<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಬೈರಾಪಟ್ಟಣ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯ ಕನ್ನಡ ಪಠ್ಯಪುಸ್ತಕ ಕುಮಾರವ್ಯಾಸ ಭಾರತದ ‘ಕೌರವೇಂದ್ರನ ಕೊಂದೆ ನೀನು’ ಪದ್ಯ ಭಾಗದ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮವು ಮಂಗಳವಾರ ನಡೆಯಿತು. </p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್. ಮರಿಗೌಡ, ‘ನಾಡಿನ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಗಮಕ ಮಹತ್ತರವಾದ ಪಾತ್ರ ವಹಿಸುತ್ತಿದೆ’ ಎಂದು ಅಭಿಪ್ರಾಯಪಟ್ಟರು. ಬೊಂಬೆನಾಡು ಗಮಕ ಪರಂಪರಾ ಸಂಸ್ಕೃತಿ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಯಿತು. </p>.<p>ತಾಲ್ಲೂಕಿನ ಎಲ್ಲ ಪ್ರೌಢಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆ ಕನ್ನಡ ವಿಷಯದ ಹಳೆಗನ್ನಡದ ಪದ್ಯಗಳನ್ನು ರಾಗಬದ್ಧವಾಗಿ ವಾಚನ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವಂತೆ ಮಾಡಲಾಗುತ್ತಿದೆ. ಈ ಮೂಲಕ ವಿದ್ಯಾರ್ಥಿಗಳು<br />ಉತ್ತಮ ಅಂಕ ಗಳಿಸಲು ಉತ್ತೇಜಿಸಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. </p>.<p>ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕೌಶಲ್ಯ ಮಾತನಾಡಿ, ‘ಮಕ್ಕಳಿಗೆ ಶಾಲಾ ಹಂತದಲ್ಲೇ ಗಮಕ ಕಲೆ ಕುರಿತು ಅಭ್ಯಾಸ ಮಾಡಿಸಬೇಕು. ಇದರಿಂದ ಭಾಷಾ ಪಾಂಡಿತ್ಯ, ಕಲೆಯ ಹೆಜ್ಜೆ ಗುರುತು ಸರಳವಾಗಿ ಅರ್ಥವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಶಾಲೆಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದೆ’ ಎಂದರು.</p>.<p>ಟ್ರಸ್ಟ್ ಕಾರ್ಯದರ್ಶಿ ವಸಂತಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಗಮಕಿ ಮಳೂರು ಪಟ್ಟಣ ಪುಟ್ಟಸ್ವಾಮಿ ಕುಮಾರವ್ಯಾಸ ಭಾರತದ ಕೌರವೇಂದ್ರನ ಕೊಂದೆ ನೀನು ಪದ್ಯ ಭಾಗವನ್ನು ವಾಚಿಸಿದರು. ನಿವೃತ್ತ ಕನ್ನಡ ಪಂಡಿತ ಬೈ.ಪು. ಪ್ರಭುಸ್ವಾಮಿ ವ್ಯಾಖ್ಯಾನ ಮಾಡಿದರು.</p>.<p>ಸಂಸ್ಕೃತಿ ಚಿಂತಕಿ ವಿನೋಧಾ, ಟ್ರಸ್ಟ್ ಸಂಚಾಲಕರಾದ ಸಿ.ಕೆ. ಯೋಗಾನಂದ, ಸಿ.