ಮುಖ್ಯಮಂತ್ರಿಗಳ 50 ಕೋಟಿ ವಿಶೇಷ ಅನುದಾನದ ಅಡಿ ವಿವಿಧ ಕಾಮಗಾರಿಗೆ ಚಾಲನೆ ನೀಡಲು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಶನಿವಾರ ಬೆಳಿಗ್ಗೆ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಗ್ರಾಮಕ್ಕೆ ಆಗಮಿಸಿದ್ದರು. ಸ್ಥಳೀಯ ಶಾಸಕರಾದ ಎಚ್.ಡಿ. ಕುಮಾರಸ್ವಾಮಿ ಅವರನ್ನೇ ದೂರ ಇಟ್ಟು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಯೋಗೇಶ್ವರ್ ಕಾರಿಗೆ ಮುತ್ತಿಗೆ ಹಾಕಿದರು. ಕಲ್ಲು ಹಾಗೂ ಮೊಟ್ಟೆ ಎಸೆದರು. ನೆರೆದಿದ್ದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.