ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಮ್ಮೇಳನ ಉದ್ಘಾಟಿಸಲಿದ್ದು, ಅಖಿಲ ಭಾರತ ವಕೀಲರ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಿಕಾಸ್ ರಂಜನ್ ಭಟ್ಟಾಚಾರ್ಯ, ರಾಜ್ಯ ಘಟಕದ ಅಧ್ಯಕ್ಷ ಎಸ್.ಶಂಕರಪ್ಪ, ಕರ್ನಾಟಕ ಬಾರ್ ಕೌನ್ಸಿಲ್ ಅಧ್ಯಕ್ಷ ಕೃಷ್ಣಪ್ಪ ಭೀಮಪ್ಪ ನಾಯಕ್, ಉಪಾಧ್ಯಕ್ಷ ಬಿ.ವಿ.ಶ್ರೀನಿವಾಸ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.