<p><strong>ಕನಕಪುರ:</strong> ಧಾರ್ಮಿಕ ಪ್ರಸಿದ್ಧ ಹಾಗೂ ಶಕ್ತಿದೇವತೆ ಎನಿಸಿಕೊಂಡಿರುವ ಕೊಟ್ಟಗಾಳು ಮಾರಮ್ಮ ದೇವಿ ಜಾತ್ರಾ ಮಹೋತ್ಸವ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ಈ ಜಾತ್ರಾ ಮಹೋತ್ಸವ ತಾಲ್ಲೂಕಿನಲ್ಲಿಯೇ ತುಂಬಾ ವಿಶಿಷ್ಟ ಆಚರಣೆಯೊಂದಿಗೆ ನಡೆಯುವುದು ವಾಡಿಕೆ. ಬೆಳಿಗ್ಗೆ ಮಾರಮ್ಮ ದೇವಿ ಅಗ್ನಿಕೊಂಡೋತ್ಸವ ನಡೆಯಿತು.</p>.<p>ವಿಶೇಷವಾಗಿ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಹರಕೆ ಹೊತ್ತ ಭಕ್ತರು ಕುರಿ,ಮೇಕೆ, ಕೋಳಿಗಳನ್ನು ದೇವರಿಗೆ ಒಪ್ಪಿಸುವುದು ವಾಡಿಕೆ. ಅದರಂತೆ ಬುಧವಾರ ಸಂಜೆ ಸಾವಿರಾರು ಸಂಖ್ಯೆ ಕುರಿ, ಕೋಳಿ, ಮೇಕೆಗಳನ್ನು ದೇವರಿಗೆ ಬಲಿ ನೀಡಲಾಯಿತು.</p>.<p>ಅಪಾರ ಸಂಖ್ಯೆ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಜಾತ್ರೆಗೆ ಬರುವ ಎಲ್ಲಾ ಭಕ್ತರಿಗೂ ಯಾವುದೇ ರೀತಿ ತೊಂದರೆ ಆಗದಂತೆ ಪ್ರಸಾದ ಸಿಗುವಂತೆ 20ಕ್ಕೂ ಹೆಚ್ಚು ಕೌಂಟರ್ಗಳನ್ನು ತೆರೆಯಲಾಗಿತ್ತು. ಭಕ್ತರಿಗೆ ಮುದ್ದೆ ಮತ್ತು ಕುರಿ – ಮೇಕೆ ಸಂಬಾರು ಅಡುಗೆ ತಯಾರು ಮಾಡಲಾಗಿತ್ತು.</p>.<p>ಬೆಳಿಗ್ಗೆ 11ರಿಂದ ಸಂಜೆ 4ರವರೆಗೂ ಪ್ರಸಾದ ವಿತರಣೆ ಕಾರ್ಯ ನಡೆಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಭದ್ರತೆ ಕಲ್ಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಧಾರ್ಮಿಕ ಪ್ರಸಿದ್ಧ ಹಾಗೂ ಶಕ್ತಿದೇವತೆ ಎನಿಸಿಕೊಂಡಿರುವ ಕೊಟ್ಟಗಾಳು ಮಾರಮ್ಮ ದೇವಿ ಜಾತ್ರಾ ಮಹೋತ್ಸವ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ಈ ಜಾತ್ರಾ ಮಹೋತ್ಸವ ತಾಲ್ಲೂಕಿನಲ್ಲಿಯೇ ತುಂಬಾ ವಿಶಿಷ್ಟ ಆಚರಣೆಯೊಂದಿಗೆ ನಡೆಯುವುದು ವಾಡಿಕೆ. ಬೆಳಿಗ್ಗೆ ಮಾರಮ್ಮ ದೇವಿ ಅಗ್ನಿಕೊಂಡೋತ್ಸವ ನಡೆಯಿತು.</p>.<p>ವಿಶೇಷವಾಗಿ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಹರಕೆ ಹೊತ್ತ ಭಕ್ತರು ಕುರಿ,ಮೇಕೆ, ಕೋಳಿಗಳನ್ನು ದೇವರಿಗೆ ಒಪ್ಪಿಸುವುದು ವಾಡಿಕೆ. ಅದರಂತೆ ಬುಧವಾರ ಸಂಜೆ ಸಾವಿರಾರು ಸಂಖ್ಯೆ ಕುರಿ, ಕೋಳಿ, ಮೇಕೆಗಳನ್ನು ದೇವರಿಗೆ ಬಲಿ ನೀಡಲಾಯಿತು.</p>.<p>ಅಪಾರ ಸಂಖ್ಯೆ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಜಾತ್ರೆಗೆ ಬರುವ ಎಲ್ಲಾ ಭಕ್ತರಿಗೂ ಯಾವುದೇ ರೀತಿ ತೊಂದರೆ ಆಗದಂತೆ ಪ್ರಸಾದ ಸಿಗುವಂತೆ 20ಕ್ಕೂ ಹೆಚ್ಚು ಕೌಂಟರ್ಗಳನ್ನು ತೆರೆಯಲಾಗಿತ್ತು. ಭಕ್ತರಿಗೆ ಮುದ್ದೆ ಮತ್ತು ಕುರಿ – ಮೇಕೆ ಸಂಬಾರು ಅಡುಗೆ ತಯಾರು ಮಾಡಲಾಗಿತ್ತು.</p>.<p>ಬೆಳಿಗ್ಗೆ 11ರಿಂದ ಸಂಜೆ 4ರವರೆಗೂ ಪ್ರಸಾದ ವಿತರಣೆ ಕಾರ್ಯ ನಡೆಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಭದ್ರತೆ ಕಲ್ಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>