ರಾಮನಗರ ಘಟಕದಲ್ಲಿ 550ಕ್ಕೂ ಹೆಚ್ಚು ಬಸ್ಗಳು ಇವೆ. ಕೋವಿಡ್ ಪೂರ್ವದಲ್ಲಿ 450–500 ಮಾರ್ಗಗಳಲ್ಲಿ ಈ ಬಸ್ಗಳು ಸಂಚರಿಸುತ್ತಿದ್ದು, ದಿನಕ್ಕೆ ಸರಾಸರಿ ₹ 45 ಲಕ್ಷ ಆದಾಯ ಸಂಗ್ರಹ ಆಗುತ್ತಿತ್ತು. ಕಳೆದ ಎರಡು ತಿಂಗಳಿಂದ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ₹ 30 ಕೋಟಿಯಷ್ಟು ಆದಾಯ ಖೋತಾ ಆಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಇದಲ್ಲದೆ ಏಪ್ರಿಲ್ನಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದರು. ಈ ಸಂದರ್ಭವೂ 15 ದಿನಕ್ಕೂ ಹೆಚ್ಚು ಕಾಲ ಬಸ್ ಸಂಚಾರ ಬಂದ್ ಆಗಿದ್ದು, ಸಂಸ್ಥೆಯು ಕೋಟ್ಯಂತರ ರೂಪಾಯಿ ನಷ್ಟಅನುಭವಿಸಿತ್ತು.