<p><strong>ಹಾರೋಹಳ್ಳಿ:</strong> ಉರುಗನದೊಡ್ಡಿ ಗ್ರಾಮಸ್ಥರ ಮನೆಗಳಿಗೆ ಹಕ್ಕು ಪತ್ರವಿಲ್ಲ. ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ಜಾಗವನ್ನು ತಮ್ಮದು ಎಂದು ತೊಂದರೆ ನೀಡುತ್ತಿದ್ದಾನೆ ಎಂದು ಗ್ರಾಮಸ್ಥರು ಶಾಸಕ ಇಕ್ಬಾಲ್ ಹುಸೇನ್ ಬಳಿ ಅವಲತ್ತುಕೊಂಡರು.</p>.<p>ಗ್ರಾಮದಲ್ಲಿ 50 ಕುಟುಂಬಗಳು ವಾಸಿಸುತ್ತಿವೆ. ಯಾರಿಗೂ ಹಕ್ಕುಪತ್ರ ನೀಡಿಲ್ಲ. ಖಾಸಗಿ ವ್ಯಕ್ತಿಯೊಬ್ಬ ಗ್ರಾಮಸ್ಥರಿಗೆ ಇನ್ನಿಲ್ಲದ ತೊಂದರೆ ನೀಡುತ್ತಿದ್ದಾನೆ. ಶಾಸಕರು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಅವಲತ್ತುಕೊಂಡರು. </p>.<p>ಗ್ರಾಮದಲ್ಲಿ ತಂಗುದಾಣ ನಿರ್ಮಿಸುವ ಕೆಲಸ ಮಾಡಬೇಕು. ಸರ್ಕಾರ ಅನ್ನ ಭಾಗ್ಯದಡಿ ಅಕ್ಕಿ ವಿತರಿಸುತ್ತಿದೆ. ಅಕ್ಕಿ ಪಡೆಯಲು 6 ಕಿ.ಮೀ ಸಾಗಬೇಕು. ಮತ ಹಾಕಲೂ ತಟ್ಟೆಕೆರೆಗೆ ಹೋಗಬೇಕು. ಗಡಿ ಗ್ರಾಮವಾದ್ದರಿಂದ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಗ್ರಾಮದಲ್ಲಿ ಸ್ಮಶಾನ ವ್ಯವಸ್ಥೆಯೂ ಇಲ್ಲ ಎಂದು ಗ್ರಾಮಸ್ಥರು ಕಷ್ಟ ಹೇಳಿಕೊಂಡರು.</p>.<p>ಇದೇ ವೇಳೆ ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ಈಗಾಗಲೇ ಅಧಿಕಾರಿಗಳಿಗೆ ಸ್ಮಶಾನಕ್ಕೆ ಜಾಗ ಗುರುತಿಸುವಂತೆ ನಿರ್ದೇಶನ ನೀಡಲಾಗಿದೆ. ಗ್ರಾಮಸ್ಥರು ಯಾರೂ ಸಹ ಮನೆ ಖಾಲಿ ಮಾಡಬೇಕಾದ ಅವಶ್ಯವಿಲ್ಲ. ಹಕ್ಕುಪತ್ರ ವಿಚಾರದಲ್ಲೂ ಹೆದರುವ ಅವಶ್ಯವಿಲ್ಲ ಎಂದರು.</p>.<p>ಗ್ರಾಮಸ್ಥರಾದ ಲಕ್ಕಪ್ಪ, ತಾ.ಪಂ ಮಾಜಿ ಸದಸ್ಯ ಶಿವನಯ್ಯ, ಪಿಡಿಒ ರಘು ಸೇರಿದಂತೆ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ಉರುಗನದೊಡ್ಡಿ ಗ್ರಾಮಸ್ಥರ ಮನೆಗಳಿಗೆ ಹಕ್ಕು ಪತ್ರವಿಲ್ಲ. ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ಜಾಗವನ್ನು ತಮ್ಮದು ಎಂದು ತೊಂದರೆ ನೀಡುತ್ತಿದ್ದಾನೆ ಎಂದು ಗ್ರಾಮಸ್ಥರು ಶಾಸಕ ಇಕ್ಬಾಲ್ ಹುಸೇನ್ ಬಳಿ ಅವಲತ್ತುಕೊಂಡರು.</p>.<p>ಗ್ರಾಮದಲ್ಲಿ 50 ಕುಟುಂಬಗಳು ವಾಸಿಸುತ್ತಿವೆ. ಯಾರಿಗೂ ಹಕ್ಕುಪತ್ರ ನೀಡಿಲ್ಲ. ಖಾಸಗಿ ವ್ಯಕ್ತಿಯೊಬ್ಬ ಗ್ರಾಮಸ್ಥರಿಗೆ ಇನ್ನಿಲ್ಲದ ತೊಂದರೆ ನೀಡುತ್ತಿದ್ದಾನೆ. ಶಾಸಕರು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಅವಲತ್ತುಕೊಂಡರು. </p>.<p>ಗ್ರಾಮದಲ್ಲಿ ತಂಗುದಾಣ ನಿರ್ಮಿಸುವ ಕೆಲಸ ಮಾಡಬೇಕು. ಸರ್ಕಾರ ಅನ್ನ ಭಾಗ್ಯದಡಿ ಅಕ್ಕಿ ವಿತರಿಸುತ್ತಿದೆ. ಅಕ್ಕಿ ಪಡೆಯಲು 6 ಕಿ.ಮೀ ಸಾಗಬೇಕು. ಮತ ಹಾಕಲೂ ತಟ್ಟೆಕೆರೆಗೆ ಹೋಗಬೇಕು. ಗಡಿ ಗ್ರಾಮವಾದ್ದರಿಂದ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಗ್ರಾಮದಲ್ಲಿ ಸ್ಮಶಾನ ವ್ಯವಸ್ಥೆಯೂ ಇಲ್ಲ ಎಂದು ಗ್ರಾಮಸ್ಥರು ಕಷ್ಟ ಹೇಳಿಕೊಂಡರು.</p>.<p>ಇದೇ ವೇಳೆ ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ಈಗಾಗಲೇ ಅಧಿಕಾರಿಗಳಿಗೆ ಸ್ಮಶಾನಕ್ಕೆ ಜಾಗ ಗುರುತಿಸುವಂತೆ ನಿರ್ದೇಶನ ನೀಡಲಾಗಿದೆ. ಗ್ರಾಮಸ್ಥರು ಯಾರೂ ಸಹ ಮನೆ ಖಾಲಿ ಮಾಡಬೇಕಾದ ಅವಶ್ಯವಿಲ್ಲ. ಹಕ್ಕುಪತ್ರ ವಿಚಾರದಲ್ಲೂ ಹೆದರುವ ಅವಶ್ಯವಿಲ್ಲ ಎಂದರು.</p>.<p>ಗ್ರಾಮಸ್ಥರಾದ ಲಕ್ಕಪ್ಪ, ತಾ.ಪಂ ಮಾಜಿ ಸದಸ್ಯ ಶಿವನಯ್ಯ, ಪಿಡಿಒ ರಘು ಸೇರಿದಂತೆ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>