ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುದೂರು: ಸಂಜೀವಿನಿ ಮಾಸಿಕ ಸಂತೆ, ಮನ ಸೆಳೆದ ರೇಷ್ಮೆ ಸೀರೆಗಳು

ಮನ ಸೆಳೆದ ರೇಷ್ಮೆ ಸೀರೆಗಳು
Last Updated 29 ಜೂನ್ 2022, 3:12 IST
ಅಕ್ಷರ ಗಾತ್ರ

ಕುದೂರು (ಮಾಗಡಿ): ಇಲ್ಲಿನ ಗ್ರಾಮ ಪಂಚಾಯಿತಿಯ ತರಕಾರಿ ಸಂತೆ ಮೈದಾನದಲ್ಲಿ ಮಂಗಳವಾರ ಸಂಜೀವಿನಿ ಮಾಸಿಕ ಸಂತೆ ಅಂಗವಾಗಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರ ಸಂತೆ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ ಒಂದು ಕಾಲದಲ್ಲಿ ಕೈಮಗ್ಗಗಳಲ್ಲಿ ಅತ್ಯುತ್ತಮವಾದ ರೇಷ್ಮೆ ಸೀರೆಗಳನ್ನು ನೇಯ್ದು ಮಾರಾಟ ಮಾಡಲಾಗುತ್ತಿತ್ತು. ಬದಲಾದ ಕಾಲಘಟ್ಟದಲ್ಲಿ ಕೈಮಗ್ಗಗಳು ಮೂಲೆಗುಂಪಾಗಿ ವಿದ್ಯುತ್‌ ಚಾಲಿತ ಮಗ್ಗಗಳು ಬಳಕೆಗೆ ಬಂದಿವೆ ಎಂದು ತಿಳಿಸಿದರು.

ಉತ್ತಮ ಗುಣಮಟ್ಟದ ರೇಷ್ಮೆ ಸೀರೆಗಳನ್ನು ತಯಾರಿಸುತ್ತಿರುವ ಮಹಿಳೆಯರಿಗೆ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಕೊಡಮಾಡಿರುವ ಸವಲತ್ತು ಒದಗಿಸಲಾಗುವುದು ಎಂದರು.

ಮಹಿಳೆಯರು ಗೃಹ ಕೃತ್ಯ ನಿರ್ವಹಿಸುವುದರ ಜತೆಗೆ ಕೌಶಲ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಿಡಿಒ ಲೋಕೇಶ್‌ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ತಿಂಗಳಿಗೊಂದು ಸಂಜೀವಿನಿ ಮಾಸಿಕ ಸಂತೆ ನಡೆಸಲಾಗುವುದು. ತಾಲ್ಲೂಕು ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ, ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ವಿಶೇಷ ಸವಲತ್ತು ದೊರಕಿಸಿ ಕೊಡಲಾಗುವುದು. ಮಹಿಳೆಯರ ಸಬಲೀಕರಣಕ್ಕೆ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.

ಗ್ರಾ.ಪಂ. ಅಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ಅನಂತನಾರಾಯಣ, ಗಿರೀಶ್‌ ಹಾಗೂ ಸಂಜೀವಿನಿ ಒಕ್ಕೂಟದ ಮಹಿಳೆಯರು ಇದ್ದರು. ಮಹಿಳೆಯರೇ ತಯಾರಿಸಿರುವ ರೇಷ್ಮೆ ಸೀರೆಗಳು ಮನ ಸೆಳೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT