<p><strong>ಕುದೂರು:</strong> ಇಲ್ಲಿನ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಪಂಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ ಶನಿವಾರ ಹಿಂಬದಿಯಿಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೂಡೆದು ಬಸ್ ಚಾಲಕ ಸೇರಿ ಸುಮಾರು 20ಕ್ಕೂ ಹೆಚ್ಚು ಪ್ರಮಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.</p>.<p>ಸೋಲೂರು ಬಳಿ ಪಂಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ ಹಿಂಭಾಗಕ್ಕೆ ಚಿಕ್ಕಮಗಳೂರು ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಅಶ್ವಮೇಧ ಬಸ್ ರಭಸದಿಂದ ಗುದ್ದಿದೆ. </p>.<p>ಬಸ್ ಮುಂಭಾಗ ಸಂಪೂರ್ಣ ಜಖಂ ಆಗಿದ್ದರಿಂದ ಚಾಲಕನ ರಕ್ಷಣೆ ಕಷ್ಟವಾಗಿತು. ಬಳಿಕ ಬೃಹತ್ ನಿರ್ಮಾಣ ಯಂತ್ರದ ಮೂಲಕ ಬಸ್ ಬೇಪರ್ಡಿಸಿ ಬಸ್ ಚಾಲಕನನ್ನು ರಕ್ಷಣೆ ಮಾಡಲಾಯಿತು.</p>.<p>ಹಾಸನದ ವಡ್ಡರಹಳ್ಳಿ ಸೋಮಶೇಖರ್ ಹಾಗೂ ಬೆಂಗಳೂರಿನ ಎಂ.ಎಸ್.ಪಾಳ್ಯದ ಶಶಿಕಲಾ ಎಂಬುವರನ್ನು ನೆಲಮಂಗಲ ಆಸ್ಪತ್ರಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ರಸ್ತೆ ಬದಿ ಕ್ಯಾಂಟರ್ ನಿಲ್ಲಿಸಿದ್ದ ಚಾಲಕ ಈ ಬಗ್ಗೆ ಯಾವುದೇ ಸೂಚನೆ ನೀಡದೆ ಇರುವುದು ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಕುದೂರು ಪಿಎಸ್ಐ ನವೀನ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಗಾಯಗೂಂಡವರನ್ನು ನೆಲಮಂಗಲ, ಬೆಂಗಳೂರಿಗೆ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಿದರು. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು:</strong> ಇಲ್ಲಿನ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಪಂಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ ಶನಿವಾರ ಹಿಂಬದಿಯಿಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೂಡೆದು ಬಸ್ ಚಾಲಕ ಸೇರಿ ಸುಮಾರು 20ಕ್ಕೂ ಹೆಚ್ಚು ಪ್ರಮಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.</p>.<p>ಸೋಲೂರು ಬಳಿ ಪಂಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ ಹಿಂಭಾಗಕ್ಕೆ ಚಿಕ್ಕಮಗಳೂರು ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಅಶ್ವಮೇಧ ಬಸ್ ರಭಸದಿಂದ ಗುದ್ದಿದೆ. </p>.<p>ಬಸ್ ಮುಂಭಾಗ ಸಂಪೂರ್ಣ ಜಖಂ ಆಗಿದ್ದರಿಂದ ಚಾಲಕನ ರಕ್ಷಣೆ ಕಷ್ಟವಾಗಿತು. ಬಳಿಕ ಬೃಹತ್ ನಿರ್ಮಾಣ ಯಂತ್ರದ ಮೂಲಕ ಬಸ್ ಬೇಪರ್ಡಿಸಿ ಬಸ್ ಚಾಲಕನನ್ನು ರಕ್ಷಣೆ ಮಾಡಲಾಯಿತು.</p>.<p>ಹಾಸನದ ವಡ್ಡರಹಳ್ಳಿ ಸೋಮಶೇಖರ್ ಹಾಗೂ ಬೆಂಗಳೂರಿನ ಎಂ.ಎಸ್.ಪಾಳ್ಯದ ಶಶಿಕಲಾ ಎಂಬುವರನ್ನು ನೆಲಮಂಗಲ ಆಸ್ಪತ್ರಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ರಸ್ತೆ ಬದಿ ಕ್ಯಾಂಟರ್ ನಿಲ್ಲಿಸಿದ್ದ ಚಾಲಕ ಈ ಬಗ್ಗೆ ಯಾವುದೇ ಸೂಚನೆ ನೀಡದೆ ಇರುವುದು ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಕುದೂರು ಪಿಎಸ್ಐ ನವೀನ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಗಾಯಗೂಂಡವರನ್ನು ನೆಲಮಂಗಲ, ಬೆಂಗಳೂರಿಗೆ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಿದರು. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>