<p><strong>ಕುದೂರು (ಮಾಗಡಿ) :</strong> ಯುದ್ಧದ ಪರಿಣಾಮ ಗ್ರಾಮೀಣ ಭಾಗದ ಅಡುಗೆ ಮನೆಗಳಿಗೂ ತಟ್ಟಿದ್ದು ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಹಾಗೂ ಬೆಲೆ ಏರಿಕೆಯಿಂದಾಗಿ ಜನರು ಮತ್ತೆ ಹಳೆಯ ಕಾಲದ ಸೌದೆ ಒಲೆಗಳ ಮೊರೆ ಹೋಗುತ್ತಿದ್ದಾರೆ.</p>.<p>ಬೇಸಿಗೆಯಲ್ಲಿ ಮಣ್ಣಿನ ಕುಡಿಕೆ, ಮಡಿಕೆ, ಬಿಂದಿಗೆ ಮಾರಾಟವಾಗುತ್ತಿದ್ವು. ಆದರೆ, ಈ ಬಾರಿ ಮರೂರು ಗ್ರಾಮದ ರಸ್ತೆ ಬದಿ ಮಣ್ಣಿನ ಒಲೆಗಳ ವ್ಯಾಪಾರ ಜೋರಾಗಿ ನಡೆಯುತ್ತಿದೆ.</p>.<p>ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ಅನಿವಾರ್ಯ ಸಂದರ್ಭಗಳಲ್ಲಿ ಹಳೆಯ ಪದ್ಧತಿಗಳೇ ಕೈಹಿಡಿಯುತ್ತವೆ ಎನ್ನುತ್ತಾರೆ ಮರೂರು ಗ್ರಾಮದ ಗಣೇಶ್ ಅವರ ಅಂಗಡಿಯಲ್ಲಿ ಮಣ್ಣಿನ ಒಲೆಗಳನ್ನು ಖರೀದಿಸಿದ ಖಾಜೀಪಾಳ್ಯ ಗ್ರಾಮದ ಮಹದೇವಮ್ಮ, ಭೈರಪ್ಪ ಮತ್ತು ಸಬಿವುಲ್ಲಾ.</p>.<p>‘ಪ್ರತಿ ವರ್ಷ ಬೇಸಿಗೆಯಲ್ಲಿ ಕೇವಲ ನೀರಿನ ಮಡಿಕೆಗಳ ವ್ಯಾಪಾರ ಜೋರಾಗಿ ನಡೆಯುತ್ತಿತ್ತು. ಆದರೆ ಈ ಬಾರಿ ಯುದ್ಧದಿಂದಾಗಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಿಸುತ್ತಿರುವ ಜನರು ಸೌದೆ ಒಲೆಗಳತ್ತ ಆಸಕ್ತಿ ತೋರುತ್ತಿದ್ದಾರೆ. ಗ್ರಾಹಕರಿಗೆ ಹೊರೆಯಾಗಬಾರದೆಂಬ ಉದ್ದೇಶದಿಂದ ಒಲೆಗಳಿಗೆ ಹೆಚ್ಚಿನ ದರ ವಿಧಿಸುತ್ತಿಲ್ಲ. ಗಾತ್ರ ಮತ್ತು ವಿನ್ಯಾಸಕ್ಕೆ ಅನುಗುಣವಾಗಿ ₹300, ₹350 ಹಾಗೂ ₹400 ದರದಲ್ಲಿ ಮನೆಯಲ್ಲೇ ಸಿದ್ಧಪಡಿಸಿದ ಮಣ್ಣಿನ ಒಲೆಗಳನ್ನು ಮಾರಾಟ ಮಾಡುತ್ತಿದ್ದೇವೆ’ ಎಂದು ಮಡಿಕೆ ವ್ಯಾಪಾರಿ ಗಣೇಶ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-14-1139981510</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು (ಮಾಗಡಿ) :</strong> ಯುದ್ಧದ ಪರಿಣಾಮ ಗ್ರಾಮೀಣ ಭಾಗದ ಅಡುಗೆ ಮನೆಗಳಿಗೂ ತಟ್ಟಿದ್ದು ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಹಾಗೂ ಬೆಲೆ ಏರಿಕೆಯಿಂದಾಗಿ ಜನರು ಮತ್ತೆ ಹಳೆಯ ಕಾಲದ ಸೌದೆ ಒಲೆಗಳ ಮೊರೆ ಹೋಗುತ್ತಿದ್ದಾರೆ.</p>.<p>ಬೇಸಿಗೆಯಲ್ಲಿ ಮಣ್ಣಿನ ಕುಡಿಕೆ, ಮಡಿಕೆ, ಬಿಂದಿಗೆ ಮಾರಾಟವಾಗುತ್ತಿದ್ವು. ಆದರೆ, ಈ ಬಾರಿ ಮರೂರು ಗ್ರಾಮದ ರಸ್ತೆ ಬದಿ ಮಣ್ಣಿನ ಒಲೆಗಳ ವ್ಯಾಪಾರ ಜೋರಾಗಿ ನಡೆಯುತ್ತಿದೆ.</p>.<p>ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ಅನಿವಾರ್ಯ ಸಂದರ್ಭಗಳಲ್ಲಿ ಹಳೆಯ ಪದ್ಧತಿಗಳೇ ಕೈಹಿಡಿಯುತ್ತವೆ ಎನ್ನುತ್ತಾರೆ ಮರೂರು ಗ್ರಾಮದ ಗಣೇಶ್ ಅವರ ಅಂಗಡಿಯಲ್ಲಿ ಮಣ್ಣಿನ ಒಲೆಗಳನ್ನು ಖರೀದಿಸಿದ ಖಾಜೀಪಾಳ್ಯ ಗ್ರಾಮದ ಮಹದೇವಮ್ಮ, ಭೈರಪ್ಪ ಮತ್ತು ಸಬಿವುಲ್ಲಾ.</p>.<p>‘ಪ್ರತಿ ವರ್ಷ ಬೇಸಿಗೆಯಲ್ಲಿ ಕೇವಲ ನೀರಿನ ಮಡಿಕೆಗಳ ವ್ಯಾಪಾರ ಜೋರಾಗಿ ನಡೆಯುತ್ತಿತ್ತು. ಆದರೆ ಈ ಬಾರಿ ಯುದ್ಧದಿಂದಾಗಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಿಸುತ್ತಿರುವ ಜನರು ಸೌದೆ ಒಲೆಗಳತ್ತ ಆಸಕ್ತಿ ತೋರುತ್ತಿದ್ದಾರೆ. ಗ್ರಾಹಕರಿಗೆ ಹೊರೆಯಾಗಬಾರದೆಂಬ ಉದ್ದೇಶದಿಂದ ಒಲೆಗಳಿಗೆ ಹೆಚ್ಚಿನ ದರ ವಿಧಿಸುತ್ತಿಲ್ಲ. ಗಾತ್ರ ಮತ್ತು ವಿನ್ಯಾಸಕ್ಕೆ ಅನುಗುಣವಾಗಿ ₹300, ₹350 ಹಾಗೂ ₹400 ದರದಲ್ಲಿ ಮನೆಯಲ್ಲೇ ಸಿದ್ಧಪಡಿಸಿದ ಮಣ್ಣಿನ ಒಲೆಗಳನ್ನು ಮಾರಾಟ ಮಾಡುತ್ತಿದ್ದೇವೆ’ ಎಂದು ಮಡಿಕೆ ವ್ಯಾಪಾರಿ ಗಣೇಶ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-14-1139981510</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>