ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್. ಜೀವನ್ ಮಾತನಾಡಿ, ‘ಜಾಥಾ ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಆನೇಕಲ್, ಹಾರೋಹಳ್ಳಿ ಮೂಲಕ ರಾಮನಗರ ತಲುಪಿದೆ. ಇಡೀ ರಾಜ್ಯದಾದ್ಯಂತ ಜಾಥಾ ನಡೆಯುತ್ತದೆ. ಪಕ್ಷದ ಸಿದ್ಧಾಂತಗಳನ್ನು ಹಾಗೂ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಜನವಿರೋಧಿ ನಿಲುವು ಹಾಗೂ ನೀತಿಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದರು.