<p><strong>ಬೆಂಗಳೂರು: </strong>ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಬಿಡದಿಯಲ್ಲಿ 11.5 ಮೆಗಾವಾಟ್ ಸಾಮರ್ಥ್ಯದಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸ್ಥಾವರ ನಿರ್ಮಾಣವಾಗಲಿದೆ.</p>.<p>₹260 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸ್ಥಾವರಕ್ಕೆ ನಿಗಮ ಹಾಗೂ ಪಾಲಿಕೆ ಸಮನಾಗಿ ಬಂಡವಾಳ ಹೂಡಲಿವೆ. ಇದರ ನಿರ್ವಹಣೆ ಜವಾಬ್ದಾರಿ ನಿಗಮ ವಹಿಸಿಕೊಂಡಿದೆ.</p>.<p>‘ಇತ್ತೀಚೆಗೆ ನಡೆದ ಸಭೆಯಲ್ಲಿ ಕೆಪಿಸಿಎಲ್ನ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಯೋಜನೆಗೆ ಅನುಮೋದನೆ ನೀಡಿದ್ದು, ಎರಡು ವರ್ಷದ ಅವಧಿಯಲ್ಲಿ ಯೋಜನೆ ಪೂರ್ಣಗೊಳ್ಳಲಿದೆ’ ಎಂದು ಕೆಪಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಯೋಜನೆಯ ನಿರ್ಮಾಣದ ಹೊಣೆಯನ್ನು ನೊಯಿಡಾದ ಐಎಸ್ಜಿಇಸಿ ಹೆವಿ ಎಂಜಿನಿಯರಿಂಗ್ ಲಿಮಿಟೆಡ್ ಹಾಗೂ ಹಿತಾಚಿ ಜೋಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ಸಂಸ್ಥೆಗಳಿಗೆ ನೀಡಲಾಗಿದೆ.</p>.<p>‘ಆತ್ಮನಿರ್ಭರ್ ಭಾರತ’ ಯೋಜನೆಯಡಿ ನಿರ್ಮಾಣವಾಗಲಿರುವ ಈ ಸ್ಥಾವರದಿಂದ ಬೆಂಗಳೂರಿನಲ್ಲಿ ಪ್ರತಿದಿನ ಸಂಗ್ರಹವಾಗುವ 600 ಟನ್ ತ್ಯಾಜ್ಯವನ್ನು ವಿದ್ಯುತ್ ಉತ್ಪಾದನೆಗೆ ಬಳಸಬಹುದು.</p>.<p>ಇದರಿಂದ ನಗರದ ಶೇ 25ರಷ್ಟು ಮಿಶ್ರ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬಹುದು. ಸ್ಥಾವರದಿಂದ ಪಾಲಿಕೆಗೆ ವಾರ್ಷಿಕ ₹14 ಕೋಟಿಯಷ್ಟು ತ್ಯಾಜ್ಯ ನಿರ್ವಹಣಾ ವೆಚ್ಚ ಉಳಿತಾಯ ಆಗಲಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಬಿಡದಿಯಲ್ಲಿ 11.5 ಮೆಗಾವಾಟ್ ಸಾಮರ್ಥ್ಯದಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸ್ಥಾವರ ನಿರ್ಮಾಣವಾಗಲಿದೆ.</p>.<p>₹260 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸ್ಥಾವರಕ್ಕೆ ನಿಗಮ ಹಾಗೂ ಪಾಲಿಕೆ ಸಮನಾಗಿ ಬಂಡವಾಳ ಹೂಡಲಿವೆ. ಇದರ ನಿರ್ವಹಣೆ ಜವಾಬ್ದಾರಿ ನಿಗಮ ವಹಿಸಿಕೊಂಡಿದೆ.</p>.<p>‘ಇತ್ತೀಚೆಗೆ ನಡೆದ ಸಭೆಯಲ್ಲಿ ಕೆಪಿಸಿಎಲ್ನ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಯೋಜನೆಗೆ ಅನುಮೋದನೆ ನೀಡಿದ್ದು, ಎರಡು ವರ್ಷದ ಅವಧಿಯಲ್ಲಿ ಯೋಜನೆ ಪೂರ್ಣಗೊಳ್ಳಲಿದೆ’ ಎಂದು ಕೆಪಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಯೋಜನೆಯ ನಿರ್ಮಾಣದ ಹೊಣೆಯನ್ನು ನೊಯಿಡಾದ ಐಎಸ್ಜಿಇಸಿ ಹೆವಿ ಎಂಜಿನಿಯರಿಂಗ್ ಲಿಮಿಟೆಡ್ ಹಾಗೂ ಹಿತಾಚಿ ಜೋಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ಸಂಸ್ಥೆಗಳಿಗೆ ನೀಡಲಾಗಿದೆ.</p>.<p>‘ಆತ್ಮನಿರ್ಭರ್ ಭಾರತ’ ಯೋಜನೆಯಡಿ ನಿರ್ಮಾಣವಾಗಲಿರುವ ಈ ಸ್ಥಾವರದಿಂದ ಬೆಂಗಳೂರಿನಲ್ಲಿ ಪ್ರತಿದಿನ ಸಂಗ್ರಹವಾಗುವ 600 ಟನ್ ತ್ಯಾಜ್ಯವನ್ನು ವಿದ್ಯುತ್ ಉತ್ಪಾದನೆಗೆ ಬಳಸಬಹುದು.</p>.<p>ಇದರಿಂದ ನಗರದ ಶೇ 25ರಷ್ಟು ಮಿಶ್ರ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬಹುದು. ಸ್ಥಾವರದಿಂದ ಪಾಲಿಕೆಗೆ ವಾರ್ಷಿಕ ₹14 ಕೋಟಿಯಷ್ಟು ತ್ಯಾಜ್ಯ ನಿರ್ವಹಣಾ ವೆಚ್ಚ ಉಳಿತಾಯ ಆಗಲಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>