ಕೆ. ಸಾವಿತ್ರಿ, ಶಿಕ್ಷಕ ಕರಿಯಪ್ಪ, ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಗುರುಮಾದಯ್ಯ, ಬಿಇಒ ಕಚೇರಿ ಅಧೀಕ್ಷಕ ಪ್ರಶಾಂತ್ ಶರ್ಮ, ಶಿಕ್ಷಕರಾದ ರಾಘವೇಂದ್ರ ಮಯ್ಯ, ರಾಜಶೇಖರ ಇಟಗಿ, ಆನಂದ್, ದೀಪಾ, ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಬೈರಾಪಟ್ಟಣ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯ ಕನ್ನಡ ಪಠ್ಯಪುಸ್ತಕ ಕುಮಾರವ್ಯಾಸ ಭಾರತದ ‘ಕೌರವೇಂದ್ರನ ಕೊಂದೆ ನೀನು’ ಪದ್ಯ ಭಾಗದ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮವು ಮಂಗಳವಾರ ನಡೆಯಿತು. </p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್. ಮರಿಗೌಡ, ‘ನಾಡಿನ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಗಮಕ ಮಹತ್ತರವಾದ ಪಾತ್ರ ವಹಿಸುತ್ತಿದೆ’ ಎಂದು ಅಭಿಪ್ರಾಯಪಟ್ಟರು. ಬೊಂಬೆನಾಡು ಗಮಕ ಪರಂಪರಾ ಸಂಸ್ಕೃತಿ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಯಿತು. </p>.<p>ತಾಲ್ಲೂಕಿನ ಎಲ್ಲ ಪ್ರೌಢಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆ ಕನ್ನಡ ವಿಷಯದ ಹಳೆಗನ್ನಡದ ಪದ್ಯಗಳನ್ನು ರಾಗಬದ್ಧವಾಗಿ ವಾಚನ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವಂತೆ ಮಾಡಲಾಗುತ್ತಿದೆ. ಈ ಮೂಲಕ ವಿದ್ಯಾರ್ಥಿಗಳು<br />ಉತ್ತಮ ಅಂಕ ಗಳಿಸಲು ಉತ್ತೇಜಿಸಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. </p>.<p>ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕೌಶಲ್ಯ ಮಾತನಾಡಿ, ‘ಮಕ್ಕಳಿಗೆ ಶಾಲಾ ಹಂತದಲ್ಲೇ ಗಮಕ ಕಲೆ ಕುರಿತು ಅಭ್ಯಾಸ ಮಾಡಿಸಬೇಕು. ಇದರಿಂದ ಭಾಷಾ ಪಾಂಡಿತ್ಯ, ಕಲೆಯ ಹೆಜ್ಜೆ ಗುರುತು ಸರಳವಾಗಿ ಅರ್ಥವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಶಾಲೆಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದೆ’ ಎಂದರು.</p>.<p>ಟ್ರಸ್ಟ್ ಕಾರ್ಯದರ್ಶಿ ವಸಂತಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಗಮಕಿ ಮಳೂರು ಪಟ್ಟಣ ಪುಟ್ಟಸ್ವಾಮಿ ಕುಮಾರವ್ಯಾಸ ಭಾರತದ ಕೌರವೇಂದ್ರನ ಕೊಂದೆ ನೀನು ಪದ್ಯ ಭಾಗವನ್ನು ವಾಚಿಸಿದರು. ನಿವೃತ್ತ ಕನ್ನಡ ಪಂಡಿತ ಬೈ.ಪು. ಪ್ರಭುಸ್ವಾಮಿ ವ್ಯಾಖ್ಯಾನ ಮಾಡಿದರು.</p>.<p>ಸಂಸ್ಕೃತಿ ಚಿಂತಕಿ ವಿನೋಧಾ, ಟ್ರಸ್ಟ್ ಸಂಚಾಲಕರಾದ ಸಿ.ಕೆ. ಯೋಗಾನಂದ, ಸಿ.ಕೆ. ಸಾವಿತ್ರಿ, ಶಿಕ್ಷಕ ಕರಿಯಪ್ಪ, ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಗುರುಮಾದಯ್ಯ, ಬಿಇಒ ಕಚೇರಿ ಅಧೀಕ್ಷಕ ಪ್ರಶಾಂತ್ ಶರ್ಮ, ಶಿಕ್ಷಕರಾದ ರಾಘವೇಂದ್ರ ಮಯ್ಯ, ರಾಜಶೇಖರ ಇಟಗಿ, ಆನಂದ್, ದೀಪಾ, ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>