ಕನಕಪುರ (ರಾಮನಗರ): ತಾಲ್ಲೂಕಿನ ಸೋಮನಹಳ್ಳಿ ಗೇಟ್ ಬಳಿ ಗುರುವಾರ ಬೆಳಿಗ್ಗೆ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿದ್ದು, ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕನಕಪುರದ ಡಿಪೊಗೆ ಸೇರಿದ ಬಸ್ ಬೆಳಿಗ್ಗೆ 8.30ರ ಸುಮಾರಿಗೆ ಬೆಂಗಳೂರಿಗೆ ಹೊರಟ್ಟಿದ್ದಾಗ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಕಗ್ಗಲಿಪುರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕೆಎಸ್ಆರ್ಟಿಸಿ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.