<p><strong>ರಾಮನಗರ</strong>: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಶನಿವಾರ ಕೋಲಾರ ಲೋಕಸಭೆ ಕ್ಷೇತ್ರದ ಜೆಡಿಎಸ್ ಮುಖಂಡರ ಜತೆ ಸಮಾಲೋಚನೆ ನಡೆಸಿದರು.</p>.<p>ಬಿಡದಿ ಬಳಿಯ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಸಭೆಯಲ್ಲಿ ಕೋಲಾರ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳು ಭಾಗವಹಿಸಿದ್ದರು. </p>.<p>ಕೋಲಾರ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ, ಚುನಾವಣೆ ತಯಾರಿ, ಸೂಕ್ತ ಅಭ್ಯರ್ಥಿಗಳ ಬಗ್ಗೆ ಕುಮಾರಸ್ವಾಮಿ ಮಾಹಿತಿ ಪಡೆದರು.</p>.<p>ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ನ ಮೂವರು ಶಾಸಕರಿದ್ದು, ವಿಧಾನಸಭೆ ಚುನಾವಣೆಯಲ್ಲಿ ಮತ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಸುಲಭವಾಗಿ ಗೆಲ್ಲಿಸಬಹುದು ಎಂದು ಮುಖಂಡರು ಸಲಹೆ ನೀಡಿದರು.</p>.<p>‘ಕೋಲಾರದಲ್ಲಿ ಜೆಡಿಎಸ್ ಪರ ಉತ್ತಮ ವಾತಾವರಣ ಇದೆ. ಎನ್ಡಿಎ ಸೇರಿದ ಕಾರಣ ಇನ್ನೂ ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ. ಸೀಟು ಹಂಚಿಕೆ ಚರ್ಚೆ ವೇಳೆ ಬಿಜೆಪಿ ವರಿಷ್ಠರ ಜತೆ ಚರ್ಚೆ ಮಾಡುತ್ತೇನೆ’ ಎಂದು ಕುಮಾರಸ್ವಾಮಿ ಹೇಳಿದರು.</p>.<p>‘ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಜಿಲ್ಲೆಯಲ್ಲಿ ಯಾವುದೇ ಗೊಂದಲ ಇಲ್ಲ. ಪರಸ್ಪರ ಹೊಂದಾಣಿಕೆ ಹಾಗೂ ಸಹಮತ ಭಾವದ ವಾತಾವರಣ ಇದೆ’ ಎಂದು ಸ್ಥಳೀಯ ಮುಖಂಡರು ಹೇಳಿದರು.<br><br> ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ, ಶಾಸಕರಾದ ವೆಂಕಟಶಿವಾ ರೆಡ್ಡಿ, ಸಮೃದ್ಧಿ ಮಂಜುನಾಥ್, ಮಾಲೂರು ರವಿ, ಇಂಚರ ಗೋವಿಂದರಾಜು ಹಾಗೂ ಕೆ.ಎಂ.ಕೃಷ್ಣಾರೆಡ್ಡಿ, ಚೌಡರೆಡ್ಡಿ ತೂಪಲ್ಲಿ, ಮಾಲೂರಿನ ರಾಮೇಗೌಡ, ಬಂಗಾರಪೇಟೆಯ ಮಲ್ಲೇಶ್ ಬಾಬು, ಕೋಲಾರದ ಸಿಎಂಆರ್ ಶ್ರೀನಾಥ ಇತರರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಶನಿವಾರ ಕೋಲಾರ ಲೋಕಸಭೆ ಕ್ಷೇತ್ರದ ಜೆಡಿಎಸ್ ಮುಖಂಡರ ಜತೆ ಸಮಾಲೋಚನೆ ನಡೆಸಿದರು.</p>.<p>ಬಿಡದಿ ಬಳಿಯ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಸಭೆಯಲ್ಲಿ ಕೋಲಾರ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳು ಭಾಗವಹಿಸಿದ್ದರು. </p>.<p>ಕೋಲಾರ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ, ಚುನಾವಣೆ ತಯಾರಿ, ಸೂಕ್ತ ಅಭ್ಯರ್ಥಿಗಳ ಬಗ್ಗೆ ಕುಮಾರಸ್ವಾಮಿ ಮಾಹಿತಿ ಪಡೆದರು.</p>.<p>ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ನ ಮೂವರು ಶಾಸಕರಿದ್ದು, ವಿಧಾನಸಭೆ ಚುನಾವಣೆಯಲ್ಲಿ ಮತ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಸುಲಭವಾಗಿ ಗೆಲ್ಲಿಸಬಹುದು ಎಂದು ಮುಖಂಡರು ಸಲಹೆ ನೀಡಿದರು.</p>.<p>‘ಕೋಲಾರದಲ್ಲಿ ಜೆಡಿಎಸ್ ಪರ ಉತ್ತಮ ವಾತಾವರಣ ಇದೆ. ಎನ್ಡಿಎ ಸೇರಿದ ಕಾರಣ ಇನ್ನೂ ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ. ಸೀಟು ಹಂಚಿಕೆ ಚರ್ಚೆ ವೇಳೆ ಬಿಜೆಪಿ ವರಿಷ್ಠರ ಜತೆ ಚರ್ಚೆ ಮಾಡುತ್ತೇನೆ’ ಎಂದು ಕುಮಾರಸ್ವಾಮಿ ಹೇಳಿದರು.</p>.<p>‘ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಜಿಲ್ಲೆಯಲ್ಲಿ ಯಾವುದೇ ಗೊಂದಲ ಇಲ್ಲ. ಪರಸ್ಪರ ಹೊಂದಾಣಿಕೆ ಹಾಗೂ ಸಹಮತ ಭಾವದ ವಾತಾವರಣ ಇದೆ’ ಎಂದು ಸ್ಥಳೀಯ ಮುಖಂಡರು ಹೇಳಿದರು.<br><br> ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ, ಶಾಸಕರಾದ ವೆಂಕಟಶಿವಾ ರೆಡ್ಡಿ, ಸಮೃದ್ಧಿ ಮಂಜುನಾಥ್, ಮಾಲೂರು ರವಿ, ಇಂಚರ ಗೋವಿಂದರಾಜು ಹಾಗೂ ಕೆ.ಎಂ.ಕೃಷ್ಣಾರೆಡ್ಡಿ, ಚೌಡರೆಡ್ಡಿ ತೂಪಲ್ಲಿ, ಮಾಲೂರಿನ ರಾಮೇಗೌಡ, ಬಂಗಾರಪೇಟೆಯ ಮಲ್ಲೇಶ್ ಬಾಬು, ಕೋಲಾರದ ಸಿಎಂಆರ್ ಶ್ರೀನಾಥ ಇತರರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>