ಪರಿಹಾರವಾಗಿ ದಿನಸಿ ಕಿಟ್ ನೀಡಲಾಗುತ್ತಿದೆ’ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಮಾಜಿ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಮುಖಂಡರಾದ ಮಂಜುನಾಥ್, ಗಂಗಣ್ಣ ಗಾಣಕಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT