ಒತ್ತುವರಿಯಾಗಿದ್ದ ಕೆರೆ ಪ್ರದೇಶವನ್ನು ಅಧಿಕಾರಿಗಳು ಜೆಸಿಬಿ ಮೂಲಕ ತೆರವುಗೊಳಿಸಿದರು
ಕೆರೆ ಪ್ರದೇಶದ ಒತ್ತುವರಿ ತೆರವು ಬಳಿಕ ಕೆರೆಯ ಗಡಿಯಲ್ಲಿ ಕಲ್ಲು ನೆಟ್ಟಿ ಬಣ್ಣ ಬಳಿಯಲಾಯಿತು
ಒತ್ತುವರಿಗೆ ಒಳಗಾಗಿದ್ದ ಚನ್ನಪಟ್ಟಣದ ಶೆಟ್ಟಿಹಳ್ಳಿ ಕೆರೆಗೆ ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರು ಎರಡು ತಿಂಗಳ ಹಿಂದೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ಸಂದರ್ಭ

ಜಿಲ್ಲೆಯಾದ್ಯಂತ ಒತ್ತುವರಿ ಆಗಿರುವ ಕೆರೆಗಳನ್ನು ಗುರುತಿಸಲಾಗಿದೆ. ಒತ್ತುವರಿದಾರರಿಗೆ ನೋಟಿಸ್ ನೀಡಿ ತೆರವು ಕಾರ್ಯಾಚರಣೆ ನಡೆಸುವುದರ ಜೊತೆಗೆ ಮುಂದೆ ಕೆರೆ ಪ್ರದೇಶವನ್ನು ಒತ್ತುವರಿ ಮಾಡದಂತೆ ಬಂದೋಬಸ್ತ್ ಮಾಡಲಾಗುತ್ತಿದೆ
ಯಶವಂತ್ ವಿ. ಗುರುಕರ್ ಜಿಲ್ಲಾಧಿಕಾರಿ ಬೆಂಗಳೂರು ದಕ್ಷಿಣ
ಒತ್ತುವರಿಯಾಗಿರುವ ಕೆರೆ ಪ್ರದೇಶದಲ್ಲಿ ಕೆಲವರು ತೆಂಗು ಅಡಿಕೆ ಸೇರಿದಂತೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆದಿರುವುದು ಕೆರೆಗಳನ್ನು ಅಳತೆ ಮಾಡಿದ ಸಂದರ್ಭದಲ್ಲಿ ಕಂಡುಬಂದಿದೆ
ಬಿ.ಆರ್. ಹನುಮೇಗೌಡ ಉಪ ನಿರ್ದೇಶಕ ಭೂ ದಾಖಲೆಗಳ ಇಲಾಖೆ
ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸಮರೋಪಾದಿಯಲ್ಲಿ ನಡೆಸಬೇಕು. ಮುಂದೆ ಒತ್ತುವರಿಗೆ ಅವಕಾಶವಿಲ್ಲದಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಿ ನಿಗಾ ಇಡಬೇಕು
ಸಿ. ಪುಟ್ಟಸ್ವಾಮಿ ರೈತ ಮುಖಂಡ ಚನ್ನಪಟ್ಟಣ