<p><strong>ಕನಕಪುರ:</strong> ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಭೋಗನಂಜಪ್ಪನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಸಾಲ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ.</p>.<p>ಹೊನ್ನಯ್ಯ (41) ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.</p>.<p>ಮನೆ ನಿರ್ಮಾಣಕ್ಕೆ ಮೂರು ವರ್ಷದ ಹಿಂದೆ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ₹6.85 ಲಕ್ಷ ಮನೆ ಸಾಲ ಪಡೆದಿದ್ದರು. ಫೈನಾನ್ಸ್ನವರು ₹1.15 ಲಕ್ಷ ವಿಮೆ ಮೊತ್ತವನ್ನು ಮುಂಗಡ ಕಡಿತ ಮಾಡಿ ಉಳಿದ ₹6.85 ಲಕ್ಷ ಕೊಟ್ಟಿದ್ದರು.</p>.<p>ಪ್ರತಿ ತಿಂಗಳು ಫೈನಾನ್ಸ್ನವರು ಮನೆಗೆ ಬಂದು ಸಾಲದ ಕಂತು ಕಟ್ಟಿಸಿಕೊಳ್ಳುತ್ತಿದ್ದರು. ಕಳೆದ ಆರು ತಿಂಗಳಿಂದ ಸರಿಯಾಗಿ ಕೆಲಸ ಇಲ್ಲದ ಕಾರಣ ಸಾಲದ ಕಂತು ಪಾವತಿಸಿರಲಿಲ್ಲ ಎಂದು ತಿಳಿದು ಬಂದಿದೆ.</p>.<p>‘ಸಾಲ ಕಟ್ಟದಿದ್ದರೆ ಅರೆಸ್ಟ್ ಆಗುತ್ತೀರಾ. ಮನೆಯ ಜಾಗ ವಶಪಡಿಸಿಕೊಳ್ಳಲಾಗುವುದು ಎಂದು ಬೆದರಿಸುತ್ತಿದ್ದರು’ ಎಂದು ಕಂತು ಪಡೆಯಲು ಮನೆಗೆ ಬರುತ್ತಿದ್ದ ಹಣಕಾಸು ಸಂಸ್ಥೆ ಸಿಬ್ಬಂದಿ ಬೆದರಿಕೆ ಹಾಕುತ್ತಿದ್ದರು ಎಂದು ಮೃತರ ಪತ್ನಿ ಜಯರತ್ನಮ್ಮ ಕೊಡಿಗೇಹಳ್ಳಿ ಠಾಣೆಗೆ ಕೊಟ್ಟ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಮೇ 27ರಂದು ಹಣಕಾಸು ಸಂಸ್ಥೆ ಸಿಬ್ಬಂದಿ ಬಂದು ಎಚ್ಚರಿಕೆ ನೀಡಿ ಹೋಗಿದ್ದರು. ಇದರಿಂದ ಬೇಸತ್ತ ಪತಿ ಬೆಳಗ್ಗಿನ ಜಾವ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಅವರ ಸಾವಿಗೆ ಹಣಕಾಸು ಸಂಸ್ಥೆಯವರ ಕಿರುಕುಳವೇ ಕಾರಣ’ ಎಂದು ಅವರು ಆರೋಪ ಮಾಡಿದ್ದಾರೆ. </p>.<p>ಮೃತರ ಪತ್ನಿಯ ದೂರು ಆಧರಿಸಿ ಫೈನಾನ್ಸ್ ಸಂಸ್ಥೆಯ ಕನಕಪುರ ಶಾಖೆಯ ವ್ಯವಸ್ಥಾಪಕ ಮತ್ತು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಭೋಗನಂಜಪ್ಪನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಸಾಲ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ.</p>.<p>ಹೊನ್ನಯ್ಯ (41) ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.</p>.<p>ಮನೆ ನಿರ್ಮಾಣಕ್ಕೆ ಮೂರು ವರ್ಷದ ಹಿಂದೆ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ₹6.85 ಲಕ್ಷ ಮನೆ ಸಾಲ ಪಡೆದಿದ್ದರು. ಫೈನಾನ್ಸ್ನವರು ₹1.15 ಲಕ್ಷ ವಿಮೆ ಮೊತ್ತವನ್ನು ಮುಂಗಡ ಕಡಿತ ಮಾಡಿ ಉಳಿದ ₹6.85 ಲಕ್ಷ ಕೊಟ್ಟಿದ್ದರು.</p>.<p>ಪ್ರತಿ ತಿಂಗಳು ಫೈನಾನ್ಸ್ನವರು ಮನೆಗೆ ಬಂದು ಸಾಲದ ಕಂತು ಕಟ್ಟಿಸಿಕೊಳ್ಳುತ್ತಿದ್ದರು. ಕಳೆದ ಆರು ತಿಂಗಳಿಂದ ಸರಿಯಾಗಿ ಕೆಲಸ ಇಲ್ಲದ ಕಾರಣ ಸಾಲದ ಕಂತು ಪಾವತಿಸಿರಲಿಲ್ಲ ಎಂದು ತಿಳಿದು ಬಂದಿದೆ.</p>.<p>‘ಸಾಲ ಕಟ್ಟದಿದ್ದರೆ ಅರೆಸ್ಟ್ ಆಗುತ್ತೀರಾ. ಮನೆಯ ಜಾಗ ವಶಪಡಿಸಿಕೊಳ್ಳಲಾಗುವುದು ಎಂದು ಬೆದರಿಸುತ್ತಿದ್ದರು’ ಎಂದು ಕಂತು ಪಡೆಯಲು ಮನೆಗೆ ಬರುತ್ತಿದ್ದ ಹಣಕಾಸು ಸಂಸ್ಥೆ ಸಿಬ್ಬಂದಿ ಬೆದರಿಕೆ ಹಾಕುತ್ತಿದ್ದರು ಎಂದು ಮೃತರ ಪತ್ನಿ ಜಯರತ್ನಮ್ಮ ಕೊಡಿಗೇಹಳ್ಳಿ ಠಾಣೆಗೆ ಕೊಟ್ಟ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಮೇ 27ರಂದು ಹಣಕಾಸು ಸಂಸ್ಥೆ ಸಿಬ್ಬಂದಿ ಬಂದು ಎಚ್ಚರಿಕೆ ನೀಡಿ ಹೋಗಿದ್ದರು. ಇದರಿಂದ ಬೇಸತ್ತ ಪತಿ ಬೆಳಗ್ಗಿನ ಜಾವ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಅವರ ಸಾವಿಗೆ ಹಣಕಾಸು ಸಂಸ್ಥೆಯವರ ಕಿರುಕುಳವೇ ಕಾರಣ’ ಎಂದು ಅವರು ಆರೋಪ ಮಾಡಿದ್ದಾರೆ. </p>.<p>ಮೃತರ ಪತ್ನಿಯ ದೂರು ಆಧರಿಸಿ ಫೈನಾನ್ಸ್ ಸಂಸ್ಥೆಯ ಕನಕಪುರ ಶಾಖೆಯ ವ್ಯವಸ್ಥಾಪಕ ಮತ್ತು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>