<p><strong>ಚನ್ನಪಟ್ಟಣ</strong>: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಫುಟ್ಬಾಲ್ ಆಟವಾಡುವಾಗ ದಿಢೀರ್ ಭೂಕುಸಿತ ಉಂಟಾಗಿ ಸುಮಾರು 6 ಅಡಿಗಳಷ್ಟು ಆಳದ ಹೊಂಡವೊಂದು ಸೃಷ್ಠಿಯಾಗಿ ಆಟಗಾರನೊಬ್ಬ ಹೊಂಡಕ್ಕೆ ಬಿದ್ದ ಘಟನೆ ಶನಿವಾರ ನಡೆದಿದೆ.</p>.<p>ಕಾಲೇಜಿನ ಹಾಗೂ ಪ್ರೌಢಶಾಲಾ ವಿಭಾಗದ ಕ್ರೀಡಾಪಟುಗಳು, ಸಾರ್ವಜನಿಕರು, ಕ್ರೀಡಾಭಿಮಾನಿಗಳು ಕ್ರೀಡೆಗಾಗಿ ಬಳಸಲು ಹಾಗೂ ಪ್ರಾಥಮಿಕ, ಪ್ರೌಢ ಮತ್ತು ಕಾಲೇಜು ಹಂತದ ಕ್ರೀಡೆಗಳನ್ನು ನಡೆಸಲು ನಗರದಲ್ಲಿ ಇರುವ ಏಕೈಕ ಕ್ರೀಡಾಂಗಣ ಇದಾಗಿದ್ದು, ಇಲ್ಲಿ ಏಕಾಏಕಿ ಭೂಕುಸಿತ ಉಂಟಾಗಿರುವುದು ಆತಂಕ ಸೃಷ್ಠಿಸಿದೆ.</p>.<p>ಕಾಲೇಜು ಆವರಣದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕ್ರಮ, ತಾಲ್ಲೂಕು ಆಡಳಿತದ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯುವ ಕಾರಣ ವೇದಿಕೆ ಸಿದ್ಧಗೊಳಿಸಲು ಭೂಮಿಯನ್ನು ಸಡಿಲ ಮಾಡಿದ್ದೇ ಇದಕ್ಕೆ ಕಾರಣ ಎಂದು ಅಂದಾಜಿಸಲಾಗಿದೆ.</p>.<p>ವಿಷಯ ತಿಳಿದು ತಹಶೀಲ್ದಾರ್ ನರಸಿಂಹಮೂರ್ತಿ ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಜಾಗದಲ್ಲಿ ಕಾಲೇಜು ಪ್ರಾರಂಭಕ್ಕೂ ಮೊದಲು ಹೊಲಗದ್ದೆಗಳು ಇದ್ದ ಕಾರಣ ರೈತರು ತಾವು ಬೆಳೆದ ಬೆಳೆಗಳನ್ನು ತುಂಬಿಸಲು ಕುಣಿಗಳನ್ನು (ಭೂಮಿಯಲ್ಲಿ ಧಾನ್ಯಸಂಗ್ರಹಿಸಲು ಮಾಡುತ್ತಿದ್ದ ಕುಣಿ) ತೆಗೆದಿರಬಹುದು. ಅದು ಈಗ ಭೂಮಿಕುಸಿತವಾಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.</p>.<p>ಈ ಬಗ್ಗೆ ಪ್ರಾಚ್ಯ ವಸ್ತು ಸಂಶೋಧನಾ ಇಲಾಖೆಗೆ ವಿಷಯ ತಿಳಿಸಲಾಗಿದೆ. ಇದರ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಫುಟ್ಬಾಲ್ ಆಟವಾಡುವಾಗ ದಿಢೀರ್ ಭೂಕುಸಿತ ಉಂಟಾಗಿ ಸುಮಾರು 6 ಅಡಿಗಳಷ್ಟು ಆಳದ ಹೊಂಡವೊಂದು ಸೃಷ್ಠಿಯಾಗಿ ಆಟಗಾರನೊಬ್ಬ ಹೊಂಡಕ್ಕೆ ಬಿದ್ದ ಘಟನೆ ಶನಿವಾರ ನಡೆದಿದೆ.</p>.<p>ಕಾಲೇಜಿನ ಹಾಗೂ ಪ್ರೌಢಶಾಲಾ ವಿಭಾಗದ ಕ್ರೀಡಾಪಟುಗಳು, ಸಾರ್ವಜನಿಕರು, ಕ್ರೀಡಾಭಿಮಾನಿಗಳು ಕ್ರೀಡೆಗಾಗಿ ಬಳಸಲು ಹಾಗೂ ಪ್ರಾಥಮಿಕ, ಪ್ರೌಢ ಮತ್ತು ಕಾಲೇಜು ಹಂತದ ಕ್ರೀಡೆಗಳನ್ನು ನಡೆಸಲು ನಗರದಲ್ಲಿ ಇರುವ ಏಕೈಕ ಕ್ರೀಡಾಂಗಣ ಇದಾಗಿದ್ದು, ಇಲ್ಲಿ ಏಕಾಏಕಿ ಭೂಕುಸಿತ ಉಂಟಾಗಿರುವುದು ಆತಂಕ ಸೃಷ್ಠಿಸಿದೆ.</p>.<p>ಕಾಲೇಜು ಆವರಣದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕ್ರಮ, ತಾಲ್ಲೂಕು ಆಡಳಿತದ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯುವ ಕಾರಣ ವೇದಿಕೆ ಸಿದ್ಧಗೊಳಿಸಲು ಭೂಮಿಯನ್ನು ಸಡಿಲ ಮಾಡಿದ್ದೇ ಇದಕ್ಕೆ ಕಾರಣ ಎಂದು ಅಂದಾಜಿಸಲಾಗಿದೆ.</p>.<p>ವಿಷಯ ತಿಳಿದು ತಹಶೀಲ್ದಾರ್ ನರಸಿಂಹಮೂರ್ತಿ ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಜಾಗದಲ್ಲಿ ಕಾಲೇಜು ಪ್ರಾರಂಭಕ್ಕೂ ಮೊದಲು ಹೊಲಗದ್ದೆಗಳು ಇದ್ದ ಕಾರಣ ರೈತರು ತಾವು ಬೆಳೆದ ಬೆಳೆಗಳನ್ನು ತುಂಬಿಸಲು ಕುಣಿಗಳನ್ನು (ಭೂಮಿಯಲ್ಲಿ ಧಾನ್ಯಸಂಗ್ರಹಿಸಲು ಮಾಡುತ್ತಿದ್ದ ಕುಣಿ) ತೆಗೆದಿರಬಹುದು. ಅದು ಈಗ ಭೂಮಿಕುಸಿತವಾಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.</p>.<p>ಈ ಬಗ್ಗೆ ಪ್ರಾಚ್ಯ ವಸ್ತು ಸಂಶೋಧನಾ ಇಲಾಖೆಗೆ ವಿಷಯ ತಿಳಿಸಲಾಗಿದೆ. ಇದರ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>