<p>ಮಾಗಡಿ: ತಾಲ್ಲೂಕಿನ ಸಾವನದುರ್ಗದ ಲಕ್ಷ್ಮಿ ನರಸಿಂಹಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ಬ್ರಹ್ಮ ರಥೋತ್ಸವಕ್ಕೆ ತಹಶೀಲ್ದಾರ್ ಶರತ್ ಕುಮಾರ್ ವಿಧಿವಿಧಾನಗಳ ಮೂಲಕ ಚಾಲನೆ ನೀಡಿದರು. ಭಕ್ತರು ಬಾಳೆಹಣ್ಣು, ದವನ ಅರ್ಪಿಸಿ ಹರಕೆ ತೀರಿಸಿದರು. </p>.<p>ಜಾತ್ರೆಯಲ್ಲಿ ವಿವಿಧ ಸಮುದಾಯಗಳ ಅರವಟ್ಟಿಗೆಗಳಲ್ಲಿ ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆ ಹಾಗು ಅನ್ನ ಸಂತರ್ಪಣೆ ನೆರವೇರಿತು.</p>.<p>ಪಟದ ಕುಣಿತ ಎಲ್ಲರನ್ನು ರಂಜಿಸಿತು. ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು. ರಥೋತ್ಸವದ ಹಿನ್ನಲೆ ಸ್ವಾಮಿಗೆ ವಿಶೇಷ ಪೂಜೆ ನೆರವೇರಿತು. ಜೊತೆಗೆ ದೇವಾಲಯ ಹಾಗೂ ಸ್ವಾಮಿಗೆ ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. </p>.<p>ನಾಯಕನ ಪಾಳ್ಯ, ವೀರೇಗೌಡನ ದೊಡ್ಡಿ, ಕಲರಮಂಗಲ, ಗುಡ್ಡಹಳ್ಳಿ, ಮತ್ತ, ಅತ್ತಿಂಗೆರೆ, ಮಾಗಡಿ ಸೇರಿದಂತೆ ಅನೇಕ ಹಳ್ಳಿಗಳಿಂದ ರಥೋತ್ಸವಕ್ಕೆ ಭಕ್ತರು ಆಗಮಿಸಿದ್ದರು.</p>.<p>ಸಾವನದುರ್ಗ ಲಕ್ಷ್ಮಿ ನರಸಿಂಹಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ಪಟ್ಟಣದ ಶ್ರೀರಾಮ ಮಂದಿರದಲ್ಲಿ ವಿಪ್ರ ಸಮುದಾಯದ ವತಿಯಿಂದ ನರಸಿಂಹ ಜಯಂತಿ ಆಚರಿಸಲಾಯಿತು. ವಿವಿಧ ಪೂಜಾ ಕಾರ್ಯಗಳು ನೆರವೇರಿದವು. ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ತಾಲ್ಲೂಕಿನ ಸಾವನದುರ್ಗದ ಲಕ್ಷ್ಮಿ ನರಸಿಂಹಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ಬ್ರಹ್ಮ ರಥೋತ್ಸವಕ್ಕೆ ತಹಶೀಲ್ದಾರ್ ಶರತ್ ಕುಮಾರ್ ವಿಧಿವಿಧಾನಗಳ ಮೂಲಕ ಚಾಲನೆ ನೀಡಿದರು. ಭಕ್ತರು ಬಾಳೆಹಣ್ಣು, ದವನ ಅರ್ಪಿಸಿ ಹರಕೆ ತೀರಿಸಿದರು. </p>.<p>ಜಾತ್ರೆಯಲ್ಲಿ ವಿವಿಧ ಸಮುದಾಯಗಳ ಅರವಟ್ಟಿಗೆಗಳಲ್ಲಿ ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆ ಹಾಗು ಅನ್ನ ಸಂತರ್ಪಣೆ ನೆರವೇರಿತು.</p>.<p>ಪಟದ ಕುಣಿತ ಎಲ್ಲರನ್ನು ರಂಜಿಸಿತು. ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು. ರಥೋತ್ಸವದ ಹಿನ್ನಲೆ ಸ್ವಾಮಿಗೆ ವಿಶೇಷ ಪೂಜೆ ನೆರವೇರಿತು. ಜೊತೆಗೆ ದೇವಾಲಯ ಹಾಗೂ ಸ್ವಾಮಿಗೆ ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. </p>.<p>ನಾಯಕನ ಪಾಳ್ಯ, ವೀರೇಗೌಡನ ದೊಡ್ಡಿ, ಕಲರಮಂಗಲ, ಗುಡ್ಡಹಳ್ಳಿ, ಮತ್ತ, ಅತ್ತಿಂಗೆರೆ, ಮಾಗಡಿ ಸೇರಿದಂತೆ ಅನೇಕ ಹಳ್ಳಿಗಳಿಂದ ರಥೋತ್ಸವಕ್ಕೆ ಭಕ್ತರು ಆಗಮಿಸಿದ್ದರು.</p>.<p>ಸಾವನದುರ್ಗ ಲಕ್ಷ್ಮಿ ನರಸಿಂಹಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ಪಟ್ಟಣದ ಶ್ರೀರಾಮ ಮಂದಿರದಲ್ಲಿ ವಿಪ್ರ ಸಮುದಾಯದ ವತಿಯಿಂದ ನರಸಿಂಹ ಜಯಂತಿ ಆಚರಿಸಲಾಯಿತು. ವಿವಿಧ ಪೂಜಾ ಕಾರ್ಯಗಳು ನೆರವೇರಿದವು. ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>