ಚನ್ನಪಟ್ಟಣ: ತಾಲ್ಲೂಕಿನ ಬೈರಾಪಟ್ಟಣ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ಜೀವಿತಾ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಬಿ.ಕೆ. ಸಂತೋಷ್ ಅವರು ಮಂಗಳವಾರ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಿದರು.
ಖಾಸಗಿ ಹೋಟೆಲ್ವೊಂದರಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಬಿ.ಟಿ. ಶಿವಕುಮಾರ್ ಅವರ ಪುತ್ರಿ ಜೀವಿತಾ ಅವರಿಗೆ ಲ್ಯಾಪ್ ಟ್ಯಾಪ್ ವಿತರಿಸಿದರು.
ಜೀವಿತಾ ಬಿ.ಇ ವ್ಯಾಸಂಗ ಮಾಡುತ್ತಿದ್ದು, ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ಬೈರಾಪಟ್ಟಣ ಕಾಂಗ್ರೆಸ್ ಟೀಂ ವತಿಯಿಂದ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇದೇ ರೀತಿ ಹಂತ ಹಂತವಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರ್ತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಾಗುವುದು ಎಂದು ಸಂತೋಷ್ ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಸಂಕಲಗೆರೆ ಕೃಷ್ಣಪ್ಪ, ಬೆಳಕೆರೆ ಬಿ.ಎಸ್. ಮಂಜು, ಬೈರಾಪಟ್ಟಣ ಗ್ರಾಮದ ಯುವ ಕಾಂಗ್ರೆಸ್ ಮುಖಂಡರಾದ ಮದನ್, ಸಿದ್ದಲಿಂಗೇಗೌಡ, ಸುಮೇದ್, ವೆಂಕಟೇಶ್, ಶರತ್, ಸಿದ್ದರಾಜು ಇತರರು ಭಾಗವಹಿಸಿದ್ದರು.