ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಯಡಿಯೂರಪ್ಪ ಅವರ ಎರಡು ವರ್ಷದ ಸಾಧನೆ ಬಗ್ಗೆ ಅಂಕ ಕೊಡಲು ನಾನು ಲೆಕ್ಚರರ್ ಅಲ್ಲ. ಅವರನ್ನು ಮುಖ್ಯಮಂತ್ರಿಯಾಗಿ ಉಳಿಸಿಕೊಳ್ಳುವ ಇಲ್ಲವೇ ಕೈಬಿಡುವ ಬಗ್ಗೆ ಬಿಜೆಪಿ ವರಿಷ್ಠರು ನಿರ್ಧರಿಸುತ್ತಾರೆ. ಇದರಲ್ಲಿ ನಮಗೆ ಯಾವ ಲಾಭವೂ ಬೇಡ. ಜೆಡಿಎಸ್ ಬೆಂದ ಮನೆಯಲ್ಲಿ ಗಳ ಇರಿಯುವ ಕೆಲಸ ಮಾಡುವುದಿಲ್ಲ. ಮೈತ್ರಿ ಸರ್ಕಾರ ಕೆಡವಿ ಬಂದವರೇ ಈ ಸಂಕಷ್ಟಕ್ಕೆ ಪರಿಹಾರ ನೀಡಬೇಕು. ರಾಜ್ಯದ ಜನರ ಪರ ಕೆಲಸ ಮಾಡಬೇಕು’ ಎಂದರು